30.7 C
ಪುತ್ತೂರು, ಬೆಳ್ತಂಗಡಿ
April 24, 2026
ನಿಧನ

ಹಿರಿಯ ದಲಿತ ನಾಯಕ , ತಾ. ಪಂ ಮಾಜಿ ಉಪಾಧ್ಯಕ್ಷ ದಿ. ಚಂದು ಎಲ್ ರವರ ಸಹೋದರ , ಮಾಯಿಲ (ರಮೇಶ್ )ವಿಧಿವಶ

ಲಾಯಿಲ : ಹಿರಿಯ ದಲಿತ ನಾಯಕ , ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷರಾಗಿದ್ದ ದಿ. ಚಂದು ಎಲ್ ರವರ ಸಹೋದರ , ಲಾಯಿಲ ಗ್ರಾಮದ ನಿನ್ನಿಕಲ್ಲು ನಿವಾಸಿ ಮಾಯಿಲ(ರಮೇಶ್)(56) ರವರು ಅಲ್ಪಕಾಲದ ಅನಾರೋಗ್ಯದಿಂದ ಮಾರ್ಚ್ 15 ರಂದು ಶನಿವಾರ ಸ್ವಗೃಹದಲ್ಲಿ ನಿಧನರಾದರು.

ಹಿರಿಯ ಸೆಂಟ್ರಿಂಗ್ ಮೇಸ್ತ್ರಿಯಾಗಿದ್ದ ಅವರು ದಲಿತ ಚಳವಳಿಯಲ್ಲಿ ಗುರುತಿಸಿಕೊಂಡಿದ್ದರು. ಮೃತರು ಪತ್ನಿ ಸುನಂದಾ , ಪುತ್ರ ಸುದೀಪ್ , ಪುತ್ರಿ ಸುಪ್ರಿಯಾ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಮೃತರ ಮನೆಗೆ ಹಿರಿಯ ಉದ್ಯಮಿ , ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ನಡ ಇದರ ಅಧ್ಯಕ್ಷ ಸಯ್ಯದ್ ಹಬೀಬ್ ಸಾಹೇಬ್ , ಲಾಯಿಲ ಗ್ರಾಮ ಪಂಚಾಯತ್ ಸದಸ್ಯ ಪ್ರಸಾದ್ ಶೆಟ್ಟಿ ಏಣಿಂಜ , ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಶೇಖರ್ ಕುಕ್ಕೇಡಿ , ದಸಂಸ (ಅಂಬೇಡ್ಕರ್ ವಾದ) ಮೈಸೂರು ವಿಭಾಗ ಸಂಘಟನಾ ಸಂಚಾಲಕ ಬಿ.ಕೆ ವಸಂತ್ , ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯ ನೇಮಿರಾಜ್ ಕಿಲ್ಲೂರು , ದಸಂಸ (ಅಂಬೇಡ್ಕರ್ ವಾದ) ಸಂಚಾಲಕ ರಮೇಶ್ ಆರ್ , ಹಿರಿಯ ದಲಿತ ನಾಯಕರಾದ ವೆಂಕಣ್ಣ ಕೊಯ್ಯೂರು , ಸಂಜೀವ ಆರ್ , ಮಾನವ ಬಂಧುತ್ವ ವೇದಿಕೆ ಜಿಲ್ಲಾ ಸಂಚಾಲಕ ಚೆನ್ನಕೇಶವ , ಮುಂಡಾಜೆ ಸಿಎ ಬ್ಯಾಂಕ್ ನಿರ್ದೇಶಕ ರಾಘವ ಕಲ್ಮಂಜ , ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪ ವಿಭಾಗದ ನಿವೃತ್ತ ನೌಕರ ಶೀನ ಧರ್ಮಸ್ಥಳ ಸೇರಿದಂತೆ ನೂರಾರು ಜನರು ಭಾಗವಹಿಸಿ ಅಂತಿಮ ದರ್ಶನ ಪಡೆದರು.

Related posts

ಉಜಿರೆ ನಿವಾಸಿ ಲಲಿತಾ ಪೂಜಾರಿ ನಿಧನ

Suddi Udaya

ಅಂಡಿಂಜೆ : ಪರಮೇಶ್ವರ ಕೆ. ನಿಧನ

Suddi Udaya

ಸಾಮಾಜಿಕ ಹೋರಾಟಗಾರ ಎಲ್ಯಣ್ಣ ಮಲೆಕುಡಿಯ ಹೃದಯಾಘಾತದಿಂದ ನಿಧನ

Suddi Udaya

ಧರ್ಮಸ್ಥಳದ ಲತಾ ಆನೆ ಹೃದಯಾಘಾತದಿಂದ ಸಾವು

Suddi Udaya

ಮದ್ದಡ್ಕ: ಬಲ್ಕತ್ಯಾರು ನಿವಾಸಿ ಶಾಮಣ್ಣ ನಾಯಕ್ ನಿಧನ

Suddi Udaya

ಗುರುವಾಯನಕೆರೆ ಶಾರದಾ ನಗರ ನಿವಾಸಿ ಕು.ಜಯ ಭಾರತಿ ನಿಧನ

Suddi Udaya
error: Content is protected !!