25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಂಗಳೂರು ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಗುರುವಾಯನಕೆರೆಯಲ್ಲಿ ನೂತನ ಶಾಖೆ ಉದ್ಘಾಟನೆ

ಗುರುವಾಯನಕೆರೆ : ಪಾಂಡುರಂಗ ಮಂದಿರ ಗುರುವಾಯನಕೆರೆ ಇಲ್ಲಿ ಪತಂಜಲಿ ಯೋಗ ಶಿಕ್ಷಣ ಸಮಿತಿಯ ವತಿಯಿಂದ 48 ದಿನಗಳ ಉಚಿತ ಯೋಗ ತರಬೇತಿ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಪತಂಜಲಿ ಯೋಗ ಶಿಕ್ಷಣ ಸಮಿತಿ ಮಂಗಳೂರು ಇದರ ಮಕ್ಕಳ ವಿಭಾಗದ ಪ್ರಮುಖ ಪ್ರಸಾದ್ ರವರು ದೀಪ ಬೆಳಗಿಸಿ ಬೌದ್ಧಿಕ್ ನೀಡಿ ಯೋಗದ ಮಹತ್ವ, ಯೋಗ ನಡೆದು ಬಂದ ದಾರಿ, ಪ್ರಸ್ತುತ ದಿನಗಳಲ್ಲಿ ಮಾನಸಿಕ ಹಾಗೂ ದೈಹಿಕ ಆರೋಗ್ಯಕ್ಕೆ ಯೋಗ ಶಿಕ್ಷಣದ ಅನಿವಾರ್ಯತೆಯ ಕುರಿತು ಬಹಳ ಮಹತ್ವದ ವಿಚಾರಗಳನ್ನು ತಿಳಿಸಿಕೊಟ್ಟರು.

ಮುಖ್ಯ ಅತಿಥಿಯಾಗಿ ನಾಗರಿಕ ಸೇವಾ ಟ್ರಸ್ಟೀ ಶ್ರೀಮತಿ ವಿದ್ಯಾ ನಾಯಕ್ ಮಾತನಾಡಿ ಸಂಸ್ಕಾರ, ಸಂಘಟನೆ ,ಸೇವೆಯಂತಹ ಶಿಕ್ಷಣವನ್ನು ನೀಡುವುದರೊಂದಿಗೆ ಉತ್ತಮ ನಾಗರಿಕರನ್ನು ರೂಪಿಸುವ ಕೆಲಸವನ್ನು ಸಮಿತಿ ಮಾಡುತ್ತಿದೆ ಎನ್ನುವುದರೊಂದಿಗೆ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ನಮ್ಮ ಮನೆ ಯೋಗ ಶಿಕ್ಷಕ ಭುಜಂಗ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶಾಖೆಯ ಮುನ್ನಲೆಗೆ ಶುಭಹಾರೈಸಿದರು. ಯೋಗ ಶಿಕ್ಷಣ ಸಮಿತಿಯ ಮಂಗಳೂರು ಪ್ರಾಂತ ಪ್ರಮುಖರಾದ ರವೀಶ , ಯೋಗ ಶಿಕ್ಷಣ ಸಮಿತಿಯ ಆನಂದ, ಮಾರ್ಗದರ್ಶಕರು ಯೋಗ ಶಿಕ್ಷಣ ಸಮಿತಿ ಉಪ್ಪಿನಂಗಡಿ ತಾಲುಕು , ಪ್ರದೀಪ ಯೋಗ ಶಿಕ್ಷಣ ಸಮಿತಿಯ ಶಿಕ್ಷಕರು ಸೂಕ್ತ ಮಾರ್ಗದರ್ಶನ ನೀಡಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರು ಸೇರಿ 105 ಮಂದಿ ಉಪಸ್ಥಿತರಿದ್ದರು. ನಮ್ಮ ಮನೆ ಶಾಖೆಯ ಶಿಕ್ಷಕ ಶಿವಣ್ಣ ಸ್ವಾಗತಿಸಿ, ಶಿಕ್ಷಕಿ ದಮಯಂತಿ ವಂದಿಸಿ, ಶಿಕ್ಷಕಿ ಭಾರತಿ ನಿರೂಪಿಸಿದರು. ನಮ್ಮ ಮನೆ ಯೋಗ ಬಂಧುಗಳಾದ ಪುರಂದರ, ಗಿರೀಶ ,ಅಶೋಕ, ಪ್ರಿಯ ,ಆಶಾ ಯೋಗದ ಅನುಭವಗಳನ್ನು ಹಂಚಿಕೊಂಡರು. ನಮ್ಮ ಮನೆ ಗುರುವಾಯನಕೆರೆ ಶಾಖೆಯ ಯೋಗ ಶಿಕ್ಷಕ ಬಂಧುಗಳು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

Related posts

ಸಾಂಸ್ಕೃತಿಕ ಸ್ಪರ್ಧೆ: ಎ ಎ ಅಕಾಡೆಮಿ ಸಹಯೋಗದ ಪ್ರಸನ್ನ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಉಜಿರೆ: ಅನುಗ್ರಹ ಶಾಲೆಯಲ್ಲಿ ರಸ್ತೆ ಸಂಚಾರ ಮತ್ತು ಸುರಕ್ಷಾ ಕ್ರಮದ ಬಗ್ಗೆ ಮಾಹಿತಿ ಕಾರ್‍ಯಗಾರ

Suddi Udaya

ಎಸ್. ಡಿ. ಎಂ. ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಪ್ರತಿನಿಧಿಗಳ ಮತ್ತು ಸ್ವಚ್ಛತಾ ಸೇನಾನಿಗಳ ಪದ ಪ್ರದಾನ ಸಮಾರಂಭ

Suddi Udaya

ಪಡ್ಡಂದಡ್ಕ ನಿವೃತ್ತ ಮುಖ್ಯೋಪಾಧ್ಯಾಯ ತಿರುಮಲೇಶ್ವರ ಭಟ್ಟರಿಗೆ ‘ಹವ್ಯಕ ಶಿಕ್ಷಕ ರತ್ನ’ ಪ್ರಶಸ್ತಿ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಅಳದಂಗಡಿ ಸಹಕಾರಿ ಸಂಘಕ್ಕೆ ಉತ್ತಮ ಪ್ರೋತ್ಸಾಹಕ ಪ್ರಶಸ್ತಿ

Suddi Udaya
error: Content is protected !!