March 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಸಂಸ್ಕಾರ ಭಾರತಿ ಮತ್ತು ಹನುಮೋತ್ಸವ ಸಮಿತಿ ಅಳದಂಗಡಿ ವತಿಯಿಂದ ಹನುಮೋತ್ಸವದ ಪೂರ್ವಭಾವಿ ಸಭೆ

ಅಳದಂಗಡಿ : ಸಂಸ್ಕಾರ ಭಾರತಿ ಬೆಳ್ತಂಗಡಿ ಮತ್ತು ಹನುಮೋತ್ಸವ ಸಮಿತಿ ಅಳದಂಗಡಿ ವತಿಯಿಂದ ಪಿಲ್ಯ ಮಹಮ್ಮಾಯೀ ಭಜನಾ ಮಂದಿರದಲ್ಲಿ ಕಾರ್ಯಕ್ರಮದ ಯಶಸ್ವಿಗೆ ಪೂರ್ವಭಾವಿ ಸಭೆ ನಡೆಯಿತು. ನಾವರ ಪಿಲ್ಯ, ಸುಲ್ಕೇರಿ, ಕುದ್ಯಾಡಿ ಗ್ರಾಮದ ಉಸ್ತುವಾರಿಗಳ ಸಭೆಯನ್ನು ಕರೆಯಲಾಗಿತ್ತು.

ಸಭೆಯಲ್ಲಿ ಅಳದಂಗಡಿ ಶ್ರೀ ಕ್ಲಿನಿಕ್ ಇಲ್ಲಿಯ ಪ್ರಸಿದ್ಧ ವೈದ್ಯರಾದ ಡಾ.ಎನ್.ಎಮ್ ತುಳುಪುಳೆ ಎ. 12 ರಂದು ಅಳದಂಗಡಿಯಲ್ಲಿ ನಡೆಯುವ ಹನುಮೋತ್ಸವ 2025 ರ ಲಾಂಛನ ಬಿಡುಗಡೆ ಮಾಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಭಜನಾ ಮಂದಿರದ ಅರ್ಚಕರಾದ ಶೇಷಗಿರಿ ಭಟ್ ಕಾರ್ಯಕ್ರಮದ ಯಶಸ್ವಿಗಾಗಿ ದೇವರಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಸಂಸ್ಕಾರ ಭಾರತಿ ತಾಲೂಕು ಅಧ್ಯಕ್ಷ ಸಂಪತ್ ಬಿ.ಸುವರ್ಣ ಹನುಮೋತ್ಸವದ ಬಗ್ಗೆ ಸವಿವರವಾದ ಮಾಹಿತಿ ನೀಡಿ ಸಂಪೂರ್ಣವಾಗಿ ಹನುಮೋತ್ಸವ ಯಶಸ್ವಿಯಾಗಲು ಪ್ರತೀ ಗ್ರಾಮದ ಹಿಂದೂ ಮನೆಗಳಿಗೂ ಆಮಂತ್ರಣ ಪತ್ರಿಕೆ ತಲುಪಿಸಬೇಕು ಮತ್ತು ಯಾಗದಲ್ಲಿ ವೃತಧಾರಿಗಳು ಭಾಗವಹಿಸುವಂತೆ ಮಾಡಬೇಕೆಂದು ಕೇಳಿಕೊಂಡರು.

ಸಮಾಲೋಚನಾ ಸಭೆಯಲ್ಲಿ ಸುಲ್ಕೇರಿ ಗ್ರಾ.ಪಂ‌.ಉಪಾಧ್ಯಕ್ಷ ಶುಭಕರ ಬಂಗೇರ ಸತೀಶ್ ಶಿರ್ಲಾಲು, ವಿಶ್ವನಾಥ ಬಂಗೇರ, ರಾಜೇಶ್ ಬುಣ್ಣಾನ್, ಉಮೇಶ್ ಸುವರ್ಣ, ಹರೀಶ್ ಕಲ್ಲಾಜೆ ಪ್ರಶಾಂತ ಕರಂಬಾರು, ಸುಮನಾಜ ಪಾಡಿಪಿಲ್ಯ, ಆನಂದ ಪೂಜಾರಿ ಮಣಿಕಂಠ, ಶೈಲೇಶ್ ಪಾಡಿಪಿಲ್ಯ, ಸುಧೀರ್ ಪಾಡಿಪಿಲ್ಯ, ಪುನೀತ್ ಬಂಗೇರ, ಉಮೇಶ್ ಬಂಗೇರ, ಸತೀಶ್ ಬಂಗೇರ ದುಗ್ಗಲಚ್ಚಿಲ್, ಅವಿನಾಶ್ ಪಂಚರತ್ನ ನಾರಾಯಣ ಪೂಜಾರಿ ಪರಾರಿ, ರವಿ ಪೂಜಾರಿ ನಾವರ, ರಮಾನಾಥ ಪಾದೆಮಾರಡ್ಡ, ಮುಂತಾದ ಪ್ರಮುಖರು ಭಾಗವಹಿಸಿದ್ದರು.

ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ನಾವರ ಸ್ವಾಗತಿಸಿ , ಸಂಚಾಲಕ ನಿತ್ಯಾನಂದ ಎನ್ ನಾವರ ಧನ್ಯವಾದ ಸಲ್ಲಿಸಿದರು.

Related posts

ಡಿ.7 ಧರ್ಮಸ್ಥಳದಲ್ಲಿ ಪದಾಧಿಕಾರಿಗಳ ಸಹಮಿಲನ ಹಾಗೂ ವ್ಯಸನ ಮುಕ್ತರ ಕುಟುಂಬೋತ್ಸವ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಉಜಿರೆ: ಎಸ್.ಡಿ.ಎಂ ವಸತಿ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನ ಆಚರಣೆ

Suddi Udaya

ಮಹಾಕುಂಭಮೇಳದಲ್ಲಿ ಉಜಿರೆ ಎಸ್.ಡಿ.ಎಂ ಆಸ್ಪತ್ರೆಯ ಸಿಬ್ಬಂದಿಗಳಿಂದ ಪುಣ್ಯ ಸ್ನಾನ

Suddi Udaya

ಪತ್ರಕರ್ತ ರಂಜಿತ್ ಮಡಂತ್ಯಾರ್ ರಿಗೆ ರಾಜ್ಯ ಮಟ್ಟದ ಯುವ ಸಾಧಕ ಪ್ರಶಸ್ತಿ

Suddi Udaya

ಎಸ್ ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ರವರಿಗೆ ‘ಸಹಕಾರ ಭೂಷಣ’ ಪ್ರಶಸ್ತಿ

Suddi Udaya
error: Content is protected !!