23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕಮೋಡ್ ವೀಲ್‌ಚೇರ್ ವಿತರಣೆ

ಬೆಳಾಲು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಉಜಿರೆ ವಲಯದ, ಬೆಳಾಲು ಕಾರ್ಯಕ್ಷೇತ್ರದ ಕುಕ್ಕೊಟ್ಟು ನಿವಾಸಿ ಮುತ್ತಪ್ಪ ನಾಯ್ಕ್ ರವರಿಗೆ ನಡೆದಾಡಲು ಕಷ್ಟಸಾಧ್ಯವಾಗಿದ್ದು ಇವರಿಗೆ ಸಮುದಾಯ ಅಭಿವೃದ್ಧಿ ವಿಭಾಗದ ಜನಮಂಗಳ ಕಾರ್ಯಕ್ರಮದಡಿಯಲ್ಲಿ ಕಮೋಡ್ ವೀಲ್‌ಚೇರ್‌ಗೆ ಬೇಡಿಕೆ ನೀಡಿದ್ದರು. ಈ ಬೇಡಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಧರ್ಮಾಧಿಕಾರಿಯವರು ಮಂಜೂರು ಮಾಡಿದ್ದು, ತಾಲೂಕು ಯೋಜನಾಧಿಕಾರಿ ಸುರೇಂದ್ರ ರವರು ವೀಲ್‌ಚೇರ್ ವಿತರಿಸಿದರು.

ಈ ಸಂದರ್ಭದಲ್ಲಿ ಉಜಿರೆ ವಲಯದ ಮೇಲ್ವಿಚಾರಕಿ ವನಿತಾ, ಸೇವಾಪ್ರತಿನಿಧಿ ಪ್ರಮೀಳಾ, ಸೇವಾಪ್ರತಿನಿಧಿ ತಾರನಾಥ, ಬೆಳಾಲು ಒಕ್ಕೂಟದ ಉಪಾಧ್ಯಕ್ಷ ಪ್ರಸಾದ್, ಬೆಳಾಲು ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಸುಕೇಶ್ ಗೌಡ, ಮುತ್ತಪ್ಪ ನಾಯ್ಕ್ ರವರ ಪುತ್ರ ಜಯ, ಪೆರ್ಲ ಬೈಪಾಡಿ ಒಕ್ಕೂಟದ ಪದಾಧಿಕಾರಿಗಳಾದ ದಿನೇಶ್ ಅಡ್ಡಾರು, ಶೀನಪ್ಪ ಫಲಸದಕೋಡಿ ಉಪಸ್ಥಿತರಿದ್ದರು.

Related posts

ಮಲವಂತಿಗೆ ಗ್ರಾ.ಪಂ.ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬಂಗಾಡಿ ಫ್ರೆಂಡ್ಸ್ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಲಯ ಮಟ್ಟದ ಪುರುಷರ ಹಗ್ಗ ಜಗ್ಗಾಟ:

Suddi Udaya

ಎ.24- ಮೇ 2 : ಬೆಳ್ತಂಗಡಿ ದೀಪಾ ಗೋಲ್ಡ್ ನಲ್ಲಿ ಅಕ್ಷಯ ತೃತೀಯದ ಸಂಭ್ರಮ, ಕೊಡುಗೆಗಳು

Suddi Udaya

ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಸಮಿತಿಗೆ ಅಬ್ಬೋನು ಮದ್ದಡ್ಕ ನೇಮಕ

Suddi Udaya

ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ಸಂಘ ಉಜಿರೆಯಲ್ಲಿ ನಿರ್ದೇಶಕರಾದ ದಿ| ಪದ್ಮನಾಭ ಎನ್. ಮಾಣಿಂಜ ರವರಿಗೆ ನುಡಿನಮನ

Suddi Udaya

ವೇಣೂರು: ಪಡ್ಡಂದಡ್ಕ ಕಟ್ಟೆ ನಿವಾಸಿ ಪ್ರಗತಿಪರ ಕೃಷಿಕ ಕೆ ಮಹಮ್ಮದ್ ನಿಧನ

Suddi Udaya
error: Content is protected !!