March 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿರ್ಲಾಲು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

ಶಿರ್ಲಾಲು: ಇಲ್ಲಿಯ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಉಷಾ ರವರ ಅಧ್ಯಕ್ಷತೆಯಲ್ಲಿ ಮಾ.17ರಂದು ಪಂಚಾಯತ್ ಸಭಾಭವನದಲ್ಲಿ ಜರುಗಿತು.

ಮಾರ್ಗದರ್ಶಕ ಅಧಿಕಾರಿಯಾಗಿ ಬೆಳ್ತಂಗಡಿ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಜಗದೀಪ್ ಜೆ. ಭಾಗವಹಿಸಿ ಗ್ರಾಮಸಭೆಯನ್ನು ಮುನ್ನಡೆಸಿದರು.

ಸಭೆಯಲ್ಲಿ ಇಲಾಖಾ ಅಧಿಕಾರಿಗಳಿಂದ ವಿವಿಧ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.

ಗ್ರಾಮ ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಉಪಾಧ್ಯಕ್ಷ ಸೋಮನಾಥ ಬಂಗೇರ, ಗ್ರಾ.ಪಂ. ಸದಸ್ಯರಾದ ತಾರಾನಾಥ ಗೌಡ, ಕೊರಗಪ್ಪ, ಮಾಧವ, ಶ್ರೀಮತಿ ಜ್ಯೋತಿ ಪೂಜಾರಿ, ಶ್ರೀಮತಿ ಮಮತಾ ಜೈನ್, ಶ್ರೀಮತಿ ಗೀತಾ, ಶ್ರೀಮತಿ ಸುಶೀಲಾ, ಪ್ರಕಾಶ್ ಹೆಗ್ಡೆ, ಶ್ರೀಮತಿ ಗೀತಾ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸದಸ್ಯರು, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಶೀಲಾ ಸ್ವಾಗತಿಸಿ, ಅನುಪಾಲನ ವರದಿ ವಾಚಿಸಿದರು. ಕಾರ್ಯದರ್ಶಿ ಶ್ರೀಮತಿ ಮೋನಮ್ಮ ಜಮಾ ಖರ್ಚು ವಿವರ ವಾಚಿಸಿದರು. ಸಿಬ್ಬಂದಿಗಳಾದ ಸರೋಜಿನಿ ಎಚ್. ವಾರ್ಡ್ ಸಭೆಯ ಬೇಡಿಕೆ, ಪವಿತಾ ಧನ್ಯವಾದವಿತ್ತರು.

Related posts

ಗೇರುಕಟ್ಟೆ ಪ್ರೌಢ ಶಾಲಾ ಸಮೀಪ ಡೆಂಗ್ಯೂ, ಮಲೇರಿಯಾ ಹರಡುವ ಕೇಂದ್ರ ಸೃಷ್ಟಿ

Suddi Udaya

ಬೆಳ್ತಂಗಡಿ: ಹಳೆಕೋಟೆ ಡಿಸ್ಕೌಂಟ್ ಸೇಲ್ ಬಟ್ಟೆ ಮತ್ತು ಚಪ್ಪಲಿ ಅಂಗಡಿಯವರಿಂದ ವಯನಾಡ್ ನೆರೆ ಸಂತ್ರಸ್ತರಿಗೆ ದಿ‌ನಬಳಕೆ ವಸ್ತುಗಳ ಸಹಾಯಹಸ್ತ

Suddi Udaya

ಅರಸಿನಮಕ್ಕಿ: ಹತ್ಯಡ್ಕ ಪ್ರಾ.ಕೃ.ಪ.ಸ. ಸಂಘದ ವಾರ್ಷಿಕ ಮಹಾಸಭೆ

Suddi Udaya

ಬಳಂಜ: ತಾಯಿ-ಮಗನಿಗೆ ಜೀವ ಬೆದರಿಕೆ: ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya

ಬೆಳ್ತಂಗಡಿ ಎಸ್‌ಡಿಎಂ ಶಾಲೆಯಲ್ಲಿ ನಶಾಮುಕ್ತ ಭಾರತ ಅಭಿಯಾನದಡಿ ವಿದ್ಯಾರ್ಥಿಗಳಿಂದ ಪ್ರತಿಜ್ಞಾವಿಧಿ ಸ್ವೀಕಾರ

Suddi Udaya

ಮಚ್ಚಿನ ಕಾರ್ಯಕ್ಷೇತ್ರದ ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಟ್ಯೂಷನ್ ಕ್ಲಾಸ್ ಉದ್ಘಾಟನೆ

Suddi Udaya
error: Content is protected !!