September 6, 2026
ನಿಧನ

ಹಿರಿಯ ದಲಿತ ನಾಯಕ , ತಾ. ಪಂ ಮಾಜಿ ಉಪಾಧ್ಯಕ್ಷ ದಿ. ಚಂದು ಎಲ್ ರವರ ಸಹೋದರ , ಮಾಯಿಲ (ರಮೇಶ್ )ವಿಧಿವಶ

ಲಾಯಿಲ : ಹಿರಿಯ ದಲಿತ ನಾಯಕ , ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷರಾಗಿದ್ದ ದಿ. ಚಂದು ಎಲ್ ರವರ ಸಹೋದರ , ಲಾಯಿಲ ಗ್ರಾಮದ ನಿನ್ನಿಕಲ್ಲು ನಿವಾಸಿ ಮಾಯಿಲ(ರಮೇಶ್)(56) ರವರು ಅಲ್ಪಕಾಲದ ಅನಾರೋಗ್ಯದಿಂದ ಮಾರ್ಚ್ 15 ರಂದು ಶನಿವಾರ ಸ್ವಗೃಹದಲ್ಲಿ ನಿಧನರಾದರು.

ಹಿರಿಯ ಸೆಂಟ್ರಿಂಗ್ ಮೇಸ್ತ್ರಿಯಾಗಿದ್ದ ಅವರು ದಲಿತ ಚಳವಳಿಯಲ್ಲಿ ಗುರುತಿಸಿಕೊಂಡಿದ್ದರು. ಮೃತರು ಪತ್ನಿ ಸುನಂದಾ , ಪುತ್ರ ಸುದೀಪ್ , ಪುತ್ರಿ ಸುಪ್ರಿಯಾ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಮೃತರ ಮನೆಗೆ ಹಿರಿಯ ಉದ್ಯಮಿ , ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ನಡ ಇದರ ಅಧ್ಯಕ್ಷ ಸಯ್ಯದ್ ಹಬೀಬ್ ಸಾಹೇಬ್ , ಲಾಯಿಲ ಗ್ರಾಮ ಪಂಚಾಯತ್ ಸದಸ್ಯ ಪ್ರಸಾದ್ ಶೆಟ್ಟಿ ಏಣಿಂಜ , ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಶೇಖರ್ ಕುಕ್ಕೇಡಿ , ದಸಂಸ (ಅಂಬೇಡ್ಕರ್ ವಾದ) ಮೈಸೂರು ವಿಭಾಗ ಸಂಘಟನಾ ಸಂಚಾಲಕ ಬಿ.ಕೆ ವಸಂತ್ , ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯ ನೇಮಿರಾಜ್ ಕಿಲ್ಲೂರು , ದಸಂಸ (ಅಂಬೇಡ್ಕರ್ ವಾದ) ಸಂಚಾಲಕ ರಮೇಶ್ ಆರ್ , ಹಿರಿಯ ದಲಿತ ನಾಯಕರಾದ ವೆಂಕಣ್ಣ ಕೊಯ್ಯೂರು , ಸಂಜೀವ ಆರ್ , ಮಾನವ ಬಂಧುತ್ವ ವೇದಿಕೆ ಜಿಲ್ಲಾ ಸಂಚಾಲಕ ಚೆನ್ನಕೇಶವ , ಮುಂಡಾಜೆ ಸಿಎ ಬ್ಯಾಂಕ್ ನಿರ್ದೇಶಕ ರಾಘವ ಕಲ್ಮಂಜ , ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪ ವಿಭಾಗದ ನಿವೃತ್ತ ನೌಕರ ಶೀನ ಧರ್ಮಸ್ಥಳ ಸೇರಿದಂತೆ ನೂರಾರು ಜನರು ಭಾಗವಹಿಸಿ ಅಂತಿಮ ದರ್ಶನ ಪಡೆದರು.

Related posts

ಗುರುವಾಯನಕೆರೆ ಯರ್ಡೂರು ನಿವಾಸಿ ರಾಘವೇಂದ್ರ ಆಚಾರ್ಯ ನೈಕುಳಿ ನಿಧನ

Suddi Udaya

ನಾಪತ್ತೆಯಾಗಿದ್ದ ಯುವಕನ ಶವ ಪಲ್ಗುಣಿ ನದಿಯಲ್ಲಿ ಪತ್ತೆ

Suddi Udaya

ಕೊಕ್ಕಡ ನಿವಾಸಿ ರೇಖಾ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಮಡಂತ್ಯಾರು: ಪಾರೆಂಕಿ ನಿವಾಸಿ ರೋಬರ್ಟ್ ಡಿಸೋಜಾ ನಿಧನ

Suddi Udaya

ಪಣಕಜೆ ಕೃಷ್ಣನಗರ ನಿವಾಸಿ ಅಪ್ಪಿ ಶೆಟ್ಟಿ ನಿಧನ

Suddi Udaya

ಅರಸಿನಮಕ್ಕಿ: ಆಟೋ ಚಾಲಕ ಕೊರಗಪ್ಪ ಗೌಡ ನಿಧನ

Suddi Udaya
error: Content is protected !!