25.4 C
ಪುತ್ತೂರು, ಬೆಳ್ತಂಗಡಿ
May 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡಂಗಡಿ ಮಹಿಳಾ ಗ್ರಾಮಸಭೆ: ಮಹಿಳಾ ಸ್ವಚ್ಛತಾಗಾರರಿಗೆ ಗೌರವ ಸನ್ಮಾನ ಮತ್ತು ಸಮವಸ್ತ್ರ ವಿತರಣೆ

ಪಡಂಗಡಿ: ಪಡಂಗಡಿ ಗ್ರಾಮ ಪಂಚಾಯತಿಯ ಮಹಿಳಾ ಗ್ರಾಮಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷ ವಸಂತ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಜರುಗಿತು.

ಬೆಳ್ತಂಗಡಿ ಆರ್ಥಿಕ ಸಾಕ್ಷರತಾ ಕೇಂದ್ರದ ಸಮಾಲೋಚಕಿ ಶ್ರೀಮತಿ ಉಷಾ ಕಾಮತ್ ಇವರು ಮಹಿಳೆಯರ ಕೌಟುಂಬಿಕ ದೌರ್ಜನ್ಯದ ಬಗ್ಗೆ, ಮಹಿಳೆಯರ ರಾಜಕೀಯ, ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣದ ಬಗ್ಗೆ ಸುದೀರ್ಘವಾದ ಮಾಹಿತಿಯನ್ನು ನೀಡಿದರು.

ಮಹಿಳೆಯರ ಅಪೌಷ್ಠಿಕತೆ ಮತ್ತು ರಕ್ತಹೀನತೆ ಮತ್ತು ರಕ್ಷಣೆ ವಿಷಯದ ಬಗ್ಗೆ ಪಡಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಮುದಾಯ ಆರೋಗ್ಯ ಅಧಿಕಾರಿ ಕುಮಾರಿ ಸಂಧ್ಯಾ ಮಾಹಿತಿಯನ್ನು ನೀಡಿದರು.

ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ವಸಂತಿ ಹಾಗೂ ಸದಸ್ಯೆ ಶ್ರೀಮತಿ ಮೀನಾಕ್ಷಿ ಇವರು ಮಹಿಳೆಯರು ಸರಕಾರದ ಯೋಜನೆಗಳನ್ನು ಸಮರ್ಥವಾಗಿ ಉಪಯೋಗಿಸಿಕೊಂಡು ಸ್ವಾವಲಂಬಿ ಜೀವನ ನಡೆಸುವಂತೆ ಕರೆ ನೀಡಿದರು.

ಪಡಂಗಡಿ ಗ್ರಾಮ ಪಂಚಾಯತಿಯ ಸಮಗ್ರ ಸ್ವಚ್ಛತೆಗೆ ಅಹಿರ್ನಿಶಿಯಾಗಿ ದುಡಿಯುತ್ತಿರುವ ಮಹಿಳಾ ಸ್ವಚ್ಛಾಗ್ರಹಿಗಳಾದ ಶ್ರೀಮತಿ ಕುಸುಮಾವತಿ ಮತ್ತು ಶ್ರೀಮತಿ ಯಮುನಾ ಇವರನ್ನು ಗೌರವಿಸಿ ಸನ್ಮಾನಿಸಲಾಯಿತು ಹಾಗೂ ಇವರಿಗೆ ಸಮವಸ್ತ್ರವನ್ನು ವಿತರಿಸಲಾಯಿತು.

ಸಭೆಯಲ್ಲಿ ಪಾಲ್ಗೊಂಡ ಮಹಿಳೆಯರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ, ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿಯ ಸದಸ್ಯರಾದ ಸಂತೋಷ್ ಕುಮಾರ್ ಜೈನ್, ರಿಚರ್ಡ್ ಗೋವಿಯಸ್, ಹಾಮದ್ ಬಾವಾ, ಶಕುಂತಳಾ, ವನಜಾಕ್ಷಿ, ಸುಮತಿ ಪಿ. ಮತ್ತು ಶುಭಾ, ಆಶಾ ಕಾರ್ಯಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಂಥಾಲಯ ಮೇಲ್ವಿಚಾರಕಿ, ಸಿರಿ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಜಯಲಕ್ಷ್ಮೀ ಹಾಗೂ ಪದಾಧಿಕಾರಿಗಳು ಮತ್ತು ಗ್ರಾಮ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಫನಾ ಇವರು ಪ್ರಾಸ್ತಾವಿಕವಾಗಿ ಮಾತನಾಡಿ ಮಹಿಳೆಯರು ಉತ್ತಮ ಹವ್ಯಾಸಗಳಲ್ಲಿ ತೊಡಗಿಸಿಕೊಂಡು ಸ್ವಸ್ಥ ಸಮಾಜದ ಪರಿವರ್ತನೆಗೆ ತೊಡಗಿಸಿಕೊಳ್ಳುವಂತೆ ಹೇಳಿ ಧನ್ಯವಾದವಿತ್ತರು.

Related posts

ಪೂಂಜಾ ಶ್ರೀ ಪಂಚದುರ್ಗಪರಮೇಶ್ವರಿ ದೇವಸ್ಥಾನಕ್ಕೆ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಭೇಟಿ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಮೇಲಂತಬೆಟ್ಟು ಗ್ರಾ.ಪಂ. ಸಹಭಾಗಿತ್ವದಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ ಮತ್ತು ವನಮಹೋತ್ಸವ ದಿನಾಚರಣೆ

Suddi Udaya

ಉಜಿರೆ ಶ್ರೀ ಧ. ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ: ಬದುಕಿನ ಸ್ಫೂರ್ತಿ ಪಡೆಯಲು ಎನ್ನೆನ್ನೆಸ್ ಅಡಿಪಾಯ – ಎ. ಜೀವಂಧರ ಕುಮಾರ್

Suddi Udaya

ಕೊಕ್ಕಡ : ಮಾಯಿಲಕೋಟೆ ದೇವಸ್ಥಾನದಲ್ಲಿ ಕಳ್ಳತನ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮೊಗ್ರು: ಶ್ರೀ ಕ್ಷೇತ್ರ ಮುಗೇರಡ್ಕ ದೈವಸ್ಥಾನ ವತಿಯಿಂದ ಅಂಗನವಾಡಿ ಕೇಂದ್ರಕ್ಕೆ ಗೋದ್ರೇಜ್ ಮತ್ತು ಕುರ್ಚಿ ಕೊಡುಗೆ

Suddi Udaya

ಸುಲ್ಕೇರಿಮೊಗ್ರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಯುವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಗುರುಪೂಜೆ, ದೀಕ್ಷಾ ಗ್ರಂಥಿದಾರಣೆ, ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ

Suddi Udaya
error: Content is protected !!