23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಸಾರ್ವಜನಿಕ ಪ್ರದೇಶದಲ್ಲಿ ಬೇಕಾಬಿಟ್ಟಿ ಕಸ ಎಸೆದವರಿಂದಲೇ ವಿಲೇವಾರಿ ಮಾಡಿ, ದಂಡ ವಿಧಿಸಿದ: ಲಾಯಿಲ ಗ್ರಾ‌ಪಂ ಪಿಡಿಓ ಶ್ರೀನಿವಾಸ್ ಡಿ ಪಿ ಹಾಗೂ ಲೆಕ್ಕ ಸಹಾಯಕಿ ಸುಪ್ರಿತಾ ಶೆಟ್ಟಿಯವರಿಗೆ ಸಾರ್ವಜನಿಕರಿಂದ ಪ್ರಶಂಸೆ

ಬೆಳ್ತಂಗಡಿ: ಲಾಯಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಪುತ್ರಬೈಲು ಎಂಬಲ್ಲಿ ಕಸ ತ್ಯಾಜ್ಯಗಳನ್ನು ಎಸೆದವರಿಂದಲೇ ಕಸವನ್ನು ವಿಲೇವಾರಿ ಮಾಡಿಸಿ ರೂ. 3 ಸಾವಿರ ದಂಡ ವಿಧಿಸಿದ ಘಟನೆ ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ನಡೆದಿದೆ.

ಮಾ‌.15 ರಂದು ಪೂರ್ವಾಹ್ನ ಸುಮಾರು 11.30 ಕ್ಕೆ ಲಾಯಿಲ ಗ್ರಾಮದ ಪುತ್ರಬೈಲು ಎಂಬಲ್ಲಿ ಕಸ ತ್ಯಾಜ್ಯಗಳನ್ನು ರಸ್ತೆ ಬದಿಯಲ್ಲಿ ಎಸೆದು ಹೋದ ಬಗ್ಗೆ ಬೆಳಕಿಗೆ ಬಂದಿದ್ದು,ಕಸದ ಚೀಲವನ್ನು ಪರಿಶೀಲಿಸಿದ ಸ್ಥಳೀಯರಾದ ಗಣೇಶ್ ಪ್ರಸಾದ್ ರವರು ಹೆಚ್ಚಿನ ಮುತುವರ್ಜಿ ವಹಿಸಿ ಕೆಲವೊಂದು ದಾಖಲೆಗಳೊಂದಿಗೆ ಗ್ರಾಮ ಪಂಚಾಯತ್ ಗೆ ಭೇಟಿ ನೀಡಿ ಪಂಚಾಯತ್ ಲೆಕ್ಕಸಹಾಯಕರಾದ ಸುಪ್ರೀತಾ ಶೆಟ್ಟಿಯವರ ಬಳಿ ವಿಷಯ ತಿಳಿಸಿದ ಕೂಡಲೇ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಕಸದ ಚೀಲವನ್ನು ಪರಿಶೀಲಿಸಿ ಸಂಬಂಧ ಪಟ್ಟ ವ್ಯಕ್ತಿಗಳನ್ನು ಸ್ಥಳಕ್ಕೆ ಕರೆಸಿ ತ್ಯಾಜ್ಯ ವಿಲೇವಾರಿ ಮಾಡಿಸಿದ್ದಲ್ಲದೇ ದಂಡನ ಶುಲ್ಕವನ್ನು ವಿಧಿಸಿದರು.

ಹೆಚ್ಚಿನ ಪರಿಶೀಲನೆ ನಡೆಸಿ ಇನ್ನೂ 3 ತ್ಯಾಜ್ಯಗಳ ಚೀಲಗಳು ರಸ್ತೆ ಬದಿ ಎಸೆದಿರುವುದು ಕಂಡುಬಂದಿದ್ದು, ಚೀಲಗಳನ್ನು ತೆರೆದಾಗ ಸಂಬಂಧ ಪಟ್ಟ ದಾಖಲೆಗಳು ದೊರೆತಿದ್ದು ಕೂಡಲೇ ಸಂಬಂಧಪಟ್ಟವರಿಗೆ ದೂರವಾಣಿ ಮೂಲಕ ಕರೆಸಿ ದಂಡನೆ ವಸೂಲಿ ಮಾಡಿಸಿದರು.

ಕಸ ವಿಲೇವಾರಿ ಮಾಡಿಸಿದ ಪಂಚಾಯತ್ ಪಿಡಿಓ ಶ್ರೀನಿವಾಸ್ ಡಿ.ಪಿ ಹಾಗೂ ಲೆಕ್ಕ ಸಹಾಯಕರಾದ ಸುಪ್ರಿತಾ ಶೆಟ್ಟಿಯವರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು.ಸ್ಥಳ ಪರಿಶೀಲನೆಯ ಸಂದರ್ಭದಲ್ಲಿ ಪಂಚಾಯತ್ ಸದಸ್ಯರಾದ ಅರವಿಂದ ಸ್ಥಳೀಯರಾದ ಗಣೇಶ್ ಪ್ರಸಾದ್ ಮತ್ತು ಮನೆಯವರು ಶ್ರದ್ದೆಶ್ ಹಾಗೂ ಸಾರ್ವಜನಿಕರು ಹೆಚ್ಚಿನ ಹಾಜರಿದ್ದರು.

Related posts

ಮುಂಡಾಜೆ: ಬಸ್ ಗೆ ಡಿಕ್ಕಿ ಹೊಡೆದು ಧರೆಗೆ ಗುದ್ದಿ ಪಲ್ಟಿಯಾದ ಕಾರು

Suddi Udaya

ಬೆಳ್ತಂಗಡಿ ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ – ಸಾಧಕ ವಿದ್ಯಾರ್ಥಿಗೆ ಸನ್ಮಾನ

Suddi Udaya

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗ್ರಾಮ ಅಧಿಕಾರಿಗಳಿಂದ ಅನಿರ್ದಿಷ್ಟ ಅವಧಿ ಮುಷ್ಕರ

Suddi Udaya

ಅಳಕ್ಕೆ ಬ್ರೈಟ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ಶಾಲಾ ವಾರ್ಷಿಕೋತ್ಸವದಲ್ಲಿ ಭಾಗವಹಿಸಿದ ರಕ್ಷಿತ್ ಶಿವರಾಮ್

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಉಜಿರೆ ಎಸ್.ಡಿ.ಎಮ್ ಆಂ.ಮಾ. ಸಿ.ಬಿ.ಎಸ್.ಇ ಶಾಲೆಗೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆ ಶೇ. 73.64 ಮತದಾನ

Suddi Udaya
error: Content is protected !!