27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಉಜಿರೆ: ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯಿಂದ ಕಾಲೇಜು ವಿದ್ಯಾರ್ಥಿಗಳಿಗೆ ಕ್ವಿಜ್ ಸ್ಪರ್ಧೆ

ಉಜಿರೆ:ತೆರೆ ಮೆರೆಯಲ್ಲಿರುವ ನೂರಾರು ಪ್ರತಿಭೆಗಳನ್ನು ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಶಕ್ತಿಮೀರಿ ಪ್ರಯತ್ನಿಸುತ್ತಿರುವ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ಕೆಲಸ ಶ್ಲಾಘನೀಯವಾದುದು ಎಂದು ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆಯ ಉಪಸಂಪಾದಕರಾದ ಸಂತೋಷ್ ಪಿ ಕೋಟ್ಯಾನ್ ಬಳಂಜ ಹೇಳಿದರು.

ಅವರು ಮಾ 15 ರಂದು ಉಜಿರೆ ಎಸ್‌ಡಿಎಂ ಡಿಎಡ್ ಕಾಲೇಜಿನಲ್ಲಿ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಇದರ ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ ಕಾಲೇಜು ಮಕ್ಕಳಿಗಾಗಿ ಕ್ವಿಜ್ ಸ್ಪರ್ಧೆಯ ಬಹುಮಾನ ವಿತರಿಸಿ ಮಾತನಾಡಿದರು.

ಮುಖ್ಯ ಅತಿಥಿಗಳಾಗಿ ಎಸ್ ಡಿ ಎಮ್ ಡಿ ಎಡ್ ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಆಲ್ಬರ್ಟ್ ಸಲ್ಧಾನ ಮಾತನಾಡಿ ಕಲೆ,ಸಾಹಿತ್ಯಕ್ಕೆ ಪ್ರೋತ್ಸಾಹ ನೀಡುತ್ತಿರುವ ಆಮಂತ್ರಣ ಪರಿವಾರ ಸಂಘಟನೆಗೆ ಅಭಿನಂದನೆಗಳು.ಎಲ್ಲರಲ್ಲಿಯೂ ಒಂದೊಂದು ಕಲೆ ಅಡಗಿದೆ. ಅದನ್ನು ಹೊರ ತೆಗೆಯಲು ಅವಕಾಶವನ್ನು ಇಂತಹ ವೇದಿಕೆ ಕಲ್ಪಿಸುತ್ತಿದೆ ಎಂದರು‌

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಬೆಳ್ತಂಗಡಿ ಘಟಕದ ಅಧ್ಯಕ್ಷೆ ಶ್ರೀಮತಿ ವಿದ್ಯಾಶ್ರೀ ಅಡೂರ್ ಅವರು ವಹಿಸಿ ಕಾರ್ಯಕ್ರಮ ನಡೆಸಲು ಅವಕಾಶ ಕಲ್ಪಿಸಿದ ಎಸ್.ಡಿ.ಎಂ ಬಿಎಡ್ ಕಾಲೇಜಿಗೆ ಕೃತಜ್ಞತೆ ಅರ್ಪಿಸಿದರು‌

ವೇದಿಕೆಯಲ್ಲಿ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ಸಂಸ್ಥಾಪಕ ವಿಜಯಕುಮಾರ್ ಜೈನ್,ರಾಜ್ಯ ಸದಸ್ಯೆ ಶ್ರೀಮತಿ ಆಶಾ ಅಡೂರು, ಕಾಲೇಜನ ಪ್ರಾಧ್ಯಾಪಕರಾದ ಮಂಜು ಕೆ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಬೆಳ್ತಂಗಡಿ ಘಟಕದ ಸದಸ್ಯರಾದಂತಹ ಶ್ವೇತ ಗೋಡ್ಬೋಲೆ, ನಿರೀಕ್ಷಾ ನಂದಿ ಬೆಟ್ಟ, ಧನ್ಯಶ್ರೀ ಬೆಳಾಲು ಭಾಗವಹಿಸಿದ್ದರು.
ಕಾಲೇಜಿನ ಶಿಕ್ಷಕ ವೃಂದದವರಾದ ತಿರುಮಲೇಶ್ ರಾವ್, ಶ್ರೀಮತಿ ವಿದ್ಯಾಶ್ರೀ ಪಿ, ಶ್ರೀಮತಿ ಅನುಷಾ ಡಿಜೆ., ಶ್ರೀಮತಿ ಚೈತ್ರ, ಶ್ರೀಮತಿ ಪ್ರಿಯದರ್ಶಿನಿ ಸಹಕಾರವನ್ನು ನೀಡಿದರು.

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ಸದಸ್ಯೆ ರೇಣುಕಾ ಸುಧೀರ್ ಕಾರ್ಯಕ್ರಮ ನಿರೂಪಿಸಿದರು. ಶ್ರೀದೇವಿ ಸಚಿನ್ ಪ್ರಾರ್ಥನೆಯನ್ನು ಹಾಡಿದರು. ಕಾರ್ಯದರ್ಶಿ ಅಶ್ವಿಜ ಶ್ರೀಧರ್ ವಂದಿಸಿದರು.

ಸಂತಸ ಪಟ್ಟ ವಿದ್ಯಾರ್ಥಿಗಳು: ಸುಮಾರು 90 ವಿದ್ಯಾರ್ಥಿಗಳು ಕ್ವಿಜ್ ಸ್ಪರ್ಧೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಅಭೂತಪೂರ್ವವಾಗಿ ಯಶಸ್ವಿಗೊಳಿಸಿದರು. ನಂತರ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗಾಗಿ ಮೋಜಿನ ಆಟಗಳನ್ನು ಕೂಡ ಆಯೋಜಿಸಲಾಗಿತ್ತು.ಕರ್ನಾಟಕ ರಾಜ್ಯದಾದ್ಯಂತ ವಿವಿಧ ಭಾಗಗಳಿಂದ ಬಿಎಡ್ ಕಾಲೇಜಿನಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಈ ಒಂದು ದಿನದ ಚಟುವಟಿಕೆಯಿಂದಾಗಿ ಅತ್ಯಂತ ಸಂತಸ ಪಟ್ಟರು.

Related posts

ನಾಳ ದೇಗುಲದ ಗದ್ದೆಯಲ್ಲಿ ನೇಜಿ ನಾಟಿ

Suddi Udaya

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ : ರೂ. 1 ಕೋಟಿ ಲಾಭ, ಶೇ. 12 ಡಿವಿಡೆಂಡ್

Suddi Udaya

ಮಚ್ಚಿನ: ನೂತನ ವಿದ್ಯುತ್ ಕಂಬ ಅಳವಡಿಕೆ : ಸುದ್ದಿ ಉದಯ ಫಲಶ್ರುತಿ

Suddi Udaya

ದ.ಕ. ಜಿಲ್ಲಾ ಹಾಲು ಉತ್ಪಾದಕರ ನೌಕರರ ಒಕ್ಕೂಟದ ಅಧ್ಯಕ್ಷರಾಗಿ ಶರೀಫ್ ನೆರಿಯ ಆಯ್ಕೆ

Suddi Udaya

ಮರೋಡಿ: ಕೂಕ್ರಬೆಟ್ಟು ಶಾಲೆಗೆ “ಸರಕಾರಿ ಶಾಲೆ ಉಳಿಸಿ ಬೆಳೆಸಿ” ಸಮಿತಿ ರಾಜ್ಯಾಧ್ಯಕ್ಷ ಪ್ರಕಾಶ್ ಅಂಚನ್ ಭೇಟಿ

Suddi Udaya

ಮುಂಡಾಜೆ: ಕಾಯರ್ತೋಡಿಯಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಸ್ನೇಕ್ ಪ್ರಕಾಶ್

Suddi Udaya
error: Content is protected !!