25.8 C
ಪುತ್ತೂರು, ಬೆಳ್ತಂಗಡಿ
May 7, 2025
Uncategorized

ಸಾರ್ವಜನಿಕ ಪ್ರದೇಶದಲ್ಲಿ ಬೇಕಾಬಿಟ್ಟಿ ಕಸ ಎಸೆದವರಿಂದಲೇ ವಿಲೇವಾರಿ ಮಾಡಿ, ದಂಡ ವಿಧಿಸಿದ: ಲಾಯಿಲ ಗ್ರಾ‌ಪಂ ಪಿಡಿಓ ಶ್ರೀನಿವಾಸ್ ಡಿ ಪಿ ಹಾಗೂ ಲೆಕ್ಕ ಸಹಾಯಕಿ ಸುಪ್ರಿತಾ ಶೆಟ್ಟಿಯವರಿಗೆ ಸಾರ್ವಜನಿಕರಿಂದ ಪ್ರಶಂಸೆ

ಬೆಳ್ತಂಗಡಿ: ಲಾಯಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಪುತ್ರಬೈಲು ಎಂಬಲ್ಲಿ ಕಸ ತ್ಯಾಜ್ಯಗಳನ್ನು ಎಸೆದವರಿಂದಲೇ ಕಸವನ್ನು ವಿಲೇವಾರಿ ಮಾಡಿಸಿ ರೂ. 3 ಸಾವಿರ ದಂಡ ವಿಧಿಸಿದ ಘಟನೆ ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ನಡೆದಿದೆ.

ಮಾ‌.15 ರಂದು ಪೂರ್ವಾಹ್ನ ಸುಮಾರು 11.30 ಕ್ಕೆ ಲಾಯಿಲ ಗ್ರಾಮದ ಪುತ್ರಬೈಲು ಎಂಬಲ್ಲಿ ಕಸ ತ್ಯಾಜ್ಯಗಳನ್ನು ರಸ್ತೆ ಬದಿಯಲ್ಲಿ ಎಸೆದು ಹೋದ ಬಗ್ಗೆ ಬೆಳಕಿಗೆ ಬಂದಿದ್ದು,ಕಸದ ಚೀಲವನ್ನು ಪರಿಶೀಲಿಸಿದ ಸ್ಥಳೀಯರಾದ ಗಣೇಶ್ ಪ್ರಸಾದ್ ರವರು ಹೆಚ್ಚಿನ ಮುತುವರ್ಜಿ ವಹಿಸಿ ಕೆಲವೊಂದು ದಾಖಲೆಗಳೊಂದಿಗೆ ಗ್ರಾಮ ಪಂಚಾಯತ್ ಗೆ ಭೇಟಿ ನೀಡಿ ಪಂಚಾಯತ್ ಲೆಕ್ಕಸಹಾಯಕರಾದ ಸುಪ್ರೀತಾ ಶೆಟ್ಟಿಯವರ ಬಳಿ ವಿಷಯ ತಿಳಿಸಿದ ಕೂಡಲೇ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಕಸದ ಚೀಲವನ್ನು ಪರಿಶೀಲಿಸಿ ಸಂಬಂಧ ಪಟ್ಟ ವ್ಯಕ್ತಿಗಳನ್ನು ಸ್ಥಳಕ್ಕೆ ಕರೆಸಿ ತ್ಯಾಜ್ಯ ವಿಲೇವಾರಿ ಮಾಡಿಸಿದ್ದಲ್ಲದೇ ದಂಡನ ಶುಲ್ಕವನ್ನು ವಿಧಿಸಿದರು.

ಹೆಚ್ಚಿನ ಪರಿಶೀಲನೆ ನಡೆಸಿ ಇನ್ನೂ 3 ತ್ಯಾಜ್ಯಗಳ ಚೀಲಗಳು ರಸ್ತೆ ಬದಿ ಎಸೆದಿರುವುದು ಕಂಡುಬಂದಿದ್ದು, ಚೀಲಗಳನ್ನು ತೆರೆದಾಗ ಸಂಬಂಧ ಪಟ್ಟ ದಾಖಲೆಗಳು ದೊರೆತಿದ್ದು ಕೂಡಲೇ ಸಂಬಂಧಪಟ್ಟವರಿಗೆ ದೂರವಾಣಿ ಮೂಲಕ ಕರೆಸಿ ದಂಡನೆ ವಸೂಲಿ ಮಾಡಿಸಿದರು.

ಕಸ ವಿಲೇವಾರಿ ಮಾಡಿಸಿದ ಪಂಚಾಯತ್ ಪಿಡಿಓ ಶ್ರೀನಿವಾಸ್ ಡಿ.ಪಿ ಹಾಗೂ ಲೆಕ್ಕ ಸಹಾಯಕರಾದ ಸುಪ್ರಿತಾ ಶೆಟ್ಟಿಯವರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು.ಸ್ಥಳ ಪರಿಶೀಲನೆಯ ಸಂದರ್ಭದಲ್ಲಿ ಪಂಚಾಯತ್ ಸದಸ್ಯರಾದ ಅರವಿಂದ ಸ್ಥಳೀಯರಾದ ಗಣೇಶ್ ಪ್ರಸಾದ್ ಮತ್ತು ಮನೆಯವರು ಶ್ರದ್ದೆಶ್ ಹಾಗೂ ಸಾರ್ವಜನಿಕರು ಹೆಚ್ಚಿನ ಹಾಜರಿದ್ದರು.

Related posts

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮಡಂತ್ಯಾರು ಶಾಖೆಯಲ್ಲಿ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ತಪಾಸಣೆ ಚಿಕಿತ್ಸಾ ಶಿಬಿರ

Suddi Udaya

ಜು.9: ಸೋಮಂತಡ್ಕ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿಯ 22 ನೇ ಶಾಖೆ ಉದ್ಘಾಟನೆ

Suddi Udaya

ಪೆರ್ಲ ಬೈಪಾಡಿ ಸರ್ಕಾರಿ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

Suddi Udaya

ಕಡಿರುದ್ಯಾವರದಲ್ಲಿ ಮದುಮಗಳಿಂದ ಮತ ಚಲಾವಣೆ

Suddi Udaya

ಪಕ್ಷೇತರ ಅಭ್ಯರ್ಥಿಯಾಗಿ ಸುಬ್ರಹ್ಮಣ್ಯ ಭಟ್ ನಾಮಪತ್ರ ಸಲ್ಲಿಕೆ

Suddi Udaya

ಶಿರ್ಲಾಲು ಕೆಮ್ಮಡೆ ನಿವಾಸಿ ಶ್ರೀಮತಿ ವಾರಿಜ ನಿಧನ

Suddi Udaya
error: Content is protected !!