May 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮರ್ಹೂಮ್ ಹಸನ್ ಗಿಂಡಾಡಿ ಇವರ ಸ್ಮರಣಾರ್ಥ ಎಸ್‌ಡಿಪಿಐ ವತಿಯಿಂದ ಪೇರಲ್ದರಕಟ್ಟೆಯಲ್ಲಿ ಇಫ್ತಾರ್ ಮೀಟ್

ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ತೆಂಕಕಾರಂದೂರು ಬ್ರಾಂಚ್ ಸಮಿತಿ ವತಿಯಿಂದ, ಮರ್ಹೂಮ್ ಹಸನ್ ಗಿಂಡಾಡಿ ಇವರ ಸ್ಮರಣಾರ್ಥ ಮಾ.14 ರಂದು ಬದ್ರಿಯಾ ಜುಮ್ಮಾ ಮಸೀದಿ ಪೇರಲ್ದರಕಟ್ಟೆಯಲ್ಲಿ ಇಫ್ತಾರ್ ಮೀಟ್ ಕಾರ್ಯಕ್ರಮ ನಡೆಯಿತು.

ಎಸ್‌ಡಿಪಿಐ ತೆಂಕಕಾರಂದೂರು ಬ್ರಾಂಚ್ ಅಧ್ಯಕ್ಷ ನವಾಝ್ ಮಂಜೊಟ್ಟಿ ನೇತೃತ್ವದಲ್ಲಿ ಇಫ್ತಾರ್ ಕಾರ್ಯಕ್ರಮ ನಡೆಯಿತು. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಅಕ್ಬರ್ ಬೆಳ್ತಂಗಡಿ, ಕಾರ್ಯದರ್ಶಿ ಅಶ್ಫಾಕ್ ಪುಂಜಾಲಕಟ್ಟೆ, ಜಿಲ್ಲಾ ಸಮಿತಿ ಸದಸ್ಯರಾದ ಹನೀಫ್ ಪುಂಜಾಲಕಟ್ಟೆ, ಕ್ಷೇತ್ರ ನಾಯಕರಾದ ಮುಸ್ತಾಫಾ ಜಿ. ಕೆರೆ, ಅಶ್ರಫ್ ಕಟ್ಟೆ, ರೌಫ್ ಪುಂಜಾಲಕಟ್ಟೆ, ಹಾಜಿ ಶಮೀಮ್ ಯೂಸುಫ್, ವೇಣೂರು ಬ್ಲಾಕ್ ಅಧ್ಯಕ್ಷರಾದ ಅಶ್ರಫ್ ಬದ್ಯಾರು ,ಗ್ರಾ.ಪಂ. ಸದಸ್ಯ ನಿಝಾಮ್ ಕಟ್ಟೆ, ಅತಿಥಿಗಳಾಗಿ ಆಗಮಿಸಿದ್ದರು.

ಈ ಸಂದರ್ಭದಲ್ಲಿ ಬದ್ರಿಯಾ ಜುಮ್ಮಾ ಮಸೀದಿ ಅಧ್ಯಕ್ಷರಾದ ನವಾಝ್ ಕಟ್ಟೆ, ಖತೀಬರಾದ ಶಂಸುದ್ದಿನ್ ದಾರಿಮಿ, ಮಸೀದಿಯ ನಾಯಕರಾದ ಸ್ವಾದಿಕ್ ಎಮ್.ಬಿ, ಸಿದ್ದೀಕ್ ಮಸೀದಿ ಬಳಿ, ಹಾಜಿ ಅಬೂಬಕ್ಕರ್ ಮಂಜೋಟ್ಟಿ , ಹಾಜಿ ಅಬ್ದುಲ್ ಕರೀಂ , ಅಶ್ರಫ್ ಗುಂಡೇರಿ , ಸಂಶುದ್ದೀನ್ ಕಟ್ಟೆ ,ರಿಯಾಜ್ ಮಂಜೋಟ್ಚಿ ,ಮುಸ್ತಫಾ ಮಂಜೋಟ್ಟಿ ,ಅಸೀಪ್ ಗುಂಡೇರಿ ,ಜಮಾತ್ ಬಾಂದವರು, ಕಾರ್ಯಕರ್ತರು ಇಫ್ತಾರ್ ಕಾರ್ಯಕ್ರಮ ಪಾಲ್ಗೊಂಡರು.

Related posts

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಮೆನ್ಸ್ ಪಾರ್ಲರ್‌ ಸಲೂನ್‌ ಉದ್ಯಮಿ ತರಬೇತಿಯ ಸಮಾರೋಪ ಸಮಾರಂಭ

Suddi Udaya

ರುಡ್‌ಸೆಟ್ ಸಂಸ್ಥೆಯಲ್ಲಿ ಎಂಬ್ರಾಯ್ಡರಿ ಮತ್ತು ಫ್ಯಾಬ್ರಿಕ್ ಪೈಂಟಿಂಗ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಕನ್ಯಾಡಿ : ಶ್ರೀ ರಾಮ ಕ್ಷೇತ್ರದ ಗುರುದೇವ ಮಠದಲ್ಲಿ ಆಯುಧ ಪೂಜೆ

Suddi Udaya

ಲಾಯಿಲ ಜಿ.ಪಂ. ವ್ಯಾಪ್ತಿಯ ಪ್ರದೇಶಗಳಲ್ಲಿ ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಬಿರುಸಿನ ಮತಯಾಚನೆ

Suddi Udaya

ಸಾಮಾಜಿಕ ಪರಿವರ್ತನೆಯ ಹರಿಕಾರ ಬ್ರಹ್ಮಶ್ರೀ ನಾರಾಯಣ ಗುರುಗಳ ಮೂರ್ತಿ ಕಿಲ್ಲೂರಿನಲ್ಲಿ ಪ್ರತಿಷ್ಠಾಪನೆ: ಜ.11-12: ಮಿತ್ತಬಾಗಿಲು-ಮಲವಂತಿಗೆ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ ಗುರುಗಳ ಮೂರ್ತಿ ಪ್ರತಿಷ್ಠಾಪನೆ ಹಾಗೂ ಗುರು ಭವನ ಉದ್ಘಾಟನೆ

Suddi Udaya

ಬೆಳ್ತಂಗಡಿಯ ಪ್ರತಿಷ್ಠಿತ ಕೇದೆ ಗುತ್ತಿನ ಮನೆಗೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ

Suddi Udaya
error: Content is protected !!