38.6 C
ಪುತ್ತೂರು, ಬೆಳ್ತಂಗಡಿ
March 6, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಕ್ತದಾನ ಶಿಬಿರ

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ಇದರ ಎನ್‌ಎಸ್‌ಎಸ್ ಘಟಕ ಹಾಗೂ ಯುವ ರೆಡ್‌ಕ್ರಾಸ್ ಘಟಕದ ಪ್ರಾಯೋಜಕತ್ವದಲ್ಲಿ ರೋಟರಿ ಕ್ಲಬ್, ಬೆಳ್ತಂಗಡಿ ಮತ್ತು ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್, ಪುತ್ತೂರು ಇವುಗಳ ಸಹಭಾಗಿತ್ವದೊಂದಿಗೆ ರಕ್ತದಾನ ಶಿಬಿರವನ್ನು ಕಾಲೇಜಿನಲ್ಲಿ ಮಾ.15ರಂದು ಆಯೋಜಿಸಲಾಗಿತ್ತು .

ಉದ್ಯಮಿ ಹಾಗೂ ರೋಟರಿ ಕ್ಲಬ್, ಬೆಳ್ತಂಗಡಿ ಕಾರ್ಯದರ್ಶಿ ಸಂದೇಶ್ ರಾವ್ ಶಿಬಿರವನ್ನು ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಸಂತೋಷ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ರೋಟರಿ ಕ್ಯಾಂಪ್ಲೋ ಬ್ಲಡ್ ಬ್ಯಾಂಕ್ ಪುತ್ತೂರು ಇದರ ಹಿರಿಯ ವೈದ್ಯಾಧಿಕಾರಿ ಡಾ| ರಾಮಚಂದ್ರ ಭಟ್ ಹಾಗೂ ರೋಟರಿ ಕ್ಲಬ್ ಬೆಳ್ತಂಗಡಿ ಇದರ ಸದಸ್ಯ ಪ್ರವೀಣ್ ಪಾಲ್ಗೊಂಡಿದ್ದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕದ ಯೋಜನಾಧಿಕಾರಿ ಅವನೀಶ್ ಪಿ., ಎನ್‌ಎಸ್‌ಎಸ್ ಘಟಕದ ಯೋಜನಾಧಿಕಾರಿ ಪ್ರಕಾಶ್ ಮತ್ತು ಎನ್ ಎಸ್‌ಎಸ್‌ನ ಉಪ ಯೋಜನಾಧಿಕಾರಿಗಳಾದ ಪುಷ್ಪಲತಾ ಪಿ ಮತ್ತು ಲೋಹಿತ್ ಉಪಸ್ಥಿತರಿದ್ದರು.

ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಮತ್ತು ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಈ ರಕ್ತದಾನ ಶಿಬಿರದಲ್ಲಿ ಒಟ್ಟು 53 ಯೂನಿಟ್ ರಕ್ತ ಸಂಗ್ರಹಿಸಲಾಯಿತು.

Related posts

ಲಾಯಿಲದಲ್ಲಿ ಎಸ್.ಎಂ.ಇ.ಗ್ರೂಪ್ಸ್ ನ ಸಹ ಸಂಸ್ಥೆ “ಯುನಿಕ್ ಎಂಟರ್‌ಪ್ರೈಸಸ್” ಶುಭಾರಂಭ

Suddi Udaya

ಕಳೆಂಜ ಗ್ರಾ.ಪಂ. ವ್ಯಾಪ್ತಿಯಲ್ಲಿ ಪಂಚಾಯತ್ ಅನುದಾನದಿಂದ ಅಳವಡಿಸಿದ ಸೋಲಾರ್ ಲೈಟ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಪುತ್ತೂರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಲ್ಲಾ ವಿಭಾಗಗಳ ವಿದ್ಯಾರ್ಥಿಗಳಿಂದ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಮದ್ದಡ್ಕ ಮಸ್ಜಿದ್‌ನ ನೂತನ ಆಡಳಿತ ಕಚೇರಿ ಉದ್ಘಾಟನೆ

Suddi Udaya

ಭಾರೀ ಮಳೆ: ತೋಟತ್ತಾಡಿ ಸ.ಉ. ಹಿ. ಪ್ರಾ. ಶಾಲೆಯ ತಡೆಗೋಡೆ ಕುಸಿತ

Suddi Udaya
error: Content is protected !!