24.1 C
ಪುತ್ತೂರು, ಬೆಳ್ತಂಗಡಿ
May 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ದೀಪದ ಬತ್ತಿ ತಯಾರಿ ತರಬೇತಿಯ ಸಮಾರೋಪ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ-ಬೆಳ್ತಂಗಡಿ ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ಕೌಶಲ್ಯಾಭಿವೃದ್ಧಿ ಯೋಜನೆಯಡಿ ದೀಪದ ಬತ್ತಿ ತಯಾರಿಕಾ ತರಬೇತಿಯ ಸಮಾರೋಪ ಕಾರ‍್ಯಕ್ರಮದಲ್ಲಿ ತಾ.ಪಂ. ಇ. ಓ. ಭವಾನಿ ಶಂಕರ್ ಭಾಗವಹಿಸಿ ಅವಕಾಶಗಳು ಬಂದಾಗ ಅದನ್ನು ನಾವು ಬಳಸಿಕೊಳ್ಳುವುದು ನಮ್ಮ ಜಾಣತನ.

ಮಹಿಳೆಯರಿಗೆ ಸ್ವ ಉದ್ಯೋಗ ಮಾಡಲು ಹಲವಾರು ದಾರಿಗಳಿವೆ. ಆ ದಾರಿಗೆ ಸರಿಯಾದ ಯೋಜನೆ ಹಾಕಿಕೊಂಡಲ್ಲಿ ಮಹಿಳೆಯರು ದುಡಿಮೆ ಮಾಡಲು ಸಾಧ್ಯ ಎಂದರು. ಆ ನಂತರ ತರಬೇತಿ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ವಿತರಿಸಿ ಶುಭಹಾರೈಸಿದರು.

ಒಟ್ಟು 37 ಮಂದಿ ಭಾಗವಹಿಸಿ ತರಬೇತಿಯ ಸದುಪಯೋಗ ಪಡೆದುಕೊಂಡಿದ್ದಾರೆ. ಕಾರ‍್ಯಕ್ರಮದಲ್ಲಿ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಸೋಮನಾಥ್‌ ಕೆ, ತಾಲೂಕು ಪಂಚಾಯತ್‌ ತರಬೇತುದಾರರು ಸುಧಾಮಣಿ ಉಪಸ್ಥಿತರಿದ್ದರು. ತರಬೇತಿ ನೀಡಲು ಪುತ್ತೂರು ದೀಪದ ಬತ್ತಿ ತಯಾರಿಕಾ ಸಂಸ್ಥೆಯ ಮಾಲಕ ಪುನೀತ್‌ ಹಾಗೂ ಶಿಶಿರ್‌ ಇವರು ಮೆಷಿನ್‌ ಮೂಲಕ ಬತ್ತಿ ತಯಾರಿಕೆ ಮತ್ತು ಪ್ಯಾಕಿಂಗ್‌ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ತರಬೇತಿ ನೀಡಿದರು. ತರಬೇತಿ ಸಂಯೋಜಕರಾದ ಜಯಶ್ರೀ ಕಾರ‍್ಯಕ್ರಮ ನಿರ್ವಹಣೆ ಮಾಡಿ ಧನ್ಯವಾದ ನೀಡಿದರು.

Related posts

ಸಾಂಸ್ಕೃತಿಕ ಸ್ಪರ್ಧೆ: ವಾಣಿ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಪುಂಜಾಲಕಟ್ಟೆ ಯುವಕ ಸೈನೇಡ್ ಸೇವಿಸಿ ಆತ್ಮಹತ್ಯೆ

Suddi Udaya

ಪೆರಾಲ್ದರಕಟ್ಟೆ ಎಸ್.ಕೆ.ಎಸ್.ಎಸ್.ಎಫ್ ಶಾಖೆಯ ಪದಾಧಿಕಾರಿಗಳ ಆಯ್ಕೆ

Suddi Udaya

ಕುದ್ಯಾಡಿ ಸ. ಕಿ. ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಮುಂಡ್ರುಪಾಡಿ: ದ.ಕ.ಜಿ.ಪಂ.ಸ.ಕಿ.ಪ್ರಾ. ಶಾಲೆಯಲ್ಲಿ ಪರಿಸರ ಕಾರ್ಯಕ್ರಮ, ಹಣ್ಣಿನ ಗಿಡ ನಾಟಿ

Suddi Udaya

ಸೆ.7-11: ಬೆಳ್ತಂಗಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 63ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

Suddi Udaya
error: Content is protected !!