March 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿರ್ಲಾಲು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

ಶಿರ್ಲಾಲು: ಇಲ್ಲಿಯ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಉಷಾ ರವರ ಅಧ್ಯಕ್ಷತೆಯಲ್ಲಿ ಮಾ.17ರಂದು ಪಂಚಾಯತ್ ಸಭಾಭವನದಲ್ಲಿ ಜರುಗಿತು.

ಮಾರ್ಗದರ್ಶಕ ಅಧಿಕಾರಿಯಾಗಿ ಬೆಳ್ತಂಗಡಿ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಜಗದೀಪ್ ಜೆ. ಭಾಗವಹಿಸಿ ಗ್ರಾಮಸಭೆಯನ್ನು ಮುನ್ನಡೆಸಿದರು.

ಸಭೆಯಲ್ಲಿ ಇಲಾಖಾ ಅಧಿಕಾರಿಗಳಿಂದ ವಿವಿಧ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.

ಗ್ರಾಮ ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಉಪಾಧ್ಯಕ್ಷ ಸೋಮನಾಥ ಬಂಗೇರ, ಗ್ರಾ.ಪಂ. ಸದಸ್ಯರಾದ ತಾರಾನಾಥ ಗೌಡ, ಕೊರಗಪ್ಪ, ಮಾಧವ, ಶ್ರೀಮತಿ ಜ್ಯೋತಿ ಪೂಜಾರಿ, ಶ್ರೀಮತಿ ಮಮತಾ ಜೈನ್, ಶ್ರೀಮತಿ ಗೀತಾ, ಶ್ರೀಮತಿ ಸುಶೀಲಾ, ಪ್ರಕಾಶ್ ಹೆಗ್ಡೆ, ಶ್ರೀಮತಿ ಗೀತಾ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸದಸ್ಯರು, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಶೀಲಾ ಸ್ವಾಗತಿಸಿ, ಅನುಪಾಲನ ವರದಿ ವಾಚಿಸಿದರು. ಕಾರ್ಯದರ್ಶಿ ಶ್ರೀಮತಿ ಮೋನಮ್ಮ ಜಮಾ ಖರ್ಚು ವಿವರ ವಾಚಿಸಿದರು. ಸಿಬ್ಬಂದಿಗಳಾದ ಸರೋಜಿನಿ ಎಚ್. ವಾರ್ಡ್ ಸಭೆಯ ಬೇಡಿಕೆ, ಪವಿತಾ ಧನ್ಯವಾದವಿತ್ತರು.

Related posts

ಅಪಘಾತದಲ್ಲಿ ಗಂಭೀರ ಗಾಯಗೊಂಡ ಉಜಿರೆಯ ಸುರೇಂದ್ರ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಮಕ್ಕಳಿಗೆ ಹಿಂದೂ ಸಂಸ್ಕಾರ ಶಿಬಿರ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ 552 ನೇ ಸೇವಾ ಯೋಜನೆ ಹಸ್ತಾಂತರ: ಬೆನ್ನುಮೂಳೆ ಮುರಿತಕ್ಕೊಳಗಾದವರಿಗೆ ಆಸರೆಯಾದ ರಾಜ ಕೇಸರಿ

Suddi Udaya

ತಣ್ಣೀರುಪಂತ: 7ನೇ ತರಗತಿ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಮೊಗ್ರು : ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25ಗಂಟೆಗಳ ನಿರಂತರ ಯೋಗ ತರಬೇತಿಯಲ್ಲಿ ಮುಗೇರಡ್ಕ ವಿದ್ಯಾಭಿಮಾನಿಗಳು ಭಾಗಿ

Suddi Udaya

ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ

Suddi Udaya
error: Content is protected !!