May 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಹೊಲಿಗೆ ತರಬೇತಿ ಸಮಾರೋಪ

ಗುರುವಾಯನಕೆರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ತಾಲೂಕಿನ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ 3 ತಿಂಗಳ ಕಾಲ ಕಣಿಯೂರು ವಲಯದ ಪಿಲಿಗೂಡು ಅಭಿನಂದನ್ ಜ್ಞಾನವಿಕಾಸ ಕೇಂದ್ರದಲ್ಲಿ ನಡೆದ ಹೊಲಿಗೆ ತರಬೇತಿ ಸಮಾರೋಪ ಸಮಾರಂಭ ಕಾರ್ಯಕ್ರಮ ನಡೆಯಿತು.

ಜನಜಾಗೃತಿ ವಲಯಧ್ಯಕ್ಷ ಪ್ರಫುಲ್ಲಚಂದ್ರ ಅಧ್ಯಾಯಣ್ತಯ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿ ಮಹಿಳೆಯರ ಏಳಿಗಾಗಿ ಜ್ಞಾನವಿಕಾಸ ಕೇಂದ್ರದಡಿಯಲ್ಲಿ ನಡೆದಂತಹ ಹೊಲಿಗೆ ತರಬೇತಿ ಬಹಳಷ್ಟು ಯಶಸ್ವಿಯಾಗಿದೆ ಹಾಗೂ ಕಲಿತ ವಿದ್ಯೆಯನ್ನು ಶ್ರದ್ಧೆಯಿಂದ ಜೀವನದಲ್ಲಿ ಅನುಷ್ಠಾನಿಸಬೇಕೆಂದರು.

ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್‌ರವರು ಮಾತನಾಡಿ ಟೈಲರಿಂಗ್ ತರಬೇತಿ ಪಡೆದ ಸದಸ್ಯರು ತಮ್ಮ ಜೀವನದಲ್ಲಿ ವೃತ್ತಿಯನ್ನು ನಿಷ್ಠೆಯಿಂದ ನಡೆಸುವುದು ಹಾಗೂ ಜ್ಞಾನವಿಕಾಸ ಕಾರ್ಯಕ್ರಮದಿಂದ ಮಹಿಳೆಯರ ಸಬಲೀಕರಣ ಆಗಬೇಕು ಎಂಬುವುದು ಹೇಮಾವತಿ ವೀ. ಹೆಗ್ಗಡೆಯವರ ಆಶಯ ಎಂದು ಜ್ಞಾನ ವಿಕಾಸ ಕಾರ್ಯಕ್ರಮಗಳ ಬಗ್ಗೆ ತಿಳಿಸಿದರು.

ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಜಾನಕಿ ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಹಲವಾರು ಕಾರ್ಯಕ್ರಮಗಳು ಅನುಷ್ಠಾನವಾಗುತ್ತಿರುವ ಬಗ್ಗೆ ಮಾತನಾಡಿದರು.

ಒಕ್ಕೂಟದ ಉಪಾಧ್ಯಕ್ಷೆ ಶ್ರೀಮತಿ ವೀಣಾ ಶುಭ ಹಾರೈಸಿದರು, ಟೈಲರಿಂಗ್ ಶಿಕ್ಷಕಿ, ಸೇವಾಪ್ರತಿನಿಧಿ ಹಾಗೂ ತರಬೇತಿ ಪಡೆದಿರುವ 32 ಜನ ಸದಸ್ಯರು ಉಪಸ್ಥಿತರಿದ್ದರು.

ಶ್ರೀಮತಿ ಆರೀಫ, ಸೌಮ್ಯ, ಕವಿತ ತರಬೇತಿಯ ಬಗ್ಗೆ ಅನಿಸಿಕೆಯನ್ನು ವ್ಯಕ್ತಪಡಿಸಿದರು. ತರಬೇತಿ ಪಡೆದ ಸದಸ್ಯರಿಗೆ ಪ್ರಮಾಣ ಪತ್ರವನ್ನು ವಿತರಿಸಲಾಯಿತು ಜ್ಞಾನವಿಕಾಸ ಸಮನ್ವಯಧಿಕಾರಿ ಶ್ರೀಮತಿ ಪೂರ್ಣಿಮಾ ಕಾರ್ಯಕ್ರಮ ನಿರೂಪಿಸಿದರು.

Related posts

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಸಾಂಸ್ಕೃತಿಕ ವೈಭವ “ಕ್ರೀಡಾ ಕಲರವ 2023”

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿಯನ್ನು ರಚಿಸಲು ಶಿಫಾರಸ್ಸು ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ರಿಗೆ ಸಮಿತಿಯಿಂದ ಗೌರವಾರ್ಪಣೆ

Suddi Udaya

ಜೇಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಯುವ ದಿನಾಚರಣೆ ಪ್ರಯುಕ್ತ ತರಬೇತಿ

Suddi Udaya

ಕನ್ಯಾಡಿ ಸರಕಾರಿ ಉ.ಹಿ.ಪ್ರಾ. ಶಾಲೆಯಲ್ಲಿ ಆಟಿಡೊಂಜಿ ದಿನ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಬಂಡೆ ಕಲ್ಲಿಗೆ ಲಾರಿ ಡಿಕ್ಕಿ: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇಗುಲದ ಬ್ರಹ್ಮಕಲಶೋತ್ಸವ-ಧಾರ್ಮಿಕ ಸಭೆ

Suddi Udaya
error: Content is protected !!