May 3, 2025
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಕ್ತದಾನ ಶಿಬಿರ

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ಇದರ ಎನ್‌ಎಸ್‌ಎಸ್ ಘಟಕ ಹಾಗೂ ಯುವ ರೆಡ್‌ಕ್ರಾಸ್ ಘಟಕದ ಪ್ರಾಯೋಜಕತ್ವದಲ್ಲಿ ರೋಟರಿ ಕ್ಲಬ್, ಬೆಳ್ತಂಗಡಿ ಮತ್ತು ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್, ಪುತ್ತೂರು ಇವುಗಳ ಸಹಭಾಗಿತ್ವದೊಂದಿಗೆ ರಕ್ತದಾನ ಶಿಬಿರವನ್ನು ಕಾಲೇಜಿನಲ್ಲಿ ಮಾ.15ರಂದು ಆಯೋಜಿಸಲಾಗಿತ್ತು .

ಉದ್ಯಮಿ ಹಾಗೂ ರೋಟರಿ ಕ್ಲಬ್, ಬೆಳ್ತಂಗಡಿ ಕಾರ್ಯದರ್ಶಿ ಸಂದೇಶ್ ರಾವ್ ಶಿಬಿರವನ್ನು ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಸಂತೋಷ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ರೋಟರಿ ಕ್ಯಾಂಪ್ಲೋ ಬ್ಲಡ್ ಬ್ಯಾಂಕ್ ಪುತ್ತೂರು ಇದರ ಹಿರಿಯ ವೈದ್ಯಾಧಿಕಾರಿ ಡಾ| ರಾಮಚಂದ್ರ ಭಟ್ ಹಾಗೂ ರೋಟರಿ ಕ್ಲಬ್ ಬೆಳ್ತಂಗಡಿ ಇದರ ಸದಸ್ಯ ಪ್ರವೀಣ್ ಪಾಲ್ಗೊಂಡಿದ್ದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕದ ಯೋಜನಾಧಿಕಾರಿ ಅವನೀಶ್ ಪಿ., ಎನ್‌ಎಸ್‌ಎಸ್ ಘಟಕದ ಯೋಜನಾಧಿಕಾರಿ ಪ್ರಕಾಶ್ ಮತ್ತು ಎನ್ ಎಸ್‌ಎಸ್‌ನ ಉಪ ಯೋಜನಾಧಿಕಾರಿಗಳಾದ ಪುಷ್ಪಲತಾ ಪಿ ಮತ್ತು ಲೋಹಿತ್ ಉಪಸ್ಥಿತರಿದ್ದರು.

ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಮತ್ತು ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಈ ರಕ್ತದಾನ ಶಿಬಿರದಲ್ಲಿ ಒಟ್ಟು 53 ಯೂನಿಟ್ ರಕ್ತ ಸಂಗ್ರಹಿಸಲಾಯಿತು.

Related posts

ವೇಣೂರು ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಮಲ್ಲಿಕಾ ಕಾಶಿನಾಥ್ ಹೆಗ್ಡೆ ಉಪಾಧ್ಯಕ್ಷರಾಗಿ ಉಮೇಶ್ ಎನ್.

Suddi Udaya

ವೇಣೂರು ಪೊಲೀಸ್ ಠಾಣೆ ವತಿಯಿಂದ ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಮಾದಕ ವಸ್ತುಗಳ ದುರುಪಯೋಗ ಅಕ್ರಮ ಸಾಗಾಣೆ ವಿರುದ್ಧದ ಜನಜಾಗೃತಿ ಅಭಿಯಾನ ಹಾಗೂ ಅರಿವು ಕಾರ್ಯಕ್ರಮ

Suddi Udaya

ಸೆ.26: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಬೈಕ್ ಅಪಘಾತ, ಚಿಕಿತ್ಸೆ ಫಲಕಾರಿಯಾಗದೆ ಧರ್ಮಸ್ಥಳದ ಯುವಕ ಸಾವು

Suddi Udaya

ರತ್ನಮಾನಸ ವಿದ್ಯಾರ್ಥಿನಿಲಯದಲ್ಲಿ ಬೇಸಿಗೆ ಶಿಬಿರ ಕಲಾಬ್ದಿ-2025 ಉದ್ಘಾಟನೆ

Suddi Udaya

ಉಜಿರೆ: ಶ್ರೀ. ಧ.ಮಂ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವ

Suddi Udaya
error: Content is protected !!