22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಸಂಸ್ಕಾರ ಭಾರತಿ ಮತ್ತು ಹನುಮೋತ್ಸವ ಸಮಿತಿ ಅಳದಂಗಡಿ ವತಿಯಿಂದ ಹನುಮೋತ್ಸವದ ಪೂರ್ವಭಾವಿ ಸಭೆ

ಅಳದಂಗಡಿ : ಸಂಸ್ಕಾರ ಭಾರತಿ ಬೆಳ್ತಂಗಡಿ ಮತ್ತು ಹನುಮೋತ್ಸವ ಸಮಿತಿ ಅಳದಂಗಡಿ ವತಿಯಿಂದ ಪಿಲ್ಯ ಮಹಮ್ಮಾಯೀ ಭಜನಾ ಮಂದಿರದಲ್ಲಿ ಕಾರ್ಯಕ್ರಮದ ಯಶಸ್ವಿಗೆ ಪೂರ್ವಭಾವಿ ಸಭೆ ನಡೆಯಿತು. ನಾವರ ಪಿಲ್ಯ, ಸುಲ್ಕೇರಿ, ಕುದ್ಯಾಡಿ ಗ್ರಾಮದ ಉಸ್ತುವಾರಿಗಳ ಸಭೆಯನ್ನು ಕರೆಯಲಾಗಿತ್ತು.

ಸಭೆಯಲ್ಲಿ ಅಳದಂಗಡಿ ಶ್ರೀ ಕ್ಲಿನಿಕ್ ಇಲ್ಲಿಯ ಪ್ರಸಿದ್ಧ ವೈದ್ಯರಾದ ಡಾ.ಎನ್.ಎಮ್ ತುಳುಪುಳೆ ಎ. 12 ರಂದು ಅಳದಂಗಡಿಯಲ್ಲಿ ನಡೆಯುವ ಹನುಮೋತ್ಸವ 2025 ರ ಲಾಂಛನ ಬಿಡುಗಡೆ ಮಾಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಭಜನಾ ಮಂದಿರದ ಅರ್ಚಕರಾದ ಶೇಷಗಿರಿ ಭಟ್ ಕಾರ್ಯಕ್ರಮದ ಯಶಸ್ವಿಗಾಗಿ ದೇವರಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಸಂಸ್ಕಾರ ಭಾರತಿ ತಾಲೂಕು ಅಧ್ಯಕ್ಷ ಸಂಪತ್ ಬಿ.ಸುವರ್ಣ ಹನುಮೋತ್ಸವದ ಬಗ್ಗೆ ಸವಿವರವಾದ ಮಾಹಿತಿ ನೀಡಿ ಸಂಪೂರ್ಣವಾಗಿ ಹನುಮೋತ್ಸವ ಯಶಸ್ವಿಯಾಗಲು ಪ್ರತೀ ಗ್ರಾಮದ ಹಿಂದೂ ಮನೆಗಳಿಗೂ ಆಮಂತ್ರಣ ಪತ್ರಿಕೆ ತಲುಪಿಸಬೇಕು ಮತ್ತು ಯಾಗದಲ್ಲಿ ವೃತಧಾರಿಗಳು ಭಾಗವಹಿಸುವಂತೆ ಮಾಡಬೇಕೆಂದು ಕೇಳಿಕೊಂಡರು.

ಸಮಾಲೋಚನಾ ಸಭೆಯಲ್ಲಿ ಸುಲ್ಕೇರಿ ಗ್ರಾ.ಪಂ‌.ಉಪಾಧ್ಯಕ್ಷ ಶುಭಕರ ಬಂಗೇರ ಸತೀಶ್ ಶಿರ್ಲಾಲು, ವಿಶ್ವನಾಥ ಬಂಗೇರ, ರಾಜೇಶ್ ಬುಣ್ಣಾನ್, ಉಮೇಶ್ ಸುವರ್ಣ, ಹರೀಶ್ ಕಲ್ಲಾಜೆ ಪ್ರಶಾಂತ ಕರಂಬಾರು, ಸುಮನಾಜ ಪಾಡಿಪಿಲ್ಯ, ಆನಂದ ಪೂಜಾರಿ ಮಣಿಕಂಠ, ಶೈಲೇಶ್ ಪಾಡಿಪಿಲ್ಯ, ಸುಧೀರ್ ಪಾಡಿಪಿಲ್ಯ, ಪುನೀತ್ ಬಂಗೇರ, ಉಮೇಶ್ ಬಂಗೇರ, ಸತೀಶ್ ಬಂಗೇರ ದುಗ್ಗಲಚ್ಚಿಲ್, ಅವಿನಾಶ್ ಪಂಚರತ್ನ ನಾರಾಯಣ ಪೂಜಾರಿ ಪರಾರಿ, ರವಿ ಪೂಜಾರಿ ನಾವರ, ರಮಾನಾಥ ಪಾದೆಮಾರಡ್ಡ, ಮುಂತಾದ ಪ್ರಮುಖರು ಭಾಗವಹಿಸಿದ್ದರು.

ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ನಾವರ ಸ್ವಾಗತಿಸಿ , ಸಂಚಾಲಕ ನಿತ್ಯಾನಂದ ಎನ್ ನಾವರ ಧನ್ಯವಾದ ಸಲ್ಲಿಸಿದರು.

Related posts

ನಾಳೆಯೂ(ಜು.26) ಶಾಲೆ, ಕಾಲೇಜುಗಳಿಗೆ ರಜೆ: ದ.ಕ ಜಿಲ್ಲಾಧಿಕಾರಿ ಘೋಷಣೆ

Suddi Udaya

ಬ್ರೇಕ್ ಫೈಲ್ ಆಗಿ ಹಿಟಾಚಿ ತುಂಬಿದ್ದ ಲಾರಿ ಪಲ್ಟಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಭೇಟಿ

Suddi Udaya

ಮಾ.13-17: ಕೇಳ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನೂತನವಾಗಿ ನಿರ್ಮಿಸಲಾದಕಲ್ಯಾಣ ಮಂಟಪಗಳ ಸಮುಚ್ಚಗಳ ಉದ್ಘಾಟನೆ

Suddi Udaya

ಬೆಳ್ತಂಗಡಿ ವಕೀಲರ ಸಂಘದ ನಿಯೋಗದಿಂದ ದ. ಕ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿಗಳ ಭೇಟಿ, ನೂತನ ನ್ಯಾಯಾಲಯ ಸಂಕೀರ್ಣ ಶಂಕು ಸ್ಥಾಪನೆ ಬಗ್ಗೆ ಚರ್ಚೆ

Suddi Udaya
error: Content is protected !!