26.8 C
ಪುತ್ತೂರು, ಬೆಳ್ತಂಗಡಿ
May 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿರ್ಲಾಲು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

ಶಿರ್ಲಾಲು: ಇಲ್ಲಿಯ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಉಷಾ ರವರ ಅಧ್ಯಕ್ಷತೆಯಲ್ಲಿ ಮಾ.17ರಂದು ಪಂಚಾಯತ್ ಸಭಾಭವನದಲ್ಲಿ ಜರುಗಿತು.

ಮಾರ್ಗದರ್ಶಕ ಅಧಿಕಾರಿಯಾಗಿ ಬೆಳ್ತಂಗಡಿ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಜಗದೀಪ್ ಜೆ. ಭಾಗವಹಿಸಿ ಗ್ರಾಮಸಭೆಯನ್ನು ಮುನ್ನಡೆಸಿದರು.

ಸಭೆಯಲ್ಲಿ ಇಲಾಖಾ ಅಧಿಕಾರಿಗಳಿಂದ ವಿವಿಧ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.

ಗ್ರಾಮ ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಉಪಾಧ್ಯಕ್ಷ ಸೋಮನಾಥ ಬಂಗೇರ, ಗ್ರಾ.ಪಂ. ಸದಸ್ಯರಾದ ತಾರಾನಾಥ ಗೌಡ, ಕೊರಗಪ್ಪ, ಮಾಧವ, ಶ್ರೀಮತಿ ಜ್ಯೋತಿ ಪೂಜಾರಿ, ಶ್ರೀಮತಿ ಮಮತಾ ಜೈನ್, ಶ್ರೀಮತಿ ಗೀತಾ, ಶ್ರೀಮತಿ ಸುಶೀಲಾ, ಪ್ರಕಾಶ್ ಹೆಗ್ಡೆ, ಶ್ರೀಮತಿ ಗೀತಾ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸದಸ್ಯರು, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಶೀಲಾ ಸ್ವಾಗತಿಸಿ, ಅನುಪಾಲನ ವರದಿ ವಾಚಿಸಿದರು. ಕಾರ್ಯದರ್ಶಿ ಶ್ರೀಮತಿ ಮೋನಮ್ಮ ಜಮಾ ಖರ್ಚು ವಿವರ ವಾಚಿಸಿದರು. ಸಿಬ್ಬಂದಿಗಳಾದ ಸರೋಜಿನಿ ಎಚ್. ವಾರ್ಡ್ ಸಭೆಯ ಬೇಡಿಕೆ, ಪವಿತಾ ಧನ್ಯವಾದವಿತ್ತರು.

Related posts

ಜು.25: ಹಾಲು ಹೆಚ್ಚಳ ಮತ್ತು ಹೈನುಗಾರಿಕಾ ಮಾಹಿತಿ ಕಾರ್ಯಕ್ರಮ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ವಲಯ ಮಟ್ಟದ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಸ.ಪ್ರೌ.ಶಾಲೆ ಗೇರುಕಟ್ಟೆ ಪ್ರಥಮ

Suddi Udaya

ಕಾಯರ್ತಡ್ಕದಲ್ಲಿ ಮಾರಾಕಾಯುಧದಿಂದ ಹಲ್ಲೆ; ಗಂಭೀರ ಗಾಯಗೊಂಡ ವ್ಯಕ್ತಿ ಆಸ್ಪತ್ರೆಗೆ ದಾಖಲು

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಬಾಲಕಿ ಅಕ್ಷರಿ ಶೆಟ್ಟಿ

Suddi Udaya

ಕುಣಿತ ಭಜನಾ ಪಂಥೋ 2024: ಗುರುವಾಯನಕೆರೆ ಶ್ರೀ ಭ್ರಾಮರಿ ಭಜನಾ ಮಂಡಳಿಗೆ ದ್ವಿತೀಯ ಸ್ಥಾನ

Suddi Udaya
error: Content is protected !!