25.4 C
ಪುತ್ತೂರು, ಬೆಳ್ತಂಗಡಿ
May 3, 2025
Uncategorized

ಬೆಳ್ತಂಗಡಿ ಸೇವಾಭಾರತಿ ಆಶ್ರಯದಲ್ಲಿ 100ನೇ ಬೃಹತ್ ರಕ್ತದಾನ ಶಿಬಿರ

ಸೇವಾಭಾರತಿ ಬೆಳ್ತಂಗಡಿ ಇದರ ಆಶ್ರಯದಲ್ಲಿ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಮಂಗಳೂರು ಸಹಕಾರದಲ್ಲಿ ಶಿವಾಜಿ ಗ್ರೂಪ್ ಬಾಯ್ಸ್ ಕೊಕ್ಕಡ, ವೀರಕೇಸರಿ ಅನಾರು ಪಟ್ರಮೆ, ಕೇಸರಿ ಗೆಳೆಯರ ಬಳಗ ಕೊಕ್ಕಡ, ಹವ್ಯಕ ವಲಯ ಉಜಿರೆ ಇವುಗಳ ಸಹಭಾಗಿತ್ವದಲ್ಲಿ 100ನೇ ಬೃಹತ್ ರಕ್ತದಾನ ಶಿಬಿರ ಕೊಕ್ಕಡ ಸೌತಡ್ಕ ಸೇವಾಧಾಮದಲ್ಲಿ ಮಾ.16ರಂದು ಜರುಗಿತು.

ಕಾರ್ಯಕ್ರಮವನ್ನು ಕೊಕ್ಕಡ ಶ್ರೀರಾಮ ಸೇವಾ ಸಮಿತಿ ಕಾರ್ಯದರ್ಶಿ ಶಶಿ ಕೊಕ್ಕಡ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಉಜಿರೆ ಹವ್ಯಕ ವಲಯ ಉಪಾಧ್ಯಕ್ಷರಾದ ಶಿವರಾಮ ಭಟ್ ಹಿತ್ತಿಲು, ಶಿವಾಜಿ ಗ್ರೂಪ್ ಆಫ್ ಬಾಯ್ಸ್ ಕೊಕ್ಕಡ ಇದರ ಅಧ್ಯಕ್ಷರಾದ ಕಿಶೋರ್ ಪೊಯ್ಯೊಳೆ, ಕೊಕ್ಕಡ ಕೇಸರಿ ಗೆಳೆಯರ ಬಳಗದ ಅಧ್ಯಕ್ಷ ಶರತ್ ಕೊಕ್ಕಡ, ಡಿಸ್ಟ್ರಿಕ್ಟ್ ಕೋ-ಆರ್ಡಿನೇಟರ್ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಮಂಗಳೂರು ಇದರ ಪ್ರವೀಣ್ ಕುಮಾರ್ ಆಗಮಿಸಿದ್ದರು.

ವೇದಿಕೆಯಲ್ಲಿ ಸೇವಾಭಾರತಿಯ ಅಧ್ಯಕ್ಷರಾದ ಶ್ರೀಮತಿ ಸ್ವರ್ಣಗೌರಿ ಉಪಸ್ಥಿತರಿದ್ದರು.ಟ್ರಸ್ಟಿ ಜಯರಾಜ್ ಕಾನರ್ಪ ಸ್ವಾಗತಿಸಿದರು. ಸೇವಾಭಾರತಿಯ ಅನುಸರಣೆ ಮತ್ತು ಹಣಕಾಸು ಪ್ರಬಂಧಕ ಮೋಹನ್ ಕಾರ್ಯಕ್ರಮ ನಿರೂಪಿಸಿದರು. ಟ್ರೈನರ್ ಆಂಟನಿ ಧನ್ಯವಾದವಿತ್ತರು.

Related posts

ಅಳದಂಗಡಿ: ಕಿಶೋರ್-ಕಾವ್ಯ ದಂಪತಿ ವಿವಾಹ ಭೋಜನಾ ಕೂಟಕ್ಕೆ ಉಡುಪಿ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾ ಕುಮಾರಿ ಭಾಗಿ

Suddi Udaya

ಲಾಯಿಲ:ಉಮ್ಮಣ್ಣ ಗೌಡ ನಿಧನ

Suddi Udaya

ಯಕ್ಷಭಾರತಿ ದಶಮಾನೋತ್ಸವದ ಅಂಗವಾಗಿ ನಡೆಯುವ ಸನ್ಮಾನ ಕಾರ್ಯಕ್ರಮ ಮತ್ತು ದೇವಿ ಮಹಾತ್ಮೆ ಯಕ್ಷಗಾನದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮುಂಡಾಜೆ ಗ್ರಾ.ಪಂ. ಅಧ್ಯಕ್ಷರಾಗಿ ಗಣೇಶ್ ಬಂಗೇರ, ಉಪಾಧ್ಯಕ್ಷರಾಗಿ ಸುಮಾ ಕೃಷ್ಣಾನಂದ ಆಯ್ಕೆ

Suddi Udaya

ಸುಲ್ಕೇರಿ ಅಂಗನವಾಡಿಯ ಹಳೆ ವಿದ್ಯಾರ್ಥಿನಿಯ ಪೋಷಕರಿಂದ ಸಾವಯವ ತರಕಾರಿ ಗಿಡಗಳ ಹಸ್ತಾಂತರ

Suddi Udaya

ಬೆಳ್ತಂಗಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮಕ್ಕೆ ಸಂಸದ ಬ್ರಿಜೇಶ್ ಚೌಟ ಬೇಟಿ

Suddi Udaya
error: Content is protected !!