23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಂಗಳೂರು ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಗುರುವಾಯನಕೆರೆಯಲ್ಲಿ ನೂತನ ಶಾಖೆ ಉದ್ಘಾಟನೆ

ಗುರುವಾಯನಕೆರೆ : ಪಾಂಡುರಂಗ ಮಂದಿರ ಗುರುವಾಯನಕೆರೆ ಇಲ್ಲಿ ಪತಂಜಲಿ ಯೋಗ ಶಿಕ್ಷಣ ಸಮಿತಿಯ ವತಿಯಿಂದ 48 ದಿನಗಳ ಉಚಿತ ಯೋಗ ತರಬೇತಿ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಪತಂಜಲಿ ಯೋಗ ಶಿಕ್ಷಣ ಸಮಿತಿ ಮಂಗಳೂರು ಇದರ ಮಕ್ಕಳ ವಿಭಾಗದ ಪ್ರಮುಖ ಪ್ರಸಾದ್ ರವರು ದೀಪ ಬೆಳಗಿಸಿ ಬೌದ್ಧಿಕ್ ನೀಡಿ ಯೋಗದ ಮಹತ್ವ, ಯೋಗ ನಡೆದು ಬಂದ ದಾರಿ, ಪ್ರಸ್ತುತ ದಿನಗಳಲ್ಲಿ ಮಾನಸಿಕ ಹಾಗೂ ದೈಹಿಕ ಆರೋಗ್ಯಕ್ಕೆ ಯೋಗ ಶಿಕ್ಷಣದ ಅನಿವಾರ್ಯತೆಯ ಕುರಿತು ಬಹಳ ಮಹತ್ವದ ವಿಚಾರಗಳನ್ನು ತಿಳಿಸಿಕೊಟ್ಟರು.

ಮುಖ್ಯ ಅತಿಥಿಯಾಗಿ ನಾಗರಿಕ ಸೇವಾ ಟ್ರಸ್ಟೀ ಶ್ರೀಮತಿ ವಿದ್ಯಾ ನಾಯಕ್ ಮಾತನಾಡಿ ಸಂಸ್ಕಾರ, ಸಂಘಟನೆ ,ಸೇವೆಯಂತಹ ಶಿಕ್ಷಣವನ್ನು ನೀಡುವುದರೊಂದಿಗೆ ಉತ್ತಮ ನಾಗರಿಕರನ್ನು ರೂಪಿಸುವ ಕೆಲಸವನ್ನು ಸಮಿತಿ ಮಾಡುತ್ತಿದೆ ಎನ್ನುವುದರೊಂದಿಗೆ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ನಮ್ಮ ಮನೆ ಯೋಗ ಶಿಕ್ಷಕ ಭುಜಂಗ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶಾಖೆಯ ಮುನ್ನಲೆಗೆ ಶುಭಹಾರೈಸಿದರು. ಯೋಗ ಶಿಕ್ಷಣ ಸಮಿತಿಯ ಮಂಗಳೂರು ಪ್ರಾಂತ ಪ್ರಮುಖರಾದ ರವೀಶ , ಯೋಗ ಶಿಕ್ಷಣ ಸಮಿತಿಯ ಆನಂದ, ಮಾರ್ಗದರ್ಶಕರು ಯೋಗ ಶಿಕ್ಷಣ ಸಮಿತಿ ಉಪ್ಪಿನಂಗಡಿ ತಾಲುಕು , ಪ್ರದೀಪ ಯೋಗ ಶಿಕ್ಷಣ ಸಮಿತಿಯ ಶಿಕ್ಷಕರು ಸೂಕ್ತ ಮಾರ್ಗದರ್ಶನ ನೀಡಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರು ಸೇರಿ 105 ಮಂದಿ ಉಪಸ್ಥಿತರಿದ್ದರು. ನಮ್ಮ ಮನೆ ಶಾಖೆಯ ಶಿಕ್ಷಕ ಶಿವಣ್ಣ ಸ್ವಾಗತಿಸಿ, ಶಿಕ್ಷಕಿ ದಮಯಂತಿ ವಂದಿಸಿ, ಶಿಕ್ಷಕಿ ಭಾರತಿ ನಿರೂಪಿಸಿದರು. ನಮ್ಮ ಮನೆ ಯೋಗ ಬಂಧುಗಳಾದ ಪುರಂದರ, ಗಿರೀಶ ,ಅಶೋಕ, ಪ್ರಿಯ ,ಆಶಾ ಯೋಗದ ಅನುಭವಗಳನ್ನು ಹಂಚಿಕೊಂಡರು. ನಮ್ಮ ಮನೆ ಗುರುವಾಯನಕೆರೆ ಶಾಖೆಯ ಯೋಗ ಶಿಕ್ಷಕ ಬಂಧುಗಳು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

Related posts

ಉಜಿರೆ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾಗಿ ವನಿತಾ ವಿ.ಶೆಟ್ಟಿ, ಕಾರ್ಯದರ್ಶಿಯಾಗಿ ಸುದೇಶ್ ಶೆಟ್ಟಿ ಆಯ್ಕೆ

Suddi Udaya

ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಕಚೇರಿಗೆ ಅಮೆರಿಕದ ಪೆನ್ಸಿಲ್ವೇನಿಯ ವಿಶ್ವವಿದ್ಯಾಲಯದ ಅಧ್ಯಯನ ತಂಡ ಭೇಟಿ

Suddi Udaya

ಉಜಿರೆ: ಶ್ರೀ ವನದುರ್ಗಾ, ಶ್ರೀ ನಾಗಬ್ರಹ್ಮ ರಕ್ತೇಶ್ವರಿ ದೈವ ಮತ್ತು ಪರಿವಾರ ದೇವತೆಗಳ ವಾರ್ಷಿಕ ಆರಾಧನೆ, ನೂರಾರು ಭಕ್ತರು ಭಾಗಿ

Suddi Udaya

AISECT ಯುನಿವರ್ಸಿಟಿ ಕರ್ನಾಟಕ ರಾಜ್ಯ ಸಮ್ಮೇಳನ 2025: ದ.ಕ. ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣಕ್ಕೆ ಬೆಳ್ತಂಗಡಿ ಅನುಗ್ರಹ ಟ್ರೈನಿಂಗ್ ಕಾಲೇಜಿನಿಂದ ಶೈಕ್ಷಣಿಕ ಶಕ್ತಿ

Suddi Udaya

ಬೆಳ್ತಂಗಡಿ ಮಹಿಳಾ ಮಂಡಲದ ವತಿಯಿಂದ ಸಿಯೋನ್ ಆಶ್ರಮದ ಆಡಳಿತ ಟ್ರಸ್ಟಿ ಶ್ರೀಮತಿ ಮೇರಿ ಯು.ಪಿ. ರವರಿಗೆ ಸನ್ಮಾನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಚಿತ್ರಕಲಾ ಸ್ಪರ್ಧೆ: ಉಜಿರೆ ಅನುಗ್ರಹ ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಪುಷ್ಟಿ ಮುಂಡಾಜೆ ಪ್ರಥಮ ಸ್ಥಾನ

Suddi Udaya
error: Content is protected !!