25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ದೀಪದ ಬತ್ತಿ ತಯಾರಿ ತರಬೇತಿಯ ಸಮಾರೋಪ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ-ಬೆಳ್ತಂಗಡಿ ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ಕೌಶಲ್ಯಾಭಿವೃದ್ಧಿ ಯೋಜನೆಯಡಿ ದೀಪದ ಬತ್ತಿ ತಯಾರಿಕಾ ತರಬೇತಿಯ ಸಮಾರೋಪ ಕಾರ‍್ಯಕ್ರಮದಲ್ಲಿ ತಾ.ಪಂ. ಇ. ಓ. ಭವಾನಿ ಶಂಕರ್ ಭಾಗವಹಿಸಿ ಅವಕಾಶಗಳು ಬಂದಾಗ ಅದನ್ನು ನಾವು ಬಳಸಿಕೊಳ್ಳುವುದು ನಮ್ಮ ಜಾಣತನ.

ಮಹಿಳೆಯರಿಗೆ ಸ್ವ ಉದ್ಯೋಗ ಮಾಡಲು ಹಲವಾರು ದಾರಿಗಳಿವೆ. ಆ ದಾರಿಗೆ ಸರಿಯಾದ ಯೋಜನೆ ಹಾಕಿಕೊಂಡಲ್ಲಿ ಮಹಿಳೆಯರು ದುಡಿಮೆ ಮಾಡಲು ಸಾಧ್ಯ ಎಂದರು. ಆ ನಂತರ ತರಬೇತಿ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ವಿತರಿಸಿ ಶುಭಹಾರೈಸಿದರು.

ಒಟ್ಟು 37 ಮಂದಿ ಭಾಗವಹಿಸಿ ತರಬೇತಿಯ ಸದುಪಯೋಗ ಪಡೆದುಕೊಂಡಿದ್ದಾರೆ. ಕಾರ‍್ಯಕ್ರಮದಲ್ಲಿ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಸೋಮನಾಥ್‌ ಕೆ, ತಾಲೂಕು ಪಂಚಾಯತ್‌ ತರಬೇತುದಾರರು ಸುಧಾಮಣಿ ಉಪಸ್ಥಿತರಿದ್ದರು. ತರಬೇತಿ ನೀಡಲು ಪುತ್ತೂರು ದೀಪದ ಬತ್ತಿ ತಯಾರಿಕಾ ಸಂಸ್ಥೆಯ ಮಾಲಕ ಪುನೀತ್‌ ಹಾಗೂ ಶಿಶಿರ್‌ ಇವರು ಮೆಷಿನ್‌ ಮೂಲಕ ಬತ್ತಿ ತಯಾರಿಕೆ ಮತ್ತು ಪ್ಯಾಕಿಂಗ್‌ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ತರಬೇತಿ ನೀಡಿದರು. ತರಬೇತಿ ಸಂಯೋಜಕರಾದ ಜಯಶ್ರೀ ಕಾರ‍್ಯಕ್ರಮ ನಿರ್ವಹಣೆ ಮಾಡಿ ಧನ್ಯವಾದ ನೀಡಿದರು.

Related posts

ವೇಣೂರು ಮಹಾಮಸ್ತಕಾಭೀಷೇಕ ಮಹೋತ್ಸವ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಆಮಂತ್ರಣ

Suddi Udaya

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ , ಮುಂಡಾಜೆಯಲ್ಲಿ ಟಯರ್ ಹೊತ್ತಿಸಿ ಆಕ್ರೋಶ

Suddi Udaya

ಮುಂಡಾಜೆ ಕ್ರೈಸ್ಟ್ ಅಕಾಡೆಮಿ ಶಾಲೆಯಲ್ಲಿ ಅಜ್ಜಿ ಅಜ್ಜಂದಿರ ದಿನಾಚರಣೆ

Suddi Udaya

ಅರುವ ಭಜನಾ ಕಮ್ಮಟೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆಯಲ್ಲಿ ರಮ್ಯಾ 1ಗ್ರಾಂ ಗೋಲ್ಡ್, ಫ್ಯಾನ್ಸಿ ಮತ್ತು ಫೂಟ್ ವೇ‌ರ್ ನೂತನ ಶೋರೂಮ್ ಶುಭಾರಂಭ

Suddi Udaya

ಕುವೆಟ್ಟು ಗ್ರಾಮ ಪಂಚಾಯತ್ ನಲ್ಲಿ ಗಣರಾಜ್ಯೋತ್ಸವ

Suddi Udaya
error: Content is protected !!