23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಸಂಸ್ಕಾರ ಭಾರತಿ ಮತ್ತು ಹನುಮೋತ್ಸವ ಸಮಿತಿ ಅಳದಂಗಡಿ ವತಿಯಿಂದ ಹನುಮೋತ್ಸವದ ಪೂರ್ವಭಾವಿ ಸಭೆ

ಅಳದಂಗಡಿ : ಸಂಸ್ಕಾರ ಭಾರತಿ ಬೆಳ್ತಂಗಡಿ ಮತ್ತು ಹನುಮೋತ್ಸವ ಸಮಿತಿ ಅಳದಂಗಡಿ ವತಿಯಿಂದ ಪಿಲ್ಯ ಮಹಮ್ಮಾಯೀ ಭಜನಾ ಮಂದಿರದಲ್ಲಿ ಕಾರ್ಯಕ್ರಮದ ಯಶಸ್ವಿಗೆ ಪೂರ್ವಭಾವಿ ಸಭೆ ನಡೆಯಿತು. ನಾವರ ಪಿಲ್ಯ, ಸುಲ್ಕೇರಿ, ಕುದ್ಯಾಡಿ ಗ್ರಾಮದ ಉಸ್ತುವಾರಿಗಳ ಸಭೆಯನ್ನು ಕರೆಯಲಾಗಿತ್ತು.

ಸಭೆಯಲ್ಲಿ ಅಳದಂಗಡಿ ಶ್ರೀ ಕ್ಲಿನಿಕ್ ಇಲ್ಲಿಯ ಪ್ರಸಿದ್ಧ ವೈದ್ಯರಾದ ಡಾ.ಎನ್.ಎಮ್ ತುಳುಪುಳೆ ಎ. 12 ರಂದು ಅಳದಂಗಡಿಯಲ್ಲಿ ನಡೆಯುವ ಹನುಮೋತ್ಸವ 2025 ರ ಲಾಂಛನ ಬಿಡುಗಡೆ ಮಾಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಭಜನಾ ಮಂದಿರದ ಅರ್ಚಕರಾದ ಶೇಷಗಿರಿ ಭಟ್ ಕಾರ್ಯಕ್ರಮದ ಯಶಸ್ವಿಗಾಗಿ ದೇವರಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಸಂಸ್ಕಾರ ಭಾರತಿ ತಾಲೂಕು ಅಧ್ಯಕ್ಷ ಸಂಪತ್ ಬಿ.ಸುವರ್ಣ ಹನುಮೋತ್ಸವದ ಬಗ್ಗೆ ಸವಿವರವಾದ ಮಾಹಿತಿ ನೀಡಿ ಸಂಪೂರ್ಣವಾಗಿ ಹನುಮೋತ್ಸವ ಯಶಸ್ವಿಯಾಗಲು ಪ್ರತೀ ಗ್ರಾಮದ ಹಿಂದೂ ಮನೆಗಳಿಗೂ ಆಮಂತ್ರಣ ಪತ್ರಿಕೆ ತಲುಪಿಸಬೇಕು ಮತ್ತು ಯಾಗದಲ್ಲಿ ವೃತಧಾರಿಗಳು ಭಾಗವಹಿಸುವಂತೆ ಮಾಡಬೇಕೆಂದು ಕೇಳಿಕೊಂಡರು.

ಸಮಾಲೋಚನಾ ಸಭೆಯಲ್ಲಿ ಸುಲ್ಕೇರಿ ಗ್ರಾ.ಪಂ‌.ಉಪಾಧ್ಯಕ್ಷ ಶುಭಕರ ಬಂಗೇರ ಸತೀಶ್ ಶಿರ್ಲಾಲು, ವಿಶ್ವನಾಥ ಬಂಗೇರ, ರಾಜೇಶ್ ಬುಣ್ಣಾನ್, ಉಮೇಶ್ ಸುವರ್ಣ, ಹರೀಶ್ ಕಲ್ಲಾಜೆ ಪ್ರಶಾಂತ ಕರಂಬಾರು, ಸುಮನಾಜ ಪಾಡಿಪಿಲ್ಯ, ಆನಂದ ಪೂಜಾರಿ ಮಣಿಕಂಠ, ಶೈಲೇಶ್ ಪಾಡಿಪಿಲ್ಯ, ಸುಧೀರ್ ಪಾಡಿಪಿಲ್ಯ, ಪುನೀತ್ ಬಂಗೇರ, ಉಮೇಶ್ ಬಂಗೇರ, ಸತೀಶ್ ಬಂಗೇರ ದುಗ್ಗಲಚ್ಚಿಲ್, ಅವಿನಾಶ್ ಪಂಚರತ್ನ ನಾರಾಯಣ ಪೂಜಾರಿ ಪರಾರಿ, ರವಿ ಪೂಜಾರಿ ನಾವರ, ರಮಾನಾಥ ಪಾದೆಮಾರಡ್ಡ, ಮುಂತಾದ ಪ್ರಮುಖರು ಭಾಗವಹಿಸಿದ್ದರು.

ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ನಾವರ ಸ್ವಾಗತಿಸಿ , ಸಂಚಾಲಕ ನಿತ್ಯಾನಂದ ಎನ್ ನಾವರ ಧನ್ಯವಾದ ಸಲ್ಲಿಸಿದರು.

Related posts

ನಾಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಮಾಗಮ

Suddi Udaya

ಮಲವಂತಿಗೆ: ರೂ.4ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ರಸ್ತೆ – ಸೇತುವೆ ಲೋಕಾರ್ಪಣೆ

Suddi Udaya

ಶಿಶಿಲ ಗ್ರಾಮ ಪಂಚಾಯತ್‌ನಲ್ಲಿ ರೈತರ ಸದಸ್ಯತ್ವ ನೋಂದಾವಣೆ ಮತ್ತು ರೈತರಿಗೆ ಮಾಹಿತಿ ಕಾರ್ಯಕ್ರಮ

Suddi Udaya

ಅಳದಂಗಡಿ: ಬಡಗಕಾರಂದೂರು ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಸೋಣಂದೂರು ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ ಆಶಕ್ತ ಬಡ ವಿದ್ಯಾರ್ಥಿಗಳಿಗೆ ಮತ್ತು ಅಂಗನವಾಡಿ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಎ.30 ಉಜಿರೆಯಲ್ಲಿ‌ ಬೃಹತ್ ರಕ್ತದಾನ ಶಿಬಿರ

Suddi Udaya
error: Content is protected !!