September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಡಂಗಡಿ ವಿಶೇಷ ಚೇತನರ ಸಮನ್ವಯ ಗ್ರಾಮಸಭೆ-ಸಾಧಕರಿಗೆ ಗೌರವ ಸನ್ಮಾನ

ಪಡಂಗಡಿ ಗ್ರಾಮ ಪಂಚಾಯತಿಯ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆಯು ಗ್ರಾಮ ಪಂಚಾಯತ್‌ ಅಧ್ಯಕ್ಷ ವಸಂತ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಜರುಗಿತು.

ತಾಲೂಕು ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರಾದ ಜೋನ್‌ ಬ್ಯಾಪ್ಟಿಸ್‌ ಡಿಸೋಜಾ ಇವರು ವಿಶೇಷ ಚೆತನರಿಗೆ ಸರಕಾರವು ಜಾರಿ ಮಾಡಲಾದ ಯೋಜನೆಗಳು ಮತ್ತು ಸೌಲಭ್ಯಗಳ ಬಗ್ಗೆ ಸುದೀರ್ಘವಾದ ಉಪಯುಕ್ತ ಮಾಹಿತಿಯನ್ನು ನೀಡಿದರು. ಗ್ರಾಮ ಪಂಚಾಯತ್‌ ಮಟ್ಟದ ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆ ಕುಮಾರಿ ದೀಕ್ಷಿತಾರವರು ಸಭೆಗೆ ವರದಿಯನ್ನು ಮಂಡಿಸಿದರು. ಸರ್ಕಾರಿ ಕಛೇರಿ, ಬ್ಯಾಂಕ್‌ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ವಿಶೇಷ ಚೇತನರಿಗೆ ಸರತಿ ಸಾಲಿನಲ್ಲಿ ವಿನಾಯಿತಿ ನೀಡಿ ಮೊದಲ ಪ್ರಾಶಸ್ತ್ಯ ನೀಡಬೇಕು. ಮೂರು ಚಕ್ರ ವಾಹನದ ಬೇಡಿಕೆ, ವಿಶೇಷ ಚೇತನರ ವಿಧ್ಯಾಬ್ಯಾಸದ ಸೌಲಭ್ಯದ ಕುರಿತು ಬೇಡಿಕೆಗಳನ್ನು ಸಲ್ಲಿಸಿದರು ಮತ್ತು ಈ ಬಗ್ಗೆ ಚರ್ಚಿಸಲಾಯಿತು. ವಿಶೇಷ ಚೇತನರು ಸರಕಾರದ ಮತ್ತು ಸಂಘ ಸಂಸ್ಥೆಗಳ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ಸಮಾಜದಲ್ಲಿ ಸ್ವಾಭಿಮಾನದಿಂದ ಬದುಕುವಂತಾಗಬೇಕೆಂದು ಪಂಚಾಯತ್‌ ಅಭಿವೃದ್ದಿ ಅಧಿಕಾರಿ ಶ್ರೀಮತಿ ಸಫನಾ ಸಂದೇಶವಿತ್ತರು.

ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆಗೈದು ತನ್ನದೇ ಆದ ಛಾಪು ಮೂಡಿಸಿರುವ ಸುಶಾಂತ್‌ ಪೂಜಾರಿ ಕನ್ನಡಿಕಟ್ಟೆ ಇವರನ್ನು ಸಭೆಯಲ್ಲಿ ಗೌರವಿಸಿ ಸನ್ಮಾನಿಸಲಾಯಿತು. ಸಭೆಯಲ್ಲಿ ಗ್ರಾ.ಪಂ. ಉಪಾಧ್ಯಕ್ಷೆ ಶ್ರೀಮತಿ ವಸಂತಿ ಮತ್ತು ಗ್ರಾ.ಪಂ. ಸದಸ್ಯರಾದ ಸಂತೋಷ್‌ ಕುಮಾರ್‌ ಜೈನ್‌, ರಿಚರ್ಡ್‌ ಗೋವಿಯಸ್‌, ಹಾಮದ್‌ ಬಾವಾ, ಯೋಗೀಶ್‌ ಕುಮಾರ್‌ ಡಿ.ಪಿ, ಶಕುಂತಳಾ, ವನಜಾಕ್ಷಿ, ಹಾಗೂ ಶುಭಾ ಪಾಲ್ಗೊಂಡಿದ್ದರು.

ಗ್ರಾಮ ಪಂಚಾಯತ್‌ ವ್ಯಾಪ್ತಿಯ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಂಥಾಲಯ ಮೇಲ್ವಿಚಾರಕಿ, ಸಿರಿ ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು ಮತ್ತು ಗ್ರಾಮ ಪಂಚಾಯತ್‌ ಸಿಬ್ಬಂದಿಗಳು ಉಪಸ್ಥಿತರಿದ್ದರು. ಸಭೆಯಲ್ಲಿ 39 ಜನ ವಿಶೇಷ ಚೇತನರು ಮತ್ತು ಅವರ ಪೋಷಕರು ಹಾಜರಿದ್ದರು.

Related posts

ವಾಣಿ ಆಂ.ಮಾ. ಶಾಲೆಯ ಬಾಲಕರ ತಂಡ ವಾಲಿಬಾಲ್ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಪುಂಜಾಲಕಟ್ಟೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಘಟಕದ ವಾರ್ಷಿಕೋತ್ಸವ, ಸನ್ಮಾನ

Suddi Udaya

ವೇಣೂರು: ಮನೆಗೆ ಮರ ಬಿದ್ದು ಹಾನಿ

Suddi Udaya

ಬಡಗಕಾರಂದೂರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

Suddi Udaya

ಬರೆಂಗಾಯ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಿಂದ ಅಪಘಾತದಲ್ಲಿ ನಿಧನರಾದ ದಿ. ಶೇಖರ ಬಂಗೇರರಿಗೆ ನುಡಿನಮನ

Suddi Udaya
error: Content is protected !!