33.6 C
ಪುತ್ತೂರು, ಬೆಳ್ತಂಗಡಿ
March 17, 2025
Uncategorized

ಸಾರ್ವಜನಿಕ ಪ್ರದೇಶದಲ್ಲಿ ಬೇಕಾಬಿಟ್ಟಿ ಕಸ ಎಸೆದವರಿಂದಲೇ ವಿಲೇವಾರಿ ಮಾಡಿ, ದಂಡ ವಿಧಿಸಿದ: ಲಾಯಿಲ ಗ್ರಾ‌ಪಂ ಪಿಡಿಓ ಶ್ರೀನಿವಾಸ್ ಡಿ ಪಿ ಹಾಗೂ ಲೆಕ್ಕ ಸಹಾಯಕಿ ಸುಪ್ರಿತಾ ಶೆಟ್ಟಿಯವರಿಗೆ ಸಾರ್ವಜನಿಕರಿಂದ ಪ್ರಶಂಸೆ

ಬೆಳ್ತಂಗಡಿ: ಲಾಯಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಪುತ್ರಬೈಲು ಎಂಬಲ್ಲಿ ಕಸ ತ್ಯಾಜ್ಯಗಳನ್ನು ಎಸೆದವರಿಂದಲೇ ಕಸವನ್ನು ವಿಲೇವಾರಿ ಮಾಡಿಸಿ ರೂ. 3 ಸಾವಿರ ದಂಡ ವಿಧಿಸಿದ ಘಟನೆ ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ನಡೆದಿದೆ.

ಮಾ‌.15 ರಂದು ಪೂರ್ವಾಹ್ನ ಸುಮಾರು 11.30 ಕ್ಕೆ ಲಾಯಿಲ ಗ್ರಾಮದ ಪುತ್ರಬೈಲು ಎಂಬಲ್ಲಿ ಕಸ ತ್ಯಾಜ್ಯಗಳನ್ನು ರಸ್ತೆ ಬದಿಯಲ್ಲಿ ಎಸೆದು ಹೋದ ಬಗ್ಗೆ ಬೆಳಕಿಗೆ ಬಂದಿದ್ದು,ಕಸದ ಚೀಲವನ್ನು ಪರಿಶೀಲಿಸಿದ ಸ್ಥಳೀಯರಾದ ಗಣೇಶ್ ಪ್ರಸಾದ್ ರವರು ಹೆಚ್ಚಿನ ಮುತುವರ್ಜಿ ವಹಿಸಿ ಕೆಲವೊಂದು ದಾಖಲೆಗಳೊಂದಿಗೆ ಗ್ರಾಮ ಪಂಚಾಯತ್ ಗೆ ಭೇಟಿ ನೀಡಿ ಪಂಚಾಯತ್ ಲೆಕ್ಕಸಹಾಯಕರಾದ ಸುಪ್ರೀತಾ ಶೆಟ್ಟಿಯವರ ಬಳಿ ವಿಷಯ ತಿಳಿಸಿದ ಕೂಡಲೇ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಕಸದ ಚೀಲವನ್ನು ಪರಿಶೀಲಿಸಿ ಸಂಬಂಧ ಪಟ್ಟ ವ್ಯಕ್ತಿಗಳನ್ನು ಸ್ಥಳಕ್ಕೆ ಕರೆಸಿ ತ್ಯಾಜ್ಯ ವಿಲೇವಾರಿ ಮಾಡಿಸಿದ್ದಲ್ಲದೇ ದಂಡನ ಶುಲ್ಕವನ್ನು ವಿಧಿಸಿದರು.

ಹೆಚ್ಚಿನ ಪರಿಶೀಲನೆ ನಡೆಸಿ ಇನ್ನೂ 3 ತ್ಯಾಜ್ಯಗಳ ಚೀಲಗಳು ರಸ್ತೆ ಬದಿ ಎಸೆದಿರುವುದು ಕಂಡುಬಂದಿದ್ದು, ಚೀಲಗಳನ್ನು ತೆರೆದಾಗ ಸಂಬಂಧ ಪಟ್ಟ ದಾಖಲೆಗಳು ದೊರೆತಿದ್ದು ಕೂಡಲೇ ಸಂಬಂಧಪಟ್ಟವರಿಗೆ ದೂರವಾಣಿ ಮೂಲಕ ಕರೆಸಿ ದಂಡನೆ ವಸೂಲಿ ಮಾಡಿಸಿದರು.

ಕಸ ವಿಲೇವಾರಿ ಮಾಡಿಸಿದ ಪಂಚಾಯತ್ ಪಿಡಿಓ ಶ್ರೀನಿವಾಸ್ ಡಿ.ಪಿ ಹಾಗೂ ಲೆಕ್ಕ ಸಹಾಯಕರಾದ ಸುಪ್ರಿತಾ ಶೆಟ್ಟಿಯವರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು.ಸ್ಥಳ ಪರಿಶೀಲನೆಯ ಸಂದರ್ಭದಲ್ಲಿ ಪಂಚಾಯತ್ ಸದಸ್ಯರಾದ ಅರವಿಂದ ಸ್ಥಳೀಯರಾದ ಗಣೇಶ್ ಪ್ರಸಾದ್ ಮತ್ತು ಮನೆಯವರು ಶ್ರದ್ದೆಶ್ ಹಾಗೂ ಸಾರ್ವಜನಿಕರು ಹೆಚ್ಚಿನ ಹಾಜರಿದ್ದರು.

Related posts

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಬಳಂಜ: ಜ್ಯೋತಿ ಮಹಿಳಾ ಮಂಡಲದಿಂದ ಸರಕಾರಿ ಶಾಲೆಯಲ್ಲಿ ಊರಿನವರ ಪಾತ್ರ ವಿಷಯದ ಬಗ್ಗೆ ಕಾರ್ಯಾಗಾರ

Suddi Udaya

ಕಾಯರ್ತಡ್ಕ ವಿ.ಹಿಂ.ಪ. ಬಜರಂಗದಳ ಗ್ರಾಮ ಸಮಿತಿ ವತಿಯಿಂದ ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನ ಆಚರಣೆ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಞವಸರ್ವಧರ್ಮ ಸಮ್ಮೇಳನದ 92ನೇ ಅಧಿವೇಶನ ಉದ್ಘಾಟನೆ

Suddi Udaya

ಅಕ್ರಮ ಗಣಿಗಾರಿಕೆ : ಶಶಿರಾಜ್ ಶೆಟ್ಟಿ ಮತ್ತು ಪ್ರಮೋದ್ ಗೌಡ ಜಾಮೀನು

Suddi Udaya

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಉಸ್ತುವಾರಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

Suddi Udaya
error: Content is protected !!