July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ದೀಪದ ಬತ್ತಿ ತಯಾರಿ ತರಬೇತಿಯ ಸಮಾರೋಪ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ-ಬೆಳ್ತಂಗಡಿ ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ಕೌಶಲ್ಯಾಭಿವೃದ್ಧಿ ಯೋಜನೆಯಡಿ ದೀಪದ ಬತ್ತಿ ತಯಾರಿಕಾ ತರಬೇತಿಯ ಸಮಾರೋಪ ಕಾರ‍್ಯಕ್ರಮದಲ್ಲಿ ತಾ.ಪಂ. ಇ. ಓ. ಭವಾನಿ ಶಂಕರ್ ಭಾಗವಹಿಸಿ ಅವಕಾಶಗಳು ಬಂದಾಗ ಅದನ್ನು ನಾವು ಬಳಸಿಕೊಳ್ಳುವುದು ನಮ್ಮ ಜಾಣತನ.

ಮಹಿಳೆಯರಿಗೆ ಸ್ವ ಉದ್ಯೋಗ ಮಾಡಲು ಹಲವಾರು ದಾರಿಗಳಿವೆ. ಆ ದಾರಿಗೆ ಸರಿಯಾದ ಯೋಜನೆ ಹಾಕಿಕೊಂಡಲ್ಲಿ ಮಹಿಳೆಯರು ದುಡಿಮೆ ಮಾಡಲು ಸಾಧ್ಯ ಎಂದರು. ಆ ನಂತರ ತರಬೇತಿ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ವಿತರಿಸಿ ಶುಭಹಾರೈಸಿದರು.

ಒಟ್ಟು 37 ಮಂದಿ ಭಾಗವಹಿಸಿ ತರಬೇತಿಯ ಸದುಪಯೋಗ ಪಡೆದುಕೊಂಡಿದ್ದಾರೆ. ಕಾರ‍್ಯಕ್ರಮದಲ್ಲಿ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಸೋಮನಾಥ್‌ ಕೆ, ತಾಲೂಕು ಪಂಚಾಯತ್‌ ತರಬೇತುದಾರರು ಸುಧಾಮಣಿ ಉಪಸ್ಥಿತರಿದ್ದರು. ತರಬೇತಿ ನೀಡಲು ಪುತ್ತೂರು ದೀಪದ ಬತ್ತಿ ತಯಾರಿಕಾ ಸಂಸ್ಥೆಯ ಮಾಲಕ ಪುನೀತ್‌ ಹಾಗೂ ಶಿಶಿರ್‌ ಇವರು ಮೆಷಿನ್‌ ಮೂಲಕ ಬತ್ತಿ ತಯಾರಿಕೆ ಮತ್ತು ಪ್ಯಾಕಿಂಗ್‌ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ತರಬೇತಿ ನೀಡಿದರು. ತರಬೇತಿ ಸಂಯೋಜಕರಾದ ಜಯಶ್ರೀ ಕಾರ‍್ಯಕ್ರಮ ನಿರ್ವಹಣೆ ಮಾಡಿ ಧನ್ಯವಾದ ನೀಡಿದರು.

Related posts

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ: ಮಹಾರಥೋತ್ಸವ: ಅರುಣ್ ಕುಮಾರ್ ಪುತ್ತಿಲ ಭಾಗಿ

Suddi Udaya

ಜೂ. 14: ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣಕ್ಕೆ ಭೂಮಿ ಪೂಜೆ – ರಕ್ಷಿತ್ ಶಿವರಾಂ

Suddi Udaya

ಓಡಿಲ್ನಾಳ ಉ.ಹಿ.ಪ್ರಾ. ಶಾಲೆಗೆ ಪದವೀಧರ ಪ್ರಾಥಮಿಕ ಶಿಕ್ಷಕಿಯಾಗಿ ಅಕ್ಷತಾ ಯಶೋಧರ ಶೆಟ್ಟಿ ಆಯ್ಕೆ

Suddi Udaya

ಹೊಕ್ಕಾಡಿಗೋಳಿ ಶಾಲಾ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಮದ್ದಡ್ಕ ಮುಖ್ಯರಸ್ತೆಯಲ್ಲಿ ಕೆಟ್ಟು ನಿಂತ ಕೆ.ಎಸ್.ಆರ್.ಟಿ.ಸಿ ಬಸ್ಸು: ಟ್ರಾಫಿಕ್ ಜಾಮ್, ವಾಹನ ಸವಾರರ ಪರಾದಾಟ: ಬದಲಿ ರಸ್ತೆಗಳನ್ನು ಬಳಸಿಕೊಂಡು ಸಂಚಾರಿಸುವಂತೆ ಸೂಚನೆ

Suddi Udaya
error: Content is protected !!