25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಂಗಳೂರು ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಗುರುವಾಯನಕೆರೆಯಲ್ಲಿ ನೂತನ ಶಾಖೆ ಉದ್ಘಾಟನೆ

ಗುರುವಾಯನಕೆರೆ : ಪಾಂಡುರಂಗ ಮಂದಿರ ಗುರುವಾಯನಕೆರೆ ಇಲ್ಲಿ ಪತಂಜಲಿ ಯೋಗ ಶಿಕ್ಷಣ ಸಮಿತಿಯ ವತಿಯಿಂದ 48 ದಿನಗಳ ಉಚಿತ ಯೋಗ ತರಬೇತಿ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಪತಂಜಲಿ ಯೋಗ ಶಿಕ್ಷಣ ಸಮಿತಿ ಮಂಗಳೂರು ಇದರ ಮಕ್ಕಳ ವಿಭಾಗದ ಪ್ರಮುಖ ಪ್ರಸಾದ್ ರವರು ದೀಪ ಬೆಳಗಿಸಿ ಬೌದ್ಧಿಕ್ ನೀಡಿ ಯೋಗದ ಮಹತ್ವ, ಯೋಗ ನಡೆದು ಬಂದ ದಾರಿ, ಪ್ರಸ್ತುತ ದಿನಗಳಲ್ಲಿ ಮಾನಸಿಕ ಹಾಗೂ ದೈಹಿಕ ಆರೋಗ್ಯಕ್ಕೆ ಯೋಗ ಶಿಕ್ಷಣದ ಅನಿವಾರ್ಯತೆಯ ಕುರಿತು ಬಹಳ ಮಹತ್ವದ ವಿಚಾರಗಳನ್ನು ತಿಳಿಸಿಕೊಟ್ಟರು.

ಮುಖ್ಯ ಅತಿಥಿಯಾಗಿ ನಾಗರಿಕ ಸೇವಾ ಟ್ರಸ್ಟೀ ಶ್ರೀಮತಿ ವಿದ್ಯಾ ನಾಯಕ್ ಮಾತನಾಡಿ ಸಂಸ್ಕಾರ, ಸಂಘಟನೆ ,ಸೇವೆಯಂತಹ ಶಿಕ್ಷಣವನ್ನು ನೀಡುವುದರೊಂದಿಗೆ ಉತ್ತಮ ನಾಗರಿಕರನ್ನು ರೂಪಿಸುವ ಕೆಲಸವನ್ನು ಸಮಿತಿ ಮಾಡುತ್ತಿದೆ ಎನ್ನುವುದರೊಂದಿಗೆ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ನಮ್ಮ ಮನೆ ಯೋಗ ಶಿಕ್ಷಕ ಭುಜಂಗ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶಾಖೆಯ ಮುನ್ನಲೆಗೆ ಶುಭಹಾರೈಸಿದರು. ಯೋಗ ಶಿಕ್ಷಣ ಸಮಿತಿಯ ಮಂಗಳೂರು ಪ್ರಾಂತ ಪ್ರಮುಖರಾದ ರವೀಶ , ಯೋಗ ಶಿಕ್ಷಣ ಸಮಿತಿಯ ಆನಂದ, ಮಾರ್ಗದರ್ಶಕರು ಯೋಗ ಶಿಕ್ಷಣ ಸಮಿತಿ ಉಪ್ಪಿನಂಗಡಿ ತಾಲುಕು , ಪ್ರದೀಪ ಯೋಗ ಶಿಕ್ಷಣ ಸಮಿತಿಯ ಶಿಕ್ಷಕರು ಸೂಕ್ತ ಮಾರ್ಗದರ್ಶನ ನೀಡಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರು ಸೇರಿ 105 ಮಂದಿ ಉಪಸ್ಥಿತರಿದ್ದರು. ನಮ್ಮ ಮನೆ ಶಾಖೆಯ ಶಿಕ್ಷಕ ಶಿವಣ್ಣ ಸ್ವಾಗತಿಸಿ, ಶಿಕ್ಷಕಿ ದಮಯಂತಿ ವಂದಿಸಿ, ಶಿಕ್ಷಕಿ ಭಾರತಿ ನಿರೂಪಿಸಿದರು. ನಮ್ಮ ಮನೆ ಯೋಗ ಬಂಧುಗಳಾದ ಪುರಂದರ, ಗಿರೀಶ ,ಅಶೋಕ, ಪ್ರಿಯ ,ಆಶಾ ಯೋಗದ ಅನುಭವಗಳನ್ನು ಹಂಚಿಕೊಂಡರು. ನಮ್ಮ ಮನೆ ಗುರುವಾಯನಕೆರೆ ಶಾಖೆಯ ಯೋಗ ಶಿಕ್ಷಕ ಬಂಧುಗಳು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

Related posts

ಸೌಜನ್ಯಳ ಅತ್ಯಾಚಾರ, ಕೊಲೆ ಪ್ರಕರಣದ ಎಸ್ .ಐ.ಟಿ ತನಿಖೆಗೆ ಆಗ್ರಹ: ಬೆಳ್ತಂಗಡಿ ತಾಲೂಕು ಕಚೇರಿ ಎದುರು ಮಹಾಧರಣಿ ಆರಂಭ

Suddi Udaya

ಕುಸ್ತಿ ಪಂದ್ಯಾಟ: ಎಸ್.ಡಿ.ಎಮ್ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಸುಲ್ಕೇರಿ ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಂಘದ ಗುರುಪೂಜೆಯ ಪೂರ್ವಭಾವಿ ಸಭೆ

Suddi Udaya

ಆಳ್ವಾಸ್ ಪದವಿ ಕಾಲೇಜಿನಲ್ಲಿ ವಾರ್ಷಿಕ ಕಾರ್ಯಕ್ರಮ ‘ಇನಾಮು 2026’

Suddi Udaya

ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ

Suddi Udaya

ಮಿತ್ತಬಾಗಿಲು ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯ ವತಿಯಿಂದ ಆರ್ಥಿಕ ಸಹಾಯ

Suddi Udaya
error: Content is protected !!