23.7 C
ಪುತ್ತೂರು, ಬೆಳ್ತಂಗಡಿ
March 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಹೊಲಿಗೆ ತರಬೇತಿ ಸಮಾರೋಪ

ಗುರುವಾಯನಕೆರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ತಾಲೂಕಿನ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ 3 ತಿಂಗಳ ಕಾಲ ಕಣಿಯೂರು ವಲಯದ ಪಿಲಿಗೂಡು ಅಭಿನಂದನ್ ಜ್ಞಾನವಿಕಾಸ ಕೇಂದ್ರದಲ್ಲಿ ನಡೆದ ಹೊಲಿಗೆ ತರಬೇತಿ ಸಮಾರೋಪ ಸಮಾರಂಭ ಕಾರ್ಯಕ್ರಮ ನಡೆಯಿತು.

ಜನಜಾಗೃತಿ ವಲಯಧ್ಯಕ್ಷ ಪ್ರಫುಲ್ಲಚಂದ್ರ ಅಧ್ಯಾಯಣ್ತಯ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿ ಮಹಿಳೆಯರ ಏಳಿಗಾಗಿ ಜ್ಞಾನವಿಕಾಸ ಕೇಂದ್ರದಡಿಯಲ್ಲಿ ನಡೆದಂತಹ ಹೊಲಿಗೆ ತರಬೇತಿ ಬಹಳಷ್ಟು ಯಶಸ್ವಿಯಾಗಿದೆ ಹಾಗೂ ಕಲಿತ ವಿದ್ಯೆಯನ್ನು ಶ್ರದ್ಧೆಯಿಂದ ಜೀವನದಲ್ಲಿ ಅನುಷ್ಠಾನಿಸಬೇಕೆಂದರು.

ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್‌ರವರು ಮಾತನಾಡಿ ಟೈಲರಿಂಗ್ ತರಬೇತಿ ಪಡೆದ ಸದಸ್ಯರು ತಮ್ಮ ಜೀವನದಲ್ಲಿ ವೃತ್ತಿಯನ್ನು ನಿಷ್ಠೆಯಿಂದ ನಡೆಸುವುದು ಹಾಗೂ ಜ್ಞಾನವಿಕಾಸ ಕಾರ್ಯಕ್ರಮದಿಂದ ಮಹಿಳೆಯರ ಸಬಲೀಕರಣ ಆಗಬೇಕು ಎಂಬುವುದು ಹೇಮಾವತಿ ವೀ. ಹೆಗ್ಗಡೆಯವರ ಆಶಯ ಎಂದು ಜ್ಞಾನ ವಿಕಾಸ ಕಾರ್ಯಕ್ರಮಗಳ ಬಗ್ಗೆ ತಿಳಿಸಿದರು.

ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಜಾನಕಿ ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಹಲವಾರು ಕಾರ್ಯಕ್ರಮಗಳು ಅನುಷ್ಠಾನವಾಗುತ್ತಿರುವ ಬಗ್ಗೆ ಮಾತನಾಡಿದರು.

ಒಕ್ಕೂಟದ ಉಪಾಧ್ಯಕ್ಷೆ ಶ್ರೀಮತಿ ವೀಣಾ ಶುಭ ಹಾರೈಸಿದರು, ಟೈಲರಿಂಗ್ ಶಿಕ್ಷಕಿ, ಸೇವಾಪ್ರತಿನಿಧಿ ಹಾಗೂ ತರಬೇತಿ ಪಡೆದಿರುವ 32 ಜನ ಸದಸ್ಯರು ಉಪಸ್ಥಿತರಿದ್ದರು.

ಶ್ರೀಮತಿ ಆರೀಫ, ಸೌಮ್ಯ, ಕವಿತ ತರಬೇತಿಯ ಬಗ್ಗೆ ಅನಿಸಿಕೆಯನ್ನು ವ್ಯಕ್ತಪಡಿಸಿದರು. ತರಬೇತಿ ಪಡೆದ ಸದಸ್ಯರಿಗೆ ಪ್ರಮಾಣ ಪತ್ರವನ್ನು ವಿತರಿಸಲಾಯಿತು ಜ್ಞಾನವಿಕಾಸ ಸಮನ್ವಯಧಿಕಾರಿ ಶ್ರೀಮತಿ ಪೂರ್ಣಿಮಾ ಕಾರ್ಯಕ್ರಮ ನಿರೂಪಿಸಿದರು.

Related posts

ಮಚ್ಚಿನ: ಭಾಗ್ಯಶ್ರೀ ಮಿತ್ರ ಮಂಡಳಿ ನೆತ್ತರ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಂತೋಷ್ ಮಚ್ಚಗುರಿ

Suddi Udaya

ಓಡಿಲ್ನಾಳ: ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿಯ ವಿಶೇಷ ಪೂಜೆ

Suddi Udaya

ರಾಜ್ಯಮಟ್ಟದ ಡಿಸ್ಕಸ್ ಥ್ರೋ: ಬಳಂಜದ ಸುಷ್ಮಾ ಬಿ ಪೂಜಾರಿ ಪ್ರಥಮ

Suddi Udaya

ಗುರುವಾಯನಕೆರೆ ಎಕ್ಸೆಲ್ ನಲ್ಲಿ ಭಾರತೀಯ ಜೈನ್ ಮಿಲನ್ ಸಭೆ

Suddi Udaya

ಫ್ಯಾಷನ್ ಡಿಸೈನ್ ನಲ್ಲಿ ಮಂಗಳೂರು ವಿ.ವಿ. ಗೆ 3ನೇ ರ‍್ಯಾಂಕ್ ಪಡೆದ ಉಜಿರೆಯ ಹವನ ಪಿ. ಪೂಜಾರಿ

Suddi Udaya

ಲಾಯಿಲ: ಕರ್ನೋಡಿ ಸ.ಉ.ಹಿ. ಪ್ರಾಥಮಿಕ ಶಾಲಾ ಪ್ರಾರಂಭೋತ್ಸವದ ಸಂಭ್ರಮ

Suddi Udaya
error: Content is protected !!