March 17, 2025
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಕ್ತದಾನ ಶಿಬಿರ

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ಇದರ ಎನ್‌ಎಸ್‌ಎಸ್ ಘಟಕ ಹಾಗೂ ಯುವ ರೆಡ್‌ಕ್ರಾಸ್ ಘಟಕದ ಪ್ರಾಯೋಜಕತ್ವದಲ್ಲಿ ರೋಟರಿ ಕ್ಲಬ್, ಬೆಳ್ತಂಗಡಿ ಮತ್ತು ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್, ಪುತ್ತೂರು ಇವುಗಳ ಸಹಭಾಗಿತ್ವದೊಂದಿಗೆ ರಕ್ತದಾನ ಶಿಬಿರವನ್ನು ಕಾಲೇಜಿನಲ್ಲಿ ಮಾ.15ರಂದು ಆಯೋಜಿಸಲಾಗಿತ್ತು .

ಉದ್ಯಮಿ ಹಾಗೂ ರೋಟರಿ ಕ್ಲಬ್, ಬೆಳ್ತಂಗಡಿ ಕಾರ್ಯದರ್ಶಿ ಸಂದೇಶ್ ರಾವ್ ಶಿಬಿರವನ್ನು ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಸಂತೋಷ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ರೋಟರಿ ಕ್ಯಾಂಪ್ಲೋ ಬ್ಲಡ್ ಬ್ಯಾಂಕ್ ಪುತ್ತೂರು ಇದರ ಹಿರಿಯ ವೈದ್ಯಾಧಿಕಾರಿ ಡಾ| ರಾಮಚಂದ್ರ ಭಟ್ ಹಾಗೂ ರೋಟರಿ ಕ್ಲಬ್ ಬೆಳ್ತಂಗಡಿ ಇದರ ಸದಸ್ಯ ಪ್ರವೀಣ್ ಪಾಲ್ಗೊಂಡಿದ್ದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕದ ಯೋಜನಾಧಿಕಾರಿ ಅವನೀಶ್ ಪಿ., ಎನ್‌ಎಸ್‌ಎಸ್ ಘಟಕದ ಯೋಜನಾಧಿಕಾರಿ ಪ್ರಕಾಶ್ ಮತ್ತು ಎನ್ ಎಸ್‌ಎಸ್‌ನ ಉಪ ಯೋಜನಾಧಿಕಾರಿಗಳಾದ ಪುಷ್ಪಲತಾ ಪಿ ಮತ್ತು ಲೋಹಿತ್ ಉಪಸ್ಥಿತರಿದ್ದರು.

ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಮತ್ತು ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಈ ರಕ್ತದಾನ ಶಿಬಿರದಲ್ಲಿ ಒಟ್ಟು 53 ಯೂನಿಟ್ ರಕ್ತ ಸಂಗ್ರಹಿಸಲಾಯಿತು.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

Suddi Udaya

ಧರ್ಮಸ್ಥಳ: ಕಟ್ಟದಬೈಲು ಅಂಗನವಾಡಿಯಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ಪ್ರಾಕೃತಿಕ ವಿಕೋಪಗಳು ಮತ್ತು ಸಾಂಕ್ರಾಮಿಕ ರೋಗಗಳಿಂದ ಸುರಕ್ಷತಾ ಜಾಗೃತಿ

Suddi Udaya

ಕುತ್ಲೂರು: ಪುನರ್ವಸತಿ ಹೊಂದಿರುವ ಫಲಾನುಭವಿಗಳಿಗೆ ಉಚಿತ ಕೃಷಿ ಉಪಕರಣಗಳ ವಿತರಣೆ

Suddi Udaya

ಫೆ.22: ಜಿಲ್ಲಾ ಮಾಗಣೆ ಮಟ್ಟದ ಕುಂಬಾರರ ಬೃಹತ್ ಸಮಾವೇಶ “ಕುಂಬಾ ಸಮಾಗಮ” ; ವಿವಿಧ ಸಾಧಕರಿಗೆ ಸನ್ಮಾನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸ್ವಜಾತಿ ಬಾಂಧವರ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ರಾಜ್ಯಮಟ್ಟದ ಕರಾಟೆಯಲ್ಲಿ ಸಾನ್ವಿ ಎಸ್ ಕೋಟ್ಯಾನ್ ರವರಿಗೆ ಪ್ರಶಸ್ತಿ

Suddi Udaya
error: Content is protected !!