May 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಸಂಸ್ಕಾರ ಭಾರತಿ ಮತ್ತು ಹನುಮೋತ್ಸವ ಸಮಿತಿ ಅಳದಂಗಡಿ ವತಿಯಿಂದ ಹನುಮೋತ್ಸವದ ಪೂರ್ವಭಾವಿ ಸಭೆ

ಅಳದಂಗಡಿ : ಸಂಸ್ಕಾರ ಭಾರತಿ ಬೆಳ್ತಂಗಡಿ ಮತ್ತು ಹನುಮೋತ್ಸವ ಸಮಿತಿ ಅಳದಂಗಡಿ ವತಿಯಿಂದ ಪಿಲ್ಯ ಮಹಮ್ಮಾಯೀ ಭಜನಾ ಮಂದಿರದಲ್ಲಿ ಕಾರ್ಯಕ್ರಮದ ಯಶಸ್ವಿಗೆ ಪೂರ್ವಭಾವಿ ಸಭೆ ನಡೆಯಿತು. ನಾವರ ಪಿಲ್ಯ, ಸುಲ್ಕೇರಿ, ಕುದ್ಯಾಡಿ ಗ್ರಾಮದ ಉಸ್ತುವಾರಿಗಳ ಸಭೆಯನ್ನು ಕರೆಯಲಾಗಿತ್ತು.

ಸಭೆಯಲ್ಲಿ ಅಳದಂಗಡಿ ಶ್ರೀ ಕ್ಲಿನಿಕ್ ಇಲ್ಲಿಯ ಪ್ರಸಿದ್ಧ ವೈದ್ಯರಾದ ಡಾ.ಎನ್.ಎಮ್ ತುಳುಪುಳೆ ಎ. 12 ರಂದು ಅಳದಂಗಡಿಯಲ್ಲಿ ನಡೆಯುವ ಹನುಮೋತ್ಸವ 2025 ರ ಲಾಂಛನ ಬಿಡುಗಡೆ ಮಾಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಭಜನಾ ಮಂದಿರದ ಅರ್ಚಕರಾದ ಶೇಷಗಿರಿ ಭಟ್ ಕಾರ್ಯಕ್ರಮದ ಯಶಸ್ವಿಗಾಗಿ ದೇವರಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಸಂಸ್ಕಾರ ಭಾರತಿ ತಾಲೂಕು ಅಧ್ಯಕ್ಷ ಸಂಪತ್ ಬಿ.ಸುವರ್ಣ ಹನುಮೋತ್ಸವದ ಬಗ್ಗೆ ಸವಿವರವಾದ ಮಾಹಿತಿ ನೀಡಿ ಸಂಪೂರ್ಣವಾಗಿ ಹನುಮೋತ್ಸವ ಯಶಸ್ವಿಯಾಗಲು ಪ್ರತೀ ಗ್ರಾಮದ ಹಿಂದೂ ಮನೆಗಳಿಗೂ ಆಮಂತ್ರಣ ಪತ್ರಿಕೆ ತಲುಪಿಸಬೇಕು ಮತ್ತು ಯಾಗದಲ್ಲಿ ವೃತಧಾರಿಗಳು ಭಾಗವಹಿಸುವಂತೆ ಮಾಡಬೇಕೆಂದು ಕೇಳಿಕೊಂಡರು.

ಸಮಾಲೋಚನಾ ಸಭೆಯಲ್ಲಿ ಸುಲ್ಕೇರಿ ಗ್ರಾ.ಪಂ‌.ಉಪಾಧ್ಯಕ್ಷ ಶುಭಕರ ಬಂಗೇರ ಸತೀಶ್ ಶಿರ್ಲಾಲು, ವಿಶ್ವನಾಥ ಬಂಗೇರ, ರಾಜೇಶ್ ಬುಣ್ಣಾನ್, ಉಮೇಶ್ ಸುವರ್ಣ, ಹರೀಶ್ ಕಲ್ಲಾಜೆ ಪ್ರಶಾಂತ ಕರಂಬಾರು, ಸುಮನಾಜ ಪಾಡಿಪಿಲ್ಯ, ಆನಂದ ಪೂಜಾರಿ ಮಣಿಕಂಠ, ಶೈಲೇಶ್ ಪಾಡಿಪಿಲ್ಯ, ಸುಧೀರ್ ಪಾಡಿಪಿಲ್ಯ, ಪುನೀತ್ ಬಂಗೇರ, ಉಮೇಶ್ ಬಂಗೇರ, ಸತೀಶ್ ಬಂಗೇರ ದುಗ್ಗಲಚ್ಚಿಲ್, ಅವಿನಾಶ್ ಪಂಚರತ್ನ ನಾರಾಯಣ ಪೂಜಾರಿ ಪರಾರಿ, ರವಿ ಪೂಜಾರಿ ನಾವರ, ರಮಾನಾಥ ಪಾದೆಮಾರಡ್ಡ, ಮುಂತಾದ ಪ್ರಮುಖರು ಭಾಗವಹಿಸಿದ್ದರು.

ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ನಾವರ ಸ್ವಾಗತಿಸಿ , ಸಂಚಾಲಕ ನಿತ್ಯಾನಂದ ಎನ್ ನಾವರ ಧನ್ಯವಾದ ಸಲ್ಲಿಸಿದರು.

Related posts

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯ ಬೇಸಿಗೆ ಶಿಬಿರಕ್ಕೆ ಚಾಲನೆ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಹೆಗ್ಗಡೆಯವರಿಗೆ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಗೌರವ ಪ್ರಶಸ್ತಿ: ಸಿರಿ ಸಿಬ್ಬಂದಿಗಳಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ಇಳಂತಿಲ ಗ್ರಾಮ ಪಂಚಾಯತ್ ಉಪ ಚುನಾವಣೆ: ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿಯಾಗಿ ಕುಸುಮ ಈಶ್ವರ ಗೌಡ ಕಣಕ್ಕೆ

Suddi Udaya

ಸದ್ದು ಗದ್ದಲದೊಂದಿಗೆ ಪ್ರಾರಂಭಗೊಂಡ ಶಿರ್ಲಾಲು ಗ್ರಾಮಸಭೆ

Suddi Udaya

ಕರಾಟೆ ಪಂದ್ಯಾಟ: ಉಜಿರೆ ಎಸ್.ಡಿ.ಎಂ. ಶಾಲೆಯ ವಿದ್ಯಾರ್ಥಿ ಚರಣ್ ಜೈನ್ ಬಂಗಾಡಿ ಪ್ರಥಮ ಸ್ಥಾನ

Suddi Udaya

ಗುರುವಾಯನಕೆರೆ: ಅನಾರೋಗ್ಯದಿಂದ ಬಳಲುತ್ತಿರುವ ಆಟೋ ಚಾಲಕ ರಾಜೇಶ್ ಪೂಜಾರಿಯವರಿಗೆ ಕುವೆಟ್ಟು ಬಿಜೆಪಿ ಶಕ್ತಿ ಕೇಂದ್ರ ಹಾಗೂ ಸಾಯಿರಾಮ್ ಫ್ರೆಂಡ್ಸ್ ಶಕ್ತಿನಗರ ವತಿಯಿಂದ ರೂ. 25 ಸಾವಿರ ವೈದ್ಯಕೀಯ ನೆರವು ಹಸ್ತಾಂತರ

Suddi Udaya
error: Content is protected !!