23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಹೊಲಿಗೆ ತರಬೇತಿ ಸಮಾರೋಪ

ಗುರುವಾಯನಕೆರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ತಾಲೂಕಿನ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ 3 ತಿಂಗಳ ಕಾಲ ಕಣಿಯೂರು ವಲಯದ ಪಿಲಿಗೂಡು ಅಭಿನಂದನ್ ಜ್ಞಾನವಿಕಾಸ ಕೇಂದ್ರದಲ್ಲಿ ನಡೆದ ಹೊಲಿಗೆ ತರಬೇತಿ ಸಮಾರೋಪ ಸಮಾರಂಭ ಕಾರ್ಯಕ್ರಮ ನಡೆಯಿತು.

ಜನಜಾಗೃತಿ ವಲಯಧ್ಯಕ್ಷ ಪ್ರಫುಲ್ಲಚಂದ್ರ ಅಧ್ಯಾಯಣ್ತಯ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿ ಮಹಿಳೆಯರ ಏಳಿಗಾಗಿ ಜ್ಞಾನವಿಕಾಸ ಕೇಂದ್ರದಡಿಯಲ್ಲಿ ನಡೆದಂತಹ ಹೊಲಿಗೆ ತರಬೇತಿ ಬಹಳಷ್ಟು ಯಶಸ್ವಿಯಾಗಿದೆ ಹಾಗೂ ಕಲಿತ ವಿದ್ಯೆಯನ್ನು ಶ್ರದ್ಧೆಯಿಂದ ಜೀವನದಲ್ಲಿ ಅನುಷ್ಠಾನಿಸಬೇಕೆಂದರು.

ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್‌ರವರು ಮಾತನಾಡಿ ಟೈಲರಿಂಗ್ ತರಬೇತಿ ಪಡೆದ ಸದಸ್ಯರು ತಮ್ಮ ಜೀವನದಲ್ಲಿ ವೃತ್ತಿಯನ್ನು ನಿಷ್ಠೆಯಿಂದ ನಡೆಸುವುದು ಹಾಗೂ ಜ್ಞಾನವಿಕಾಸ ಕಾರ್ಯಕ್ರಮದಿಂದ ಮಹಿಳೆಯರ ಸಬಲೀಕರಣ ಆಗಬೇಕು ಎಂಬುವುದು ಹೇಮಾವತಿ ವೀ. ಹೆಗ್ಗಡೆಯವರ ಆಶಯ ಎಂದು ಜ್ಞಾನ ವಿಕಾಸ ಕಾರ್ಯಕ್ರಮಗಳ ಬಗ್ಗೆ ತಿಳಿಸಿದರು.

ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಜಾನಕಿ ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಹಲವಾರು ಕಾರ್ಯಕ್ರಮಗಳು ಅನುಷ್ಠಾನವಾಗುತ್ತಿರುವ ಬಗ್ಗೆ ಮಾತನಾಡಿದರು.

ಒಕ್ಕೂಟದ ಉಪಾಧ್ಯಕ್ಷೆ ಶ್ರೀಮತಿ ವೀಣಾ ಶುಭ ಹಾರೈಸಿದರು, ಟೈಲರಿಂಗ್ ಶಿಕ್ಷಕಿ, ಸೇವಾಪ್ರತಿನಿಧಿ ಹಾಗೂ ತರಬೇತಿ ಪಡೆದಿರುವ 32 ಜನ ಸದಸ್ಯರು ಉಪಸ್ಥಿತರಿದ್ದರು.

ಶ್ರೀಮತಿ ಆರೀಫ, ಸೌಮ್ಯ, ಕವಿತ ತರಬೇತಿಯ ಬಗ್ಗೆ ಅನಿಸಿಕೆಯನ್ನು ವ್ಯಕ್ತಪಡಿಸಿದರು. ತರಬೇತಿ ಪಡೆದ ಸದಸ್ಯರಿಗೆ ಪ್ರಮಾಣ ಪತ್ರವನ್ನು ವಿತರಿಸಲಾಯಿತು ಜ್ಞಾನವಿಕಾಸ ಸಮನ್ವಯಧಿಕಾರಿ ಶ್ರೀಮತಿ ಪೂರ್ಣಿಮಾ ಕಾರ್ಯಕ್ರಮ ನಿರೂಪಿಸಿದರು.

Related posts

ಬಂದಾರು: ಬಟ್ಲಡ್ಕ ದರ್ಗಾ ಶರೀಫ್ ನಲ್ಲಿ ಉರೂಸ್ ಮುಬಾರಕ್

Suddi Udaya

ಬೆಳ್ತಂಗಡಿಯಲ್ಲಿ ವಿಶ್ವ ಡೆಂಗ್ಯೂ ದಿನಾಚರಣೆ ಪ್ರಯುಕ್ತ ಕಾಲ್ನಡಿಗೆ ಜಾಥಾ

Suddi Udaya

ಶಿಬಾಜೆ ಹರೀಶ್ ಮುಗೇರ ಆತ್ಮಹತ್ಯೆಗೆ ಯತ್ನಿಸಿಲ್ಲ: ಎಸ್.ಪಿ ಸ್ಪಷ್ಟನೆ

Suddi Udaya

ಉಜಿರೆ ರತ್ನಮಾನಸ ವಸತಿ ನಿಲಯದಲ್ಲಿ ರಕ್ಷಾ ಬಂಧನ ಕಾರ್ಯಕ್ರಮ

Suddi Udaya

ಕಲ್ಮಂಜ: ಸತ್ಯನಪಲ್ಕೆ ಎಂಬಲ್ಲಿ ಸೇತುವೆ ಮೇಲೆ ಬಿದ್ದ ಬೃಹತ್ ಗಾತ್ರದ ಮರ: ಗ್ರಾಮಸ್ಥರಿಂದ ತೆರವು ಕಾರ್ಯ

Suddi Udaya

ಫೆ.11 : ಬೆಳ್ತಂಗಡಿ ಧರ್ಮಪ್ರಾಂತ್ಯ ಸ್ಥಾಪನೆಯ ಬೆಳ್ಳಿ ಹಬ್ಬದ ಸಂಭ್ರಮ : ಶ್ರೇಷ್ಠ ಮಹಾಧರ್ಮಾಧ್ಯಕ್ಷರುಗಳು ಭಾಗಿ -ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಚಿವರುಗಳು, ಡಾ.ಹೆಗ್ಗಡೆ ಆಗಮನ

Suddi Udaya
error: Content is protected !!