25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಹೊಲಿಗೆ ತರಬೇತಿ ಸಮಾರೋಪ

ಗುರುವಾಯನಕೆರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ತಾಲೂಕಿನ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ 3 ತಿಂಗಳ ಕಾಲ ಕಣಿಯೂರು ವಲಯದ ಪಿಲಿಗೂಡು ಅಭಿನಂದನ್ ಜ್ಞಾನವಿಕಾಸ ಕೇಂದ್ರದಲ್ಲಿ ನಡೆದ ಹೊಲಿಗೆ ತರಬೇತಿ ಸಮಾರೋಪ ಸಮಾರಂಭ ಕಾರ್ಯಕ್ರಮ ನಡೆಯಿತು.

ಜನಜಾಗೃತಿ ವಲಯಧ್ಯಕ್ಷ ಪ್ರಫುಲ್ಲಚಂದ್ರ ಅಧ್ಯಾಯಣ್ತಯ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿ ಮಹಿಳೆಯರ ಏಳಿಗಾಗಿ ಜ್ಞಾನವಿಕಾಸ ಕೇಂದ್ರದಡಿಯಲ್ಲಿ ನಡೆದಂತಹ ಹೊಲಿಗೆ ತರಬೇತಿ ಬಹಳಷ್ಟು ಯಶಸ್ವಿಯಾಗಿದೆ ಹಾಗೂ ಕಲಿತ ವಿದ್ಯೆಯನ್ನು ಶ್ರದ್ಧೆಯಿಂದ ಜೀವನದಲ್ಲಿ ಅನುಷ್ಠಾನಿಸಬೇಕೆಂದರು.

ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್‌ರವರು ಮಾತನಾಡಿ ಟೈಲರಿಂಗ್ ತರಬೇತಿ ಪಡೆದ ಸದಸ್ಯರು ತಮ್ಮ ಜೀವನದಲ್ಲಿ ವೃತ್ತಿಯನ್ನು ನಿಷ್ಠೆಯಿಂದ ನಡೆಸುವುದು ಹಾಗೂ ಜ್ಞಾನವಿಕಾಸ ಕಾರ್ಯಕ್ರಮದಿಂದ ಮಹಿಳೆಯರ ಸಬಲೀಕರಣ ಆಗಬೇಕು ಎಂಬುವುದು ಹೇಮಾವತಿ ವೀ. ಹೆಗ್ಗಡೆಯವರ ಆಶಯ ಎಂದು ಜ್ಞಾನ ವಿಕಾಸ ಕಾರ್ಯಕ್ರಮಗಳ ಬಗ್ಗೆ ತಿಳಿಸಿದರು.

ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಜಾನಕಿ ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಹಲವಾರು ಕಾರ್ಯಕ್ರಮಗಳು ಅನುಷ್ಠಾನವಾಗುತ್ತಿರುವ ಬಗ್ಗೆ ಮಾತನಾಡಿದರು.

ಒಕ್ಕೂಟದ ಉಪಾಧ್ಯಕ್ಷೆ ಶ್ರೀಮತಿ ವೀಣಾ ಶುಭ ಹಾರೈಸಿದರು, ಟೈಲರಿಂಗ್ ಶಿಕ್ಷಕಿ, ಸೇವಾಪ್ರತಿನಿಧಿ ಹಾಗೂ ತರಬೇತಿ ಪಡೆದಿರುವ 32 ಜನ ಸದಸ್ಯರು ಉಪಸ್ಥಿತರಿದ್ದರು.

ಶ್ರೀಮತಿ ಆರೀಫ, ಸೌಮ್ಯ, ಕವಿತ ತರಬೇತಿಯ ಬಗ್ಗೆ ಅನಿಸಿಕೆಯನ್ನು ವ್ಯಕ್ತಪಡಿಸಿದರು. ತರಬೇತಿ ಪಡೆದ ಸದಸ್ಯರಿಗೆ ಪ್ರಮಾಣ ಪತ್ರವನ್ನು ವಿತರಿಸಲಾಯಿತು ಜ್ಞಾನವಿಕಾಸ ಸಮನ್ವಯಧಿಕಾರಿ ಶ್ರೀಮತಿ ಪೂರ್ಣಿಮಾ ಕಾರ್ಯಕ್ರಮ ನಿರೂಪಿಸಿದರು.

Related posts

ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಶ್ರೀ ವಿಘ್ನೇಶ್ವರ ಭಜನಾ ಮಂದಿರದಿಂದ ಪಾದಯಾತ್ರೆ

Suddi Udaya

ಆ.18: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಕೆಸರ್ ಕಂಡೊಡು ಗೌಡರೆ ಗೌಜಿ ಗಮ್ಮತ್ : ಶಾಸಕ ಹರೀಶ್ ಪೂಂಜರಿಗೆ ಆಮಂತ್ರಣ

Suddi Udaya

ಶಿರ್ಲಾಲು ಹಾ.ಉ.ಸ‌.ಸಂಘದ ಸದಸ್ಯ ರಾಧಾಕೃಷ್ಣ ಪಾರೋಟ್ಟುರವರಿಗೆ ಸಹಕಾರಿ ಸಪ್ತಾಹದಲ್ಲಿ ಕ್ಷೀರ ರತ್ನ ಪ್ರಶಸ್ತಿ

Suddi Udaya

ಬಳಂಜದಲ್ಲಿ ಎಸ್ ಎನ್ ಮೂಡಬಿದ್ರೆ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ

Suddi Udaya

ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ದರ್ಗಾ ಶರೀಫ್ ಕಾಜೂರ್: ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ತರಬೇತಿ ಕಾರ್ಯಾಗಾರ, ಸಾಧಕರಿಗೆ ಸನ್ಮಾನ

Suddi Udaya

ಗುರಿಪಳ್ಳ: ಯುವವಾಹಿನಿ ಡೆನ್ನಾನ ಡೆನ್ನನ 2024 ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!