ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಲಾಯಿಲ: ಪುತ್ರಬೈಲುನಲ್ಲಿ ನೂತನ ಗ್ರಂಥಾಲಯ ಉದ್ಘಾಟನೆ

ಬೆಳ್ತಂಗಡಿ: ಲಾಯಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಪುತ್ರಬೈಲು ಬಳಿ ದ.ಕ‌. ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಹಾಗೂ ಗ್ರಾಮ‌ ಪಂಚಾಯತ್ ಸಹಕಾರದಲ್ಲಿ ನಿರ್ಮಾಣಗೊಂಡ ನೂತನ ಗ್ರಂಥಾಲಯವನ್ನು ತಾ.ಪಂ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ ಉದ್ಘಾಟಿಸಿ ಗ್ರಂಥಾಲಯಗಳಿಗೆ ಸಾರ್ವಜನಿಕರು, ಭೇಟಿ ನೀಡುವ ಮೂಲಕ ಪುಸ್ತಕಗಳನ್ನು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು ಎಂದರು.

ಸದಸ್ಯ ಪ್ರಸಾದ್ ಶೆಟ್ಟಿ ಎಣಿಂಜೆ, ಪಿಡಿಒ ಶ್ರೀನಿವಾಸ್, ಸ್ಥಳೀಯರಾದ ಸುಂದರ್, ಸೇರಿದಂತೆ ಅನೇಕರು ಅನಿಸಿಕೆ ಹಂಚಿಕೊಂಡರು, ಗ್ರಂಥಾಲಯ ಉದ್ಘಾಟನೆ ವೇಳೆ ಪಟಾಕಿ ಸಿಡಿಸಿ ಸ್ಥಳೀಯರು ಸಂಭ್ರಮಿಸಿದರು. ಪಂಚಾಯತ್ ಅಧ್ಯಕ್ಷೆ ಜಯಂತಿ ಎಂ.ಕೆ. ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಸುಗಂಧಿ ಜಗನ್ನಾಥ್, ಸದಸ್ಯರುಗಳಾದ ದಿನೇಶ್ ಶೆಟ್ಟಿ, ಗಣೇಶ್ ಆರ್, ಆಶಾಲತಾ ಪ್ರಶಾಂತ್, ಮೋಹನದಾಸ್ , ಸ್ಥಳೀಯರಾದ ಸುರೇಶ್ ಬೈರ, ಜಗನ್ನಾಥ್ ಲಾಯಿಲ, ರಮೇಶ್ ಆರ್, ರಾಜೇಶ್ ಶೆಟ್ಟಿ ಗಣೇಶ್ ಗ್ಯಾರೇಜ್, ಪಂಚಾಯತ್ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಕಾರ್ಯದರ್ಶಿ ತಾರನಾಥ್ ಸ್ವಾಗತಿಸಿ, ಲೆಕ್ಕ ಸಹಾಯಕಿ ಸುಪ್ರಿತಾ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿ ಧನ್ಯವಾದವಿತ್ತರು.

Related posts

ಉಜಿರೆಯ ಪದ್ಮಶ್ರೀ ಎಂಟರ್ ಪ್ರೈಸಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ “ಪದ್ಮಶ್ರೀ ಬೆಳಕಿನ ಶಾಪಿಂಗ್ ಉತ್ಸವ”

Suddi Udaya

ಪಡಂಗಡಿ: ಕುದ್ರೆಂಜ ಬಳಿ ಸೇತುವೆ ಕುಸಿತ: ಸಂಪರ್ಕ ಕಡಿತ

Suddi Udaya

ಕನ್ಯಾಡಿ II ಸ.ಉ.ಹಿ.ಪ್ರಾ. ಶಾಲೆಯ ಸಹಶಿಕ್ಷಕ ವೀರಣ್ಣ ಶೆಟ್ಟಿರವರಿಗೆ ಸೇವಾ ನಿವೃತ್ತಿ

Suddi Udaya

ಡಿ.17: ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಂಭ್ರಮದ ಕೋರಿಜಾತ್ರೆ

Suddi Udaya

ಉಜಿರೆ ಗ್ರಾ.ಪಂ. ವತಿಯಿಂದ ಬೀದರ್ ಜಿಲ್ಲೆಗೆ ಅಧ್ಯಯನ ಪ್ರವಾಸ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya
error: Content is protected !!