March 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಲಾಯಿಲ: ಪುತ್ರಬೈಲುನಲ್ಲಿ ನೂತನ ಗ್ರಂಥಾಲಯ ಉದ್ಘಾಟನೆ

ಬೆಳ್ತಂಗಡಿ: ಲಾಯಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಪುತ್ರಬೈಲು ಬಳಿ ದ.ಕ‌. ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಹಾಗೂ ಗ್ರಾಮ‌ ಪಂಚಾಯತ್ ಸಹಕಾರದಲ್ಲಿ ನಿರ್ಮಾಣಗೊಂಡ ನೂತನ ಗ್ರಂಥಾಲಯವನ್ನು ತಾ.ಪಂ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ ಉದ್ಘಾಟಿಸಿ ಗ್ರಂಥಾಲಯಗಳಿಗೆ ಸಾರ್ವಜನಿಕರು, ಭೇಟಿ ನೀಡುವ ಮೂಲಕ ಪುಸ್ತಕಗಳನ್ನು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು ಎಂದರು.

ಸದಸ್ಯ ಪ್ರಸಾದ್ ಶೆಟ್ಟಿ ಎಣಿಂಜೆ, ಪಿಡಿಒ ಶ್ರೀನಿವಾಸ್, ಸ್ಥಳೀಯರಾದ ಸುಂದರ್, ಸೇರಿದಂತೆ ಅನೇಕರು ಅನಿಸಿಕೆ ಹಂಚಿಕೊಂಡರು, ಗ್ರಂಥಾಲಯ ಉದ್ಘಾಟನೆ ವೇಳೆ ಪಟಾಕಿ ಸಿಡಿಸಿ ಸ್ಥಳೀಯರು ಸಂಭ್ರಮಿಸಿದರು. ಪಂಚಾಯತ್ ಅಧ್ಯಕ್ಷೆ ಜಯಂತಿ ಎಂ.ಕೆ. ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಸುಗಂಧಿ ಜಗನ್ನಾಥ್, ಸದಸ್ಯರುಗಳಾದ ದಿನೇಶ್ ಶೆಟ್ಟಿ, ಗಣೇಶ್ ಆರ್, ಆಶಾಲತಾ ಪ್ರಶಾಂತ್, ಮೋಹನದಾಸ್ , ಸ್ಥಳೀಯರಾದ ಸುರೇಶ್ ಬೈರ, ಜಗನ್ನಾಥ್ ಲಾಯಿಲ, ರಮೇಶ್ ಆರ್, ರಾಜೇಶ್ ಶೆಟ್ಟಿ ಗಣೇಶ್ ಗ್ಯಾರೇಜ್, ಪಂಚಾಯತ್ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಕಾರ್ಯದರ್ಶಿ ತಾರನಾಥ್ ಸ್ವಾಗತಿಸಿ, ಲೆಕ್ಕ ಸಹಾಯಕಿ ಸುಪ್ರಿತಾ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿ ಧನ್ಯವಾದವಿತ್ತರು.

Related posts

ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾಗಿ ರವಿ ಪೂಜಾರಿ ಚಿಲಿಂಬಿ ಆಯ್ಕೆ

Suddi Udaya

ಗುರುವಾಯನಕೆರೆಯಲ್ಲಿ ನಿಲ್ಲಿಸಿದ ರೂ.68 ಸಾವಿರ ಮೌಲ್ಯದ ಮೋಟಾರ್ ಸೈಕಲ್ ಕಳವು

Suddi Udaya

ಬೆಳ್ತಂಗಡಿ: ರತ್ನತ್ರಯತೀರ್ಥಕ್ಷೇತ್ರದಲ್ಲಿ ಪ್ರೊ. ನಾ’ವುಜಿರೆ ಸ್ಮರಣಾರ್ಥ ಶಾಸ್ತ್ರದಾನ ಕೃತಿ ಲೋಕಾರ್ಪಣೆ

Suddi Udaya

ಎಮ್.ಆರ್.ಪಿ.ಎಲ್ – ಸಿಎಸ್ಆರ್ ಯೋಜನೆಯಡಿ “ಶ್ರೀ ಕೃಷ್ಣ ಯೋಗಕ್ಷೇಮ” ಅಂಬುಲೆನ್ಸ್ ಹಸ್ತಾಂತರ

Suddi Udaya

ಉಜಿರೆ ಶ್ರೀ ಧ.ಮಂ. ಪದವಿ ಕಾಲೇಜಿನ ಎಂಟರ್ಪ್ರಿನಾರ್ಶಿಪ್ ಡೆವಲಪ್ಮೆಂಟ್ ಸೆಲ್ಲ್ ವಿಭಾಗದ ವತಿಯಿಂದ ಪ್ರೋಡಕ್ಟ್ ಲಾಂಚ್

Suddi Udaya

ಚಂದ್ರನ ಮೇಲೆ ಸ್ಪರ್ಶ, ಎಕ್ಸೆಲ್ ನಲ್ಲಿ ಹರ್ಷ

Suddi Udaya
error: Content is protected !!