23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಬೆಳ್ತಂಗಡಿ ಸೇವಾಭಾರತಿ ಆಶ್ರಯದಲ್ಲಿ 100ನೇ ಬೃಹತ್ ರಕ್ತದಾನ ಶಿಬಿರ

ಸೇವಾಭಾರತಿ ಬೆಳ್ತಂಗಡಿ ಇದರ ಆಶ್ರಯದಲ್ಲಿ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಮಂಗಳೂರು ಸಹಕಾರದಲ್ಲಿ ಶಿವಾಜಿ ಗ್ರೂಪ್ ಬಾಯ್ಸ್ ಕೊಕ್ಕಡ, ವೀರಕೇಸರಿ ಅನಾರು ಪಟ್ರಮೆ, ಕೇಸರಿ ಗೆಳೆಯರ ಬಳಗ ಕೊಕ್ಕಡ, ಹವ್ಯಕ ವಲಯ ಉಜಿರೆ ಇವುಗಳ ಸಹಭಾಗಿತ್ವದಲ್ಲಿ 100ನೇ ಬೃಹತ್ ರಕ್ತದಾನ ಶಿಬಿರ ಕೊಕ್ಕಡ ಸೌತಡ್ಕ ಸೇವಾಧಾಮದಲ್ಲಿ ಮಾ.16ರಂದು ಜರುಗಿತು.

ಕಾರ್ಯಕ್ರಮವನ್ನು ಕೊಕ್ಕಡ ಶ್ರೀರಾಮ ಸೇವಾ ಸಮಿತಿ ಕಾರ್ಯದರ್ಶಿ ಶಶಿ ಕೊಕ್ಕಡ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಉಜಿರೆ ಹವ್ಯಕ ವಲಯ ಉಪಾಧ್ಯಕ್ಷರಾದ ಶಿವರಾಮ ಭಟ್ ಹಿತ್ತಿಲು, ಶಿವಾಜಿ ಗ್ರೂಪ್ ಆಫ್ ಬಾಯ್ಸ್ ಕೊಕ್ಕಡ ಇದರ ಅಧ್ಯಕ್ಷರಾದ ಕಿಶೋರ್ ಪೊಯ್ಯೊಳೆ, ಕೊಕ್ಕಡ ಕೇಸರಿ ಗೆಳೆಯರ ಬಳಗದ ಅಧ್ಯಕ್ಷ ಶರತ್ ಕೊಕ್ಕಡ, ಡಿಸ್ಟ್ರಿಕ್ಟ್ ಕೋ-ಆರ್ಡಿನೇಟರ್ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಮಂಗಳೂರು ಇದರ ಪ್ರವೀಣ್ ಕುಮಾರ್ ಆಗಮಿಸಿದ್ದರು.

ವೇದಿಕೆಯಲ್ಲಿ ಸೇವಾಭಾರತಿಯ ಅಧ್ಯಕ್ಷರಾದ ಶ್ರೀಮತಿ ಸ್ವರ್ಣಗೌರಿ ಉಪಸ್ಥಿತರಿದ್ದರು.ಟ್ರಸ್ಟಿ ಜಯರಾಜ್ ಕಾನರ್ಪ ಸ್ವಾಗತಿಸಿದರು. ಸೇವಾಭಾರತಿಯ ಅನುಸರಣೆ ಮತ್ತು ಹಣಕಾಸು ಪ್ರಬಂಧಕ ಮೋಹನ್ ಕಾರ್ಯಕ್ರಮ ನಿರೂಪಿಸಿದರು. ಟ್ರೈನರ್ ಆಂಟನಿ ಧನ್ಯವಾದವಿತ್ತರು.

Related posts

ಭೀಕರ ಗಾಳಿ : ಚಿಬಿದ್ರೆ ಪೆರಿಯಡ್ಕದಲ್ಲಿ ನೂರಾರು ರಬ್ಬರ್ ಮರಗಳು, ಅಡಿಕೆ ಮರ, ತೆಂಗಿನ ಮರ ಧಾರಶಾಹಿ: ಮನೆಗಳಿಗೆ ಹಾನಿ

Suddi Udaya

ಬೆನಕ ಆಸ್ಪತ್ರೆಯಿಂದ ಡಾ| ಕೇಶವ ರವರಿಗೆ ಗೌರವಾರ್ಪಣೆ

Suddi Udaya

ಅಳದಂಗಡಿ: ಕಿಶೋರ್-ಕಾವ್ಯ ದಂಪತಿ ವಿವಾಹ ಭೋಜನಾ ಕೂಟಕ್ಕೆ ಉಡುಪಿ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾ ಕುಮಾರಿ ಭಾಗಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಬಾಯಿ ಕ್ಯಾನ್ಸರ್‌ಗೆ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ಇಂದಬೆಟ್ಟು ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪದ್ಮುಂಜ: ಸ. ಹಿ. ಪ್ರಾ. ಶಾಲಾಭಿವೃದ್ಧಿ ಸಮಿತಿಯ ನೂತನ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ ಆಯ್ಕೆ

Suddi Udaya
error: Content is protected !!