September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಹೊಲಿಗೆ ತರಬೇತಿ ಸಮಾರೋಪ

ಗುರುವಾಯನಕೆರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ತಾಲೂಕಿನ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ 3 ತಿಂಗಳ ಕಾಲ ಕಣಿಯೂರು ವಲಯದ ಪಿಲಿಗೂಡು ಅಭಿನಂದನ್ ಜ್ಞಾನವಿಕಾಸ ಕೇಂದ್ರದಲ್ಲಿ ನಡೆದ ಹೊಲಿಗೆ ತರಬೇತಿ ಸಮಾರೋಪ ಸಮಾರಂಭ ಕಾರ್ಯಕ್ರಮ ನಡೆಯಿತು.

ಜನಜಾಗೃತಿ ವಲಯಧ್ಯಕ್ಷ ಪ್ರಫುಲ್ಲಚಂದ್ರ ಅಧ್ಯಾಯಣ್ತಯ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿ ಮಹಿಳೆಯರ ಏಳಿಗಾಗಿ ಜ್ಞಾನವಿಕಾಸ ಕೇಂದ್ರದಡಿಯಲ್ಲಿ ನಡೆದಂತಹ ಹೊಲಿಗೆ ತರಬೇತಿ ಬಹಳಷ್ಟು ಯಶಸ್ವಿಯಾಗಿದೆ ಹಾಗೂ ಕಲಿತ ವಿದ್ಯೆಯನ್ನು ಶ್ರದ್ಧೆಯಿಂದ ಜೀವನದಲ್ಲಿ ಅನುಷ್ಠಾನಿಸಬೇಕೆಂದರು.

ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್‌ರವರು ಮಾತನಾಡಿ ಟೈಲರಿಂಗ್ ತರಬೇತಿ ಪಡೆದ ಸದಸ್ಯರು ತಮ್ಮ ಜೀವನದಲ್ಲಿ ವೃತ್ತಿಯನ್ನು ನಿಷ್ಠೆಯಿಂದ ನಡೆಸುವುದು ಹಾಗೂ ಜ್ಞಾನವಿಕಾಸ ಕಾರ್ಯಕ್ರಮದಿಂದ ಮಹಿಳೆಯರ ಸಬಲೀಕರಣ ಆಗಬೇಕು ಎಂಬುವುದು ಹೇಮಾವತಿ ವೀ. ಹೆಗ್ಗಡೆಯವರ ಆಶಯ ಎಂದು ಜ್ಞಾನ ವಿಕಾಸ ಕಾರ್ಯಕ್ರಮಗಳ ಬಗ್ಗೆ ತಿಳಿಸಿದರು.

ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಜಾನಕಿ ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಹಲವಾರು ಕಾರ್ಯಕ್ರಮಗಳು ಅನುಷ್ಠಾನವಾಗುತ್ತಿರುವ ಬಗ್ಗೆ ಮಾತನಾಡಿದರು.

ಒಕ್ಕೂಟದ ಉಪಾಧ್ಯಕ್ಷೆ ಶ್ರೀಮತಿ ವೀಣಾ ಶುಭ ಹಾರೈಸಿದರು, ಟೈಲರಿಂಗ್ ಶಿಕ್ಷಕಿ, ಸೇವಾಪ್ರತಿನಿಧಿ ಹಾಗೂ ತರಬೇತಿ ಪಡೆದಿರುವ 32 ಜನ ಸದಸ್ಯರು ಉಪಸ್ಥಿತರಿದ್ದರು.

ಶ್ರೀಮತಿ ಆರೀಫ, ಸೌಮ್ಯ, ಕವಿತ ತರಬೇತಿಯ ಬಗ್ಗೆ ಅನಿಸಿಕೆಯನ್ನು ವ್ಯಕ್ತಪಡಿಸಿದರು. ತರಬೇತಿ ಪಡೆದ ಸದಸ್ಯರಿಗೆ ಪ್ರಮಾಣ ಪತ್ರವನ್ನು ವಿತರಿಸಲಾಯಿತು ಜ್ಞಾನವಿಕಾಸ ಸಮನ್ವಯಧಿಕಾರಿ ಶ್ರೀಮತಿ ಪೂರ್ಣಿಮಾ ಕಾರ್ಯಕ್ರಮ ನಿರೂಪಿಸಿದರು.

Related posts

ಮುಂಡಾಜೆ: ಕೃಷಿಕ ಶಾಜಿ ವಾಟೆಪ್ಪಿಳ್ಳಿಲ್ ಹೃದಯಾಘಾತದಿಂದ ನಿಧನ

Suddi Udaya

ಬಳಂಜ: ಗ್ರಾಮ ಸಭೆ

Suddi Udaya

ನವೀಕೃತ ಉಜಿರೆ ಸಂತ ಅಂತೋನಿ ಚರ್ಚ್ ಉದ್ಘಾಟನೆ : ದಾನಿಗಳಿಗೆ ಗೌರವಾರ್ಪಣೆ

Suddi Udaya

ಭಾರೀ ಮಳೆ ; ಮೈದುಂಬಿ ಹರಿಯುತ್ತಿರುವ ಕಪಿಲ ನದಿ: ಶಿಶಿಲೇಶ್ವರ ದೇವಸ್ಥಾನ ಹೊರಂಗಣ ಜಲಾವೃತ

Suddi Udaya

ಡಿಕೆಶಿ ಮುಖ್ಯಮಂತ್ರಿ-ಪಕ್ಷದ ನಿಷ್ಠಾವಂತ ಕಾರ್ಯಕರ್ತನಿಗೆ ಸಂದ ಜಯ: ಕೆ.ಹರೀಶ್ ಕುಮಾರ್

Suddi Udaya

ಮೇ 26: ಕಾಯರ್ತಡ್ಕ ನಂದಗೋಕುಲ ಗೋಶಾಲೆಯಲ್ಲಿ ಸಾಮೂಹಿಕ ಗೋಪೂಜೆ, ಗೋನಂದಾರತಿ, ದೀಪೋತ್ಸವ

Suddi Udaya
error: Content is protected !!