July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದಿ‌.ಎನ್ ಪದ್ಮನಾಭ ಮಾಣಿಂಜರಿಗೆ ಶ್ರೀ ಗುರುದೇವ ಸಹಕಾರಿ ಸಂಘದಿಂದ ನುಡಿನಮನ

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಅಧ್ಯಕ್ಷ,ನಿವೃತ್ತ ಡಿಎಫ್‌ಓ, ಅದಮ್ಯ ಚೇತನ ಅಮರತ್ವದೆಡೆಗೆ ದಿ. ಎನ್.ಪದ್ಮನಾಭ ಮಾಣಿಂಜರವರಿಗೆ ಶ್ರೀ ಗುರುದೇವ ಸಹಕಾರಿ ಸಂಘದಿಂದ ನುಡಿನಮನ ಶ್ರದ್ಧಾಂಜಲಿ ಕಾರ್ಯಕ್ರಮ ಮಾ.15 ರಂದು ಬೆಳ್ತಂಗಡಿ ಶ್ರೀಗುರು ಸಾನಿಧ್ಯ ಸಭಾಭವನದಲ್ಲಿ ನಡೆಯಿತು.

ಬೆಂಗಳೂರು ಆರ್ಯ ಈಡಿಗ ಮಹಾ ಸಂಸ್ಥಾನ ಸೋಲೂರು ಮಠ ಪೀಠಾಧಿಪತಿ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆರ್ಶೀವಚನ ನೀಡಿ ನಿರಂತರ ಉನ್ನತಿ ಹಾಗೂ ಒಳಿತಿನ ಚಿಂತನೆ ಮಾಡುವ ಮನಸ್ಸು ಪದ್ಮನಾಭರವರು.ಸಮಾಜದ ಬಗ್ಗೆ ಕಾಳಜಿ,ಹಿತ ಚಿಂತನೆ ಮಾಡಿದ ನಿಜವಾದ ರಾಜರ್ಷಿ ಪದ್ಮನಾಭರವರು ಎಂದು ನುಡಿದರು.

ಸಂಘದ ಉಪಾಧ್ಯಕ್ಷ ಭಗೀರಥ ಜಿ. ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ಕುದ್ರೋಳಿ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್ ಪೂಜಾರಿ, ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘ ಉಜಿರೆಯ ಅಧ್ಯಕ್ಷ ಶ್ರೀಧರ ಜಿ.ಭಿಡೆ, ಹಿರಿಯ ಪುತ್ರ ಸುಧೀರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ಸುಜಿತಾ ವಿ ಬಂಗೇರ, ಕೆ.ಪಿ.ದಿವಾಕರ, ಧರ್ಣಪ್ಪ ಪೂಜಾರಿ, ಡಾ.ರಾಜರಾಮ ಕೆ.ಬಿ, ತನುಜಾ ಶೇಖರ್, ಧರಣೇಂದ್ರ ಕುಮಾರ್, ಚಿದಾನಂದ ಪೂಜಾರಿ ಎಲ್ದಕ, ಸಂಜೀವ ಪೂಜಾರಿ, ಚಂದ್ರಶೇಖರ್, ಗಂಗಾಧರ ಮಿತ್ತಮಾರು, ಜಯವಿಕ್ರಮ ಕಲ್ಲಾಪು, ವಿಶೇಷ ಅಧಿಕಾರಿ ಮೋನಪ್ಪ ಪೂಜಾರಿ ಕಂಡೆತ್ಯಾರು, ಮುಖ್ಯಕಾರ್ಯನಿರ್ವಹಣಾಧಿಕಾರಿ ಅಶ್ವಥ್ ಕುಮಾರ್ ಉಪಸ್ಥಿತರಿದ್ದರು.

ಸಂಘದ ನಿರ್ದೇಶಕ ಜಗದೀಶ್ಚಂದ್ರ ಡಿ.ಕೆ. ಪ್ರಾಸ್ತಾವಿಕ ನುಡಿಗಳನ್ನಾಡಿ, ಸ್ವಾಗತಿಸಿದರು, ಪ್ರದೀಶ್ ನಡುವಾಲು ಕಾರ್ಯಕ್ರಮ ನಿರೂಪಿಸಿದರು, ನಿರ್ದೇಶಕ ಆನಂದ ಪೂಜಾರಿ ಸರ್ವೇದೋಳ ವಂದಿಸಿದರು. ಹಾಗೂ ಸಂಘದ ಸಿಬ್ಬಂದಿ ವರ್ಗ ಸಹಕರಿಸಿದರು.

ಕಾರ್ಯಕ್ರಮದಲ್ಲಿ ವಿವಿದ್ ಸಂಘ ಸಂಸ್ಥೆಗಳ ಪದಾಧಿಕಾರಿಗಳು,ಇತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಸಂಘ ಉದ್ಘಾಟನೆ

Suddi Udaya

ಡ್ರಾಯಿಂಗ್ ಗ್ರೇಡ್ ಪರೀಕ್ಷೆ: ಸಮೃದ್ಧ್ ಬಿ.ಎಸ್. ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಬೆಳ್ತಂಗಡಿ: ಆ.7ರಿಂದ ಯಕ್ಷಸಾಂಗತ್ಯ ಸಪ್ತಕ ತಾಳಮದ್ದಳೆ

Suddi Udaya

ಬೆಳ್ತಂಗಡಿ ಪ.ಪಂ. ನಾಲ್ಕನೇ ವಾರ್ಡಿನ ಹಿಂದೂ ರುದ್ರ ಭೂಮಿಗೆ ರೂ 40 ಲಕ್ಷ ವೆಚ್ಚದಲ್ಲಿ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಅನ್ನಪೂರ್ಣ ಛತ್ರದಲ್ಲಿ ಸೆಲ್ಕೋ ಪೌಂಢೇಶನ್ ಪ್ರಾಯೋಜಕತ್ವದಲ್ಲಿ ಅಳವಡಿಸಲಾದ ಸೌರ ವಿದ್ಯುತ್ ಘಟಕಕ್ಕೆ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಚಾಲನೆ

Suddi Udaya

ವೇಣೂರು: ಸುಮಾರು 6ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಿಸುದಾರರಿಗೆ ಹಸ್ತಾಂತರಿಸಿದ ಜಯಂತ್ ಶೆಟ್ಟಿ ಹಕ್ಕೇರಿ

Suddi Udaya
error: Content is protected !!