May 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಂಗಳೂರು ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಗುರುವಾಯನಕೆರೆಯಲ್ಲಿ ನೂತನ ಶಾಖೆ ಉದ್ಘಾಟನೆ

ಗುರುವಾಯನಕೆರೆ : ಪಾಂಡುರಂಗ ಮಂದಿರ ಗುರುವಾಯನಕೆರೆ ಇಲ್ಲಿ ಪತಂಜಲಿ ಯೋಗ ಶಿಕ್ಷಣ ಸಮಿತಿಯ ವತಿಯಿಂದ 48 ದಿನಗಳ ಉಚಿತ ಯೋಗ ತರಬೇತಿ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಪತಂಜಲಿ ಯೋಗ ಶಿಕ್ಷಣ ಸಮಿತಿ ಮಂಗಳೂರು ಇದರ ಮಕ್ಕಳ ವಿಭಾಗದ ಪ್ರಮುಖ ಪ್ರಸಾದ್ ರವರು ದೀಪ ಬೆಳಗಿಸಿ ಬೌದ್ಧಿಕ್ ನೀಡಿ ಯೋಗದ ಮಹತ್ವ, ಯೋಗ ನಡೆದು ಬಂದ ದಾರಿ, ಪ್ರಸ್ತುತ ದಿನಗಳಲ್ಲಿ ಮಾನಸಿಕ ಹಾಗೂ ದೈಹಿಕ ಆರೋಗ್ಯಕ್ಕೆ ಯೋಗ ಶಿಕ್ಷಣದ ಅನಿವಾರ್ಯತೆಯ ಕುರಿತು ಬಹಳ ಮಹತ್ವದ ವಿಚಾರಗಳನ್ನು ತಿಳಿಸಿಕೊಟ್ಟರು.

ಮುಖ್ಯ ಅತಿಥಿಯಾಗಿ ನಾಗರಿಕ ಸೇವಾ ಟ್ರಸ್ಟೀ ಶ್ರೀಮತಿ ವಿದ್ಯಾ ನಾಯಕ್ ಮಾತನಾಡಿ ಸಂಸ್ಕಾರ, ಸಂಘಟನೆ ,ಸೇವೆಯಂತಹ ಶಿಕ್ಷಣವನ್ನು ನೀಡುವುದರೊಂದಿಗೆ ಉತ್ತಮ ನಾಗರಿಕರನ್ನು ರೂಪಿಸುವ ಕೆಲಸವನ್ನು ಸಮಿತಿ ಮಾಡುತ್ತಿದೆ ಎನ್ನುವುದರೊಂದಿಗೆ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ನಮ್ಮ ಮನೆ ಯೋಗ ಶಿಕ್ಷಕ ಭುಜಂಗ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶಾಖೆಯ ಮುನ್ನಲೆಗೆ ಶುಭಹಾರೈಸಿದರು. ಯೋಗ ಶಿಕ್ಷಣ ಸಮಿತಿಯ ಮಂಗಳೂರು ಪ್ರಾಂತ ಪ್ರಮುಖರಾದ ರವೀಶ , ಯೋಗ ಶಿಕ್ಷಣ ಸಮಿತಿಯ ಆನಂದ, ಮಾರ್ಗದರ್ಶಕರು ಯೋಗ ಶಿಕ್ಷಣ ಸಮಿತಿ ಉಪ್ಪಿನಂಗಡಿ ತಾಲುಕು , ಪ್ರದೀಪ ಯೋಗ ಶಿಕ್ಷಣ ಸಮಿತಿಯ ಶಿಕ್ಷಕರು ಸೂಕ್ತ ಮಾರ್ಗದರ್ಶನ ನೀಡಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರು ಸೇರಿ 105 ಮಂದಿ ಉಪಸ್ಥಿತರಿದ್ದರು. ನಮ್ಮ ಮನೆ ಶಾಖೆಯ ಶಿಕ್ಷಕ ಶಿವಣ್ಣ ಸ್ವಾಗತಿಸಿ, ಶಿಕ್ಷಕಿ ದಮಯಂತಿ ವಂದಿಸಿ, ಶಿಕ್ಷಕಿ ಭಾರತಿ ನಿರೂಪಿಸಿದರು. ನಮ್ಮ ಮನೆ ಯೋಗ ಬಂಧುಗಳಾದ ಪುರಂದರ, ಗಿರೀಶ ,ಅಶೋಕ, ಪ್ರಿಯ ,ಆಶಾ ಯೋಗದ ಅನುಭವಗಳನ್ನು ಹಂಚಿಕೊಂಡರು. ನಮ್ಮ ಮನೆ ಗುರುವಾಯನಕೆರೆ ಶಾಖೆಯ ಯೋಗ ಶಿಕ್ಷಕ ಬಂಧುಗಳು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

Related posts

ಸ್ವಚ್ಛ ಸರ್ವೇಕ್ಷಣ ಗ್ರಾಮೀಣ ಸಮೀಕ್ಷೆ: ಕಾಶಿಪಟ್ಣ ಗ್ರಾಮ ಪಂಚಾಯತು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ : ಹಳೇಕೋಟೆ ಬಳಿ ಪಿಕಪ್ ಗೆ ಬೈಕ್ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು ; ಮತ್ತೋರ್ವ ಗಂಭೀರ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಉಜಿರೆ ಉದ್ಯಮಿ ಮೋಹನ್ ಕುಮಾರ್ ರವರಿಂದ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಭಾಗವಹಿಸುವ ಬಂದಾರು ಶಾಲೆ ವಿದ್ಯಾರ್ಥಿಗಳಿಗೆ ಶುಭಹಾರೈಕೆ: ಮುಂಡತ್ತೋಡಿ ಶಾಲಾ 51 ವಿದ್ಯಾರ್ಥಿಗಳಿಗೆ ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ವೇಣೂರು: ಆಟೋ ಚಾಲಕ ಅನಿಲ್ ಕುಮಾರ್ ನಿಧನ

Suddi Udaya

ಬೆಳ್ತಂಗಡಿ: ಸುಂಕದಕಟ್ಟೆ ಅಂಬಿಕಾ ಅನ್ನಪೂರ್ಣೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯ 50ನೇ ವರ್ಷದ ಉದ್ಘಾಟನೆ

Suddi Udaya

ಗೇರುಕಟ್ಟೆ ಆಟೋ ಚಾಲಕರ ಸಂಘದ ವತಿಯಿಂದ ಶಿವರಾಮ ಪೂಜಾರಿ ರವರಿಗೆ ಧನಸಹಾಯ

Suddi Udaya
error: Content is protected !!