July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಂಗಳೂರು ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಗುರುವಾಯನಕೆರೆಯಲ್ಲಿ ನೂತನ ಶಾಖೆ ಉದ್ಘಾಟನೆ

ಗುರುವಾಯನಕೆರೆ : ಪಾಂಡುರಂಗ ಮಂದಿರ ಗುರುವಾಯನಕೆರೆ ಇಲ್ಲಿ ಪತಂಜಲಿ ಯೋಗ ಶಿಕ್ಷಣ ಸಮಿತಿಯ ವತಿಯಿಂದ 48 ದಿನಗಳ ಉಚಿತ ಯೋಗ ತರಬೇತಿ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಪತಂಜಲಿ ಯೋಗ ಶಿಕ್ಷಣ ಸಮಿತಿ ಮಂಗಳೂರು ಇದರ ಮಕ್ಕಳ ವಿಭಾಗದ ಪ್ರಮುಖ ಪ್ರಸಾದ್ ರವರು ದೀಪ ಬೆಳಗಿಸಿ ಬೌದ್ಧಿಕ್ ನೀಡಿ ಯೋಗದ ಮಹತ್ವ, ಯೋಗ ನಡೆದು ಬಂದ ದಾರಿ, ಪ್ರಸ್ತುತ ದಿನಗಳಲ್ಲಿ ಮಾನಸಿಕ ಹಾಗೂ ದೈಹಿಕ ಆರೋಗ್ಯಕ್ಕೆ ಯೋಗ ಶಿಕ್ಷಣದ ಅನಿವಾರ್ಯತೆಯ ಕುರಿತು ಬಹಳ ಮಹತ್ವದ ವಿಚಾರಗಳನ್ನು ತಿಳಿಸಿಕೊಟ್ಟರು.

ಮುಖ್ಯ ಅತಿಥಿಯಾಗಿ ನಾಗರಿಕ ಸೇವಾ ಟ್ರಸ್ಟೀ ಶ್ರೀಮತಿ ವಿದ್ಯಾ ನಾಯಕ್ ಮಾತನಾಡಿ ಸಂಸ್ಕಾರ, ಸಂಘಟನೆ ,ಸೇವೆಯಂತಹ ಶಿಕ್ಷಣವನ್ನು ನೀಡುವುದರೊಂದಿಗೆ ಉತ್ತಮ ನಾಗರಿಕರನ್ನು ರೂಪಿಸುವ ಕೆಲಸವನ್ನು ಸಮಿತಿ ಮಾಡುತ್ತಿದೆ ಎನ್ನುವುದರೊಂದಿಗೆ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ನಮ್ಮ ಮನೆ ಯೋಗ ಶಿಕ್ಷಕ ಭುಜಂಗ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶಾಖೆಯ ಮುನ್ನಲೆಗೆ ಶುಭಹಾರೈಸಿದರು. ಯೋಗ ಶಿಕ್ಷಣ ಸಮಿತಿಯ ಮಂಗಳೂರು ಪ್ರಾಂತ ಪ್ರಮುಖರಾದ ರವೀಶ , ಯೋಗ ಶಿಕ್ಷಣ ಸಮಿತಿಯ ಆನಂದ, ಮಾರ್ಗದರ್ಶಕರು ಯೋಗ ಶಿಕ್ಷಣ ಸಮಿತಿ ಉಪ್ಪಿನಂಗಡಿ ತಾಲುಕು , ಪ್ರದೀಪ ಯೋಗ ಶಿಕ್ಷಣ ಸಮಿತಿಯ ಶಿಕ್ಷಕರು ಸೂಕ್ತ ಮಾರ್ಗದರ್ಶನ ನೀಡಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರು ಸೇರಿ 105 ಮಂದಿ ಉಪಸ್ಥಿತರಿದ್ದರು. ನಮ್ಮ ಮನೆ ಶಾಖೆಯ ಶಿಕ್ಷಕ ಶಿವಣ್ಣ ಸ್ವಾಗತಿಸಿ, ಶಿಕ್ಷಕಿ ದಮಯಂತಿ ವಂದಿಸಿ, ಶಿಕ್ಷಕಿ ಭಾರತಿ ನಿರೂಪಿಸಿದರು. ನಮ್ಮ ಮನೆ ಯೋಗ ಬಂಧುಗಳಾದ ಪುರಂದರ, ಗಿರೀಶ ,ಅಶೋಕ, ಪ್ರಿಯ ,ಆಶಾ ಯೋಗದ ಅನುಭವಗಳನ್ನು ಹಂಚಿಕೊಂಡರು. ನಮ್ಮ ಮನೆ ಗುರುವಾಯನಕೆರೆ ಶಾಖೆಯ ಯೋಗ ಶಿಕ್ಷಕ ಬಂಧುಗಳು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

Related posts

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಕಛೇರಿಗೆ ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಭೇಟಿ-ಭಾರತ್ ಬ್ಯಾಂಕಿನ‌ ಅಧ್ಯಕ್ಷ ಸೂರ್ಯಕಾಂತ್ ಜೆ ಸುವರ್ಣರವರಿಗೆ ಶ್ರೀ ಗುರುದೇವ ಸೊಸೈಟಿಯಿಂದ ಗೌರವಾರ್ಪಣೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ

Suddi Udaya

ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ರವರ ಹುಟ್ಟು ಹಬ್ಬದ ಪ್ರಯುಕ್ತ ಅಭಿಮಾನಿ ಬಳಗದಿಂದ ಮಂಗಳೂರು ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಡಿ.3: ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದ ಮರು ತನಿಖೆಗೆ ಒತ್ತಾಯಿಸಿ “ಜನಾಂದೋಲನ ಸಭೆ”: ರಕ್ತದ ಸಹಿಯ ಮೂಲಕ ಪ್ರಧಾನ ಮಂತ್ರಿ ಹಾಗೂ ಮುಖ್ಯಮಂತ್ರಿಯವರಿಗೆ ಮನವಿ

Suddi Udaya

ಮರೋಡಿ: ಏ.22ರಂದು ಸಾರ್ವಜನಿಕ ಶ್ರೀ ಶನೈಶ್ವರ ಪೂಜೆ

Suddi Udaya

ಪುಂಜಾಲಕಟ್ಟೆ: ಪ್ರಸೂತಿ ತಜ್ಞೆ, ನಾಟಿ ವೈದ್ಯೆ ಶ್ರೀಮತಿ ಅಪ್ಪಿ ಪೂಜಾರಿ ಉರ್ಕಲೊಟ್ಟು ನಿಧನ

Suddi Udaya
error: Content is protected !!