July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಹೊಲಿಗೆ ತರಬೇತಿ ಸಮಾರೋಪ

ಗುರುವಾಯನಕೆರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ತಾಲೂಕಿನ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ 3 ತಿಂಗಳ ಕಾಲ ಕಣಿಯೂರು ವಲಯದ ಪಿಲಿಗೂಡು ಅಭಿನಂದನ್ ಜ್ಞಾನವಿಕಾಸ ಕೇಂದ್ರದಲ್ಲಿ ನಡೆದ ಹೊಲಿಗೆ ತರಬೇತಿ ಸಮಾರೋಪ ಸಮಾರಂಭ ಕಾರ್ಯಕ್ರಮ ನಡೆಯಿತು.

ಜನಜಾಗೃತಿ ವಲಯಧ್ಯಕ್ಷ ಪ್ರಫುಲ್ಲಚಂದ್ರ ಅಧ್ಯಾಯಣ್ತಯ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿ ಮಹಿಳೆಯರ ಏಳಿಗಾಗಿ ಜ್ಞಾನವಿಕಾಸ ಕೇಂದ್ರದಡಿಯಲ್ಲಿ ನಡೆದಂತಹ ಹೊಲಿಗೆ ತರಬೇತಿ ಬಹಳಷ್ಟು ಯಶಸ್ವಿಯಾಗಿದೆ ಹಾಗೂ ಕಲಿತ ವಿದ್ಯೆಯನ್ನು ಶ್ರದ್ಧೆಯಿಂದ ಜೀವನದಲ್ಲಿ ಅನುಷ್ಠಾನಿಸಬೇಕೆಂದರು.

ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್‌ರವರು ಮಾತನಾಡಿ ಟೈಲರಿಂಗ್ ತರಬೇತಿ ಪಡೆದ ಸದಸ್ಯರು ತಮ್ಮ ಜೀವನದಲ್ಲಿ ವೃತ್ತಿಯನ್ನು ನಿಷ್ಠೆಯಿಂದ ನಡೆಸುವುದು ಹಾಗೂ ಜ್ಞಾನವಿಕಾಸ ಕಾರ್ಯಕ್ರಮದಿಂದ ಮಹಿಳೆಯರ ಸಬಲೀಕರಣ ಆಗಬೇಕು ಎಂಬುವುದು ಹೇಮಾವತಿ ವೀ. ಹೆಗ್ಗಡೆಯವರ ಆಶಯ ಎಂದು ಜ್ಞಾನ ವಿಕಾಸ ಕಾರ್ಯಕ್ರಮಗಳ ಬಗ್ಗೆ ತಿಳಿಸಿದರು.

ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಜಾನಕಿ ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಹಲವಾರು ಕಾರ್ಯಕ್ರಮಗಳು ಅನುಷ್ಠಾನವಾಗುತ್ತಿರುವ ಬಗ್ಗೆ ಮಾತನಾಡಿದರು.

ಒಕ್ಕೂಟದ ಉಪಾಧ್ಯಕ್ಷೆ ಶ್ರೀಮತಿ ವೀಣಾ ಶುಭ ಹಾರೈಸಿದರು, ಟೈಲರಿಂಗ್ ಶಿಕ್ಷಕಿ, ಸೇವಾಪ್ರತಿನಿಧಿ ಹಾಗೂ ತರಬೇತಿ ಪಡೆದಿರುವ 32 ಜನ ಸದಸ್ಯರು ಉಪಸ್ಥಿತರಿದ್ದರು.

ಶ್ರೀಮತಿ ಆರೀಫ, ಸೌಮ್ಯ, ಕವಿತ ತರಬೇತಿಯ ಬಗ್ಗೆ ಅನಿಸಿಕೆಯನ್ನು ವ್ಯಕ್ತಪಡಿಸಿದರು. ತರಬೇತಿ ಪಡೆದ ಸದಸ್ಯರಿಗೆ ಪ್ರಮಾಣ ಪತ್ರವನ್ನು ವಿತರಿಸಲಾಯಿತು ಜ್ಞಾನವಿಕಾಸ ಸಮನ್ವಯಧಿಕಾರಿ ಶ್ರೀಮತಿ ಪೂರ್ಣಿಮಾ ಕಾರ್ಯಕ್ರಮ ನಿರೂಪಿಸಿದರು.

Related posts

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟ ಪ್ರಕರಣ : 10 ತಿಂಗಳು ಕಳೆದರೂ ಕಾರ್ಮಿಕರಿಗೆ ಸಿಗದ ಕೂಲಿ, ಬಾಡಿಗೆ

Suddi Udaya

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ವಾರ್ಷಿಕ ಜಾತ್ರೆಯ ಪ್ರಯುಕ್ತ ಗೊನೆ ಮುಹೂರ್ತ

Suddi Udaya

ಉಜಿರೆ ಎಸ್.ಡಿ.ಎಂ ಸಿ.ಬಿ.ಎಸ್.ಇ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪನಾ ದಿನಾಚರಣೆ ಮತ್ತು ಧ್ವಜ ದಿನಾಚರಣೆ

Suddi Udaya

ಬೆಂಗಳೂರಿನ ಪ್ರಸಿದ್ದ ಕೈಗಾರಿಕೋದ್ಯಮಿ, ಸಾಮಾಜಿಕ, ಧಾರ್ಮಿಕ ಕ್ಷೇತ್ರದ ಸಾಧಕ ದೇವೇಂದ್ರ ಹೆಗ್ಡೆ ಕೊಕ್ರಾಡಿಯವರು ಅಂತರರಾಷ್ಟ್ರೀಯ ಆರ್ಯಭಟ- 2024 ಪ್ರಶಸ್ತಿಗೆ ಆಯ್ಕೆ

Suddi Udaya

ಕುಪೆಟ್ಟಿ, ಕಲ್ಲೇರಿ, ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಗುಂಡಿಗಳಿಗೆ ತಾತ್ಕಲಿಕ ಪರಿಹಾರ: ಪ್ರಯಾಣಿಕರಿಗೆ ಧೂಳಿನ ಗೋಳು

Suddi Udaya

ಉರುವಾಲು : ಬೈತಾರು ಕಾರಿಂಜ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಸಂಭ್ರಮ

Suddi Udaya
error: Content is protected !!