23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಸಾರ್ವಜನಿಕ ಪ್ರದೇಶದಲ್ಲಿ ಬೇಕಾಬಿಟ್ಟಿ ಕಸ ಎಸೆದವರಿಂದಲೇ ವಿಲೇವಾರಿ ಮಾಡಿ, ದಂಡ ವಿಧಿಸಿದ: ಲಾಯಿಲ ಗ್ರಾ‌ಪಂ ಪಿಡಿಓ ಶ್ರೀನಿವಾಸ್ ಡಿ ಪಿ ಹಾಗೂ ಲೆಕ್ಕ ಸಹಾಯಕಿ ಸುಪ್ರಿತಾ ಶೆಟ್ಟಿಯವರಿಗೆ ಸಾರ್ವಜನಿಕರಿಂದ ಪ್ರಶಂಸೆ

ಬೆಳ್ತಂಗಡಿ: ಲಾಯಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಪುತ್ರಬೈಲು ಎಂಬಲ್ಲಿ ಕಸ ತ್ಯಾಜ್ಯಗಳನ್ನು ಎಸೆದವರಿಂದಲೇ ಕಸವನ್ನು ವಿಲೇವಾರಿ ಮಾಡಿಸಿ ರೂ. 3 ಸಾವಿರ ದಂಡ ವಿಧಿಸಿದ ಘಟನೆ ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ನಡೆದಿದೆ.

ಮಾ‌.15 ರಂದು ಪೂರ್ವಾಹ್ನ ಸುಮಾರು 11.30 ಕ್ಕೆ ಲಾಯಿಲ ಗ್ರಾಮದ ಪುತ್ರಬೈಲು ಎಂಬಲ್ಲಿ ಕಸ ತ್ಯಾಜ್ಯಗಳನ್ನು ರಸ್ತೆ ಬದಿಯಲ್ಲಿ ಎಸೆದು ಹೋದ ಬಗ್ಗೆ ಬೆಳಕಿಗೆ ಬಂದಿದ್ದು,ಕಸದ ಚೀಲವನ್ನು ಪರಿಶೀಲಿಸಿದ ಸ್ಥಳೀಯರಾದ ಗಣೇಶ್ ಪ್ರಸಾದ್ ರವರು ಹೆಚ್ಚಿನ ಮುತುವರ್ಜಿ ವಹಿಸಿ ಕೆಲವೊಂದು ದಾಖಲೆಗಳೊಂದಿಗೆ ಗ್ರಾಮ ಪಂಚಾಯತ್ ಗೆ ಭೇಟಿ ನೀಡಿ ಪಂಚಾಯತ್ ಲೆಕ್ಕಸಹಾಯಕರಾದ ಸುಪ್ರೀತಾ ಶೆಟ್ಟಿಯವರ ಬಳಿ ವಿಷಯ ತಿಳಿಸಿದ ಕೂಡಲೇ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಕಸದ ಚೀಲವನ್ನು ಪರಿಶೀಲಿಸಿ ಸಂಬಂಧ ಪಟ್ಟ ವ್ಯಕ್ತಿಗಳನ್ನು ಸ್ಥಳಕ್ಕೆ ಕರೆಸಿ ತ್ಯಾಜ್ಯ ವಿಲೇವಾರಿ ಮಾಡಿಸಿದ್ದಲ್ಲದೇ ದಂಡನ ಶುಲ್ಕವನ್ನು ವಿಧಿಸಿದರು.

ಹೆಚ್ಚಿನ ಪರಿಶೀಲನೆ ನಡೆಸಿ ಇನ್ನೂ 3 ತ್ಯಾಜ್ಯಗಳ ಚೀಲಗಳು ರಸ್ತೆ ಬದಿ ಎಸೆದಿರುವುದು ಕಂಡುಬಂದಿದ್ದು, ಚೀಲಗಳನ್ನು ತೆರೆದಾಗ ಸಂಬಂಧ ಪಟ್ಟ ದಾಖಲೆಗಳು ದೊರೆತಿದ್ದು ಕೂಡಲೇ ಸಂಬಂಧಪಟ್ಟವರಿಗೆ ದೂರವಾಣಿ ಮೂಲಕ ಕರೆಸಿ ದಂಡನೆ ವಸೂಲಿ ಮಾಡಿಸಿದರು.

ಕಸ ವಿಲೇವಾರಿ ಮಾಡಿಸಿದ ಪಂಚಾಯತ್ ಪಿಡಿಓ ಶ್ರೀನಿವಾಸ್ ಡಿ.ಪಿ ಹಾಗೂ ಲೆಕ್ಕ ಸಹಾಯಕರಾದ ಸುಪ್ರಿತಾ ಶೆಟ್ಟಿಯವರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು.ಸ್ಥಳ ಪರಿಶೀಲನೆಯ ಸಂದರ್ಭದಲ್ಲಿ ಪಂಚಾಯತ್ ಸದಸ್ಯರಾದ ಅರವಿಂದ ಸ್ಥಳೀಯರಾದ ಗಣೇಶ್ ಪ್ರಸಾದ್ ಮತ್ತು ಮನೆಯವರು ಶ್ರದ್ದೆಶ್ ಹಾಗೂ ಸಾರ್ವಜನಿಕರು ಹೆಚ್ಚಿನ ಹಾಜರಿದ್ದರು.

Related posts

ಬೆಳ್ತಂಗಡಿ ಅ.ಭಾ.ಸಾ.ಪ. ಸಮಿತಿ ಹಾಗೂ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೇತೃತ್ವದಲ್ಲಿ ನೀರಿನ ಸದ್ಬಳಕೆ ಕುರಿತು ಕವಿಗೋಷ್ಠಿ

Suddi Udaya

ಬೆಳ್ತಂಗಡಿಯಲ್ಲಿ 500 ಎಕ್ರೆ ಯಾಂತ್ರಿಕೃತ ಯಂತ್ರಶ್ರೀ ನಾಟಿಗೆ ಚಾಲನೆ

Suddi Udaya

ನಡ ಗ್ರಾ.ಪಂ. ನ ಅಧ್ಯಕ್ಷರಾಗಿ ಮಂಜುಳಾ, ಉಪಾಧ್ಯಕ್ಷರಾಗಿ ದಿವಾಕರ ಪೂಜಾರಿ ಆಯ್ಕೆ

Suddi Udaya

ಉಜಿರೆ: ಮಾಚಾರಿನಲ್ಲಿ ಶ್ರೀ.ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ವಾತ್ಸಲ್ಯ ಮನೆಗೆ ಕೆಸರು ಕಲ್ಲು ಹಾಕಿ ಮನೆ ನಿರ್ಮಾಣಕ್ಕೆ ಚಾಲನೆ

Suddi Udaya

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಾರ್ಮಾಡಿ ಹಸನಬ್ಬ ಹಾಗೂ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪುರಸ್ಕೃತ ರವಿಚಂದ್ರ ಸಾಲಿಯಾನ್ ರವರಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸನ್ಮಾನ ಕಾರ್ಯಕ್ರಮ

Suddi Udaya

ತಣ್ಣೀರುಪಂತ ಗ್ರಾ.ಪಂ. ನಲ್ಲಿ ಮಹಿಳೆಯರಿಗೆ ನರೇಗಾ ಯೋಜನೆಯ ಮಾಹಿತಿ ಕಾರ್ಯಗಾರ

Suddi Udaya
error: Content is protected !!