July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇಲಂತಬೆಟ್ಟು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

ಮೇಲ0ತಬೆಟ್ಟು: ಮೇಲಂತಬೆಟ್ಟುಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಸವಿತಾ ರವರ ಅಧ್ಯಕ್ಷತೆಯಲ್ಲಿ ಮಾ.15ರಂದು ಪಂಚಾಯತ್ ಸಭಾಂಗಣದಲ್ಲಿ ಜರುಗಿತು.

ಮಾರ್ಗದರ್ಶಕ ಅಧಿಕಾರಿಯಾಗಿ ಶಿಶು ಅಭಿವೃದ್ಧಿ ಇಲಾಖೆಯ ಶ್ರೀಮತಿ ವಾಣಿಶ್ರೀ ಭಾಗವಹಿಸಿ ಗ್ರಾಮಸಭೆಯನ್ನು ಮುನ್ನಡೆಸಿದರು.

ಸಭೆಯಲ್ಲಿ ಇಲಾಖಾ ಅಧಿಕಾರಿಗಳಿಂದ ವಿವಿಧ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.

ಗ್ರಾಮ ಸಭೆಯಲ್ಲಿ ಮೇಲಂತಬೆಟ್ಟು ಆರೋಗ್ಯ ಮತ್ತು ಕ್ಷೇಮ ಕೇಂದ್ರ-ಉಪಕೇಂದ್ರದ ವತಿಯಿಂದ ಉಚಿತ ಅಸಾಂಕ್ರಾಮಿಕ ರೋಗಗಳ (ಎನ್.ಸಿ.ಡಿ) ಆರೋಗ್ಯ ತಪಾಸಣಾ ಶಿಬಿರ ನಡೆಯಿತು.

ಗ್ರಾಮ ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಉಪಾಧ್ಯಕ್ಷ ಲೋಕನಾಥ ಶೆಟ್ಟಿ, ಗ್ರಾ.ಪಂ. ಸದಸ್ಯರಾದ ಚಂದ್ರರಾಜ್ ಎಂ., ವೇಣುಗೋಪಾಲ ಶೆಟ್ಟಿ, ಶ್ರೀಮತಿ ದೀಪಿಕಾ, ಶ್ರೀಮತಿ ಹರೀಣಾಕ್ಷಿ, ಸಂತೋಷ್ ಕುಮಾರ್, ಚಂದ್ರಶೇಖರ್, ಪ್ರಭಾಕರ ಆಚಾರ್ಯ, ಶ್ರೀಮತಿ ಶಶಿಕಲಾ, ಶ್ರೀಮತಿ ಜಯಲಕ್ಷ್ಮೀ, ಶ್ರೀಮತಿ ಸುಮಲತಾ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸದಸ್ಯರು, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಗ್ರಾ.ಪಂ. ಸದಸ್ಯ ಸಂತೋಷ್ ಕುಮಾರ್ ಸ್ವಾಗತಿಸಿದರು. ಪಂಚಾಯತ್ ಕಾರ್ಯದರ್ಶಿ ಹಾಗೂ ಪ್ರಭಾರ ಅಭಿವೃದ್ಧಿ ಅಧಿಕಾರಿ ನಿರ್ಮಲ್ ಕುಮಾರ್ ಜಮಾ ಖರ್ಚು ವರದಿ ವಾಚಿಸಿ, ವಂದಿಸಿದರು.

Related posts

ಬಾರ್ಯ, ತೆಕ್ಕಾರು ಪುತ್ತಿಲ ಗ್ರಾಮದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ

Suddi Udaya

ಬಂದಾರು ಶಕ್ತಿ ಕೇಂದ್ರದಲ್ಲಿ ಬಿಜೆಪಿ ಪೂರ್ವಭಾವಿ ಸಭೆ

Suddi Udaya

ನ.27-30 :ಎಕ್ಸೆಲ್ ಕಾಲೇಜಿನಲ್ಲಿ ಅಕ್ಷರೋತ್ಸವ ಮತ್ತು ಎಕ್ಸೆಲ್ ಪರ್ಬ ವಿಶೇಷ ಕಾರ್ಯಕ್ರಮ ನಟ ರಮೇಶ್ ಅರವಿಂದ್,ಯೋಗರಾಜ್ ಭಟ್ ಸೇರಿದಂತೆ ಸ್ವಾಮೀಜಿಯವರು, ವಿವಿಧ ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದಾರೆ ಪತ್ರಿಕಾಗೋಷ್ಠಿಯಲ್ಲಿ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಂದ ಮಾಹಿತಿ

Suddi Udaya

ಶಿರ್ಲಾಲು: ಬಿಲ್ಲವ ಸಂಘದ ಮಾಜಿ ಅಧ್ಯಕ್ಷ ಅಶೋಧರ ಸಾಲಿಯಾನ್ ನಿಧನ

Suddi Udaya

ಬಳಂಜ: ಜನಮಂಗಳ ಕಾರ್ಯಕ್ರದಡಿ ಕಾಮೋಡ್ ಚೇರ್ ವಿತರಣೆ

Suddi Udaya

ಬೆಳ್ತಂಗಡಿ: ವಾಯುಮಾಲಿನ್ಯ ನಿಯಂತ್ರಣ ಮಾಸಾಚರಣೆ, ಹೊಗೆ ರಹಿತ ವಾಹನ ನಿರ್ಮಲ ಪರಿಸರದ ಜೀವನ ಬಗ್ಗೆ ಕಾರ್ಯಕ್ರಮ

Suddi Udaya
error: Content is protected !!