23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇಲಂತಬೆಟ್ಟು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

ಮೇಲ0ತಬೆಟ್ಟು: ಮೇಲಂತಬೆಟ್ಟುಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಸವಿತಾ ರವರ ಅಧ್ಯಕ್ಷತೆಯಲ್ಲಿ ಮಾ.15ರಂದು ಪಂಚಾಯತ್ ಸಭಾಂಗಣದಲ್ಲಿ ಜರುಗಿತು.

ಮಾರ್ಗದರ್ಶಕ ಅಧಿಕಾರಿಯಾಗಿ ಶಿಶು ಅಭಿವೃದ್ಧಿ ಇಲಾಖೆಯ ಶ್ರೀಮತಿ ವಾಣಿಶ್ರೀ ಭಾಗವಹಿಸಿ ಗ್ರಾಮಸಭೆಯನ್ನು ಮುನ್ನಡೆಸಿದರು.

ಸಭೆಯಲ್ಲಿ ಇಲಾಖಾ ಅಧಿಕಾರಿಗಳಿಂದ ವಿವಿಧ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.

ಗ್ರಾಮ ಸಭೆಯಲ್ಲಿ ಮೇಲಂತಬೆಟ್ಟು ಆರೋಗ್ಯ ಮತ್ತು ಕ್ಷೇಮ ಕೇಂದ್ರ-ಉಪಕೇಂದ್ರದ ವತಿಯಿಂದ ಉಚಿತ ಅಸಾಂಕ್ರಾಮಿಕ ರೋಗಗಳ (ಎನ್.ಸಿ.ಡಿ) ಆರೋಗ್ಯ ತಪಾಸಣಾ ಶಿಬಿರ ನಡೆಯಿತು.

ಗ್ರಾಮ ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಉಪಾಧ್ಯಕ್ಷ ಲೋಕನಾಥ ಶೆಟ್ಟಿ, ಗ್ರಾ.ಪಂ. ಸದಸ್ಯರಾದ ಚಂದ್ರರಾಜ್ ಎಂ., ವೇಣುಗೋಪಾಲ ಶೆಟ್ಟಿ, ಶ್ರೀಮತಿ ದೀಪಿಕಾ, ಶ್ರೀಮತಿ ಹರೀಣಾಕ್ಷಿ, ಸಂತೋಷ್ ಕುಮಾರ್, ಚಂದ್ರಶೇಖರ್, ಪ್ರಭಾಕರ ಆಚಾರ್ಯ, ಶ್ರೀಮತಿ ಶಶಿಕಲಾ, ಶ್ರೀಮತಿ ಜಯಲಕ್ಷ್ಮೀ, ಶ್ರೀಮತಿ ಸುಮಲತಾ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸದಸ್ಯರು, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಗ್ರಾ.ಪಂ. ಸದಸ್ಯ ಸಂತೋಷ್ ಕುಮಾರ್ ಸ್ವಾಗತಿಸಿದರು. ಪಂಚಾಯತ್ ಕಾರ್ಯದರ್ಶಿ ಹಾಗೂ ಪ್ರಭಾರ ಅಭಿವೃದ್ಧಿ ಅಧಿಕಾರಿ ನಿರ್ಮಲ್ ಕುಮಾರ್ ಜಮಾ ಖರ್ಚು ವರದಿ ವಾಚಿಸಿ, ವಂದಿಸಿದರು.

Related posts

ಕುಕ್ಕೇಡಿ ಗ್ರಾ.ಪಂ. ನಿಂದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ

Suddi Udaya

ಲಾಯಿಲ: ಸ್ವ ಉದ್ಯೋಗ ಆಧಾರಿತ ತರಬೇತಿಯ ಸಮಾರೋಪ ಕಾರ್ಯಕ್ರಮ

Suddi Udaya

ಹಿಂದೂ ಸಂಘಟನೆಯ ಮುಖಂಡ ಅರುಣ್ ಕುಮಾರ್ ಪುತ್ತಿಲ್ಲ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಸಂಸ್ಥೆಗೆ ಭೇಟಿ: ಆತ್ಮೀಯವಾಗಿ ಬರಮಾಡಿಕೊಂಡು ಗೌರವಿಸಿದ ಸಂಸ್ಥೆಯ ಮಾಲಕರಾದ ಕೆ.ಮೋಹನ್ ಕುಮಾರ್

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾಗಿ ಜಿತೇಶ್, ಕಾರ್ಯದರ್ಶಿಯಾಗಿ ರಕ್ಷಿತ್ ಅಂಡಿಂಜೆ ಆಯ್ಕೆ

Suddi Udaya

ಕುಮಟಾ ಸದ್ಗುರು ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತಚಾರಣೆ: ಮಂಗಳೂರು ಶಾಸಕ ಡಾ.ಭರತ್ ಶೆಟ್ಟಿಯವರಿಂದ ಪಾದುಕ ಪೂಜೆ

Suddi Udaya

ನಡ: ಸ್ಟಾರ್ ಲೈನ್ ಶಾಲಾ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ

Suddi Udaya
error: Content is protected !!