July 23, 2026
ನಿಧನ

ಹಿರಿಯ ದಲಿತ ನಾಯಕ , ತಾ. ಪಂ ಮಾಜಿ ಉಪಾಧ್ಯಕ್ಷ ದಿ. ಚಂದು ಎಲ್ ರವರ ಸಹೋದರ , ಮಾಯಿಲ (ರಮೇಶ್ )ವಿಧಿವಶ

ಲಾಯಿಲ : ಹಿರಿಯ ದಲಿತ ನಾಯಕ , ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷರಾಗಿದ್ದ ದಿ. ಚಂದು ಎಲ್ ರವರ ಸಹೋದರ , ಲಾಯಿಲ ಗ್ರಾಮದ ನಿನ್ನಿಕಲ್ಲು ನಿವಾಸಿ ಮಾಯಿಲ(ರಮೇಶ್)(56) ರವರು ಅಲ್ಪಕಾಲದ ಅನಾರೋಗ್ಯದಿಂದ ಮಾರ್ಚ್ 15 ರಂದು ಶನಿವಾರ ಸ್ವಗೃಹದಲ್ಲಿ ನಿಧನರಾದರು.

ಹಿರಿಯ ಸೆಂಟ್ರಿಂಗ್ ಮೇಸ್ತ್ರಿಯಾಗಿದ್ದ ಅವರು ದಲಿತ ಚಳವಳಿಯಲ್ಲಿ ಗುರುತಿಸಿಕೊಂಡಿದ್ದರು. ಮೃತರು ಪತ್ನಿ ಸುನಂದಾ , ಪುತ್ರ ಸುದೀಪ್ , ಪುತ್ರಿ ಸುಪ್ರಿಯಾ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಮೃತರ ಮನೆಗೆ ಹಿರಿಯ ಉದ್ಯಮಿ , ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ನಡ ಇದರ ಅಧ್ಯಕ್ಷ ಸಯ್ಯದ್ ಹಬೀಬ್ ಸಾಹೇಬ್ , ಲಾಯಿಲ ಗ್ರಾಮ ಪಂಚಾಯತ್ ಸದಸ್ಯ ಪ್ರಸಾದ್ ಶೆಟ್ಟಿ ಏಣಿಂಜ , ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಶೇಖರ್ ಕುಕ್ಕೇಡಿ , ದಸಂಸ (ಅಂಬೇಡ್ಕರ್ ವಾದ) ಮೈಸೂರು ವಿಭಾಗ ಸಂಘಟನಾ ಸಂಚಾಲಕ ಬಿ.ಕೆ ವಸಂತ್ , ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯ ನೇಮಿರಾಜ್ ಕಿಲ್ಲೂರು , ದಸಂಸ (ಅಂಬೇಡ್ಕರ್ ವಾದ) ಸಂಚಾಲಕ ರಮೇಶ್ ಆರ್ , ಹಿರಿಯ ದಲಿತ ನಾಯಕರಾದ ವೆಂಕಣ್ಣ ಕೊಯ್ಯೂರು , ಸಂಜೀವ ಆರ್ , ಮಾನವ ಬಂಧುತ್ವ ವೇದಿಕೆ ಜಿಲ್ಲಾ ಸಂಚಾಲಕ ಚೆನ್ನಕೇಶವ , ಮುಂಡಾಜೆ ಸಿಎ ಬ್ಯಾಂಕ್ ನಿರ್ದೇಶಕ ರಾಘವ ಕಲ್ಮಂಜ , ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪ ವಿಭಾಗದ ನಿವೃತ್ತ ನೌಕರ ಶೀನ ಧರ್ಮಸ್ಥಳ ಸೇರಿದಂತೆ ನೂರಾರು ಜನರು ಭಾಗವಹಿಸಿ ಅಂತಿಮ ದರ್ಶನ ಪಡೆದರು.

Related posts

ಉರುವಾಲು: ಕುಪ್ಪೆಟ್ಟಿ ನಿವಾಸಿ ಶ್ರಾವ್ಯ ಜಿ. ಅಸೌಖ್ಯದಿಂದ ನಿಧನ

Suddi Udaya

ಕನ್ಯಾಡಿ I ಗ್ರಾಮದ ಚೆನ್ನಲ್ಲಿಕೆ ಮನೆಯ ಸಂಜೀವ ನಾಯ್ಕ್ ನಿಧನ

Suddi Udaya

ಕಳಿಯ: ಬಾಕಿಮಾರು ನಿವಾಸಿ ಶ್ರೀಮತಿ ರುಕ್ಮಿಣಿ ನಿಧನ

Suddi Udaya

ಮಾಲಾಡಿ : ಸಂಪತ್ ರಾಜ್ ಭಟ್ ನಿಧನ

Suddi Udaya

ಮಚ್ಚಿನ: ಕೃಷಿಕ ಕೃಷ್ಣಪ್ಪ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಬೆಳಾಲು ಗ್ರಾ.ಪಂ ಮಾಜಿ ಸದಸ್ಯ ಅಂಗರಗಂಡ ಯೂಸುಫ್ ನಿಧನ

Suddi Udaya
error: Content is protected !!