23.7 C
ಪುತ್ತೂರು, ಬೆಳ್ತಂಗಡಿ
March 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಆಶ್ರಯದಲ್ಲಿ ಸಂದೇಶ್ ಮದ್ದಡ್ಕ ಇವರಿಗೆ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ಪ್ರದಾನ

ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ ಆಶ್ರಯದಲ್ಲಿ ನಡೆದ 17 ನೇ ಸಾಮೂಹಿಕ ವಿವಾಹ ಕಾರ್ಯಕ್ರಮದ ಅಂಗವಾಗಿ 2025-26 ನೇ ಸಾಲಿನ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ಪ್ರಧಾನ ಹಾಗೂ ಸ್ವಸ್ತಿಕ್ ಸಂಭ್ರಮ ಪುರಸ್ಕಾರ ಸಂದರ್ಭದಲ್ಲಿ ಕುಣಿತ ಭಜನೆಯ ಮೂಲಕ ಧಾರ್ಮಿಕ ಕಾರ್ಯಕ್ರಮಕ್ಕೆ ಭಕ್ತಿಯ ರಂಗು ಚೆಲ್ಲಿ ,ಭಜನಾ ತರಬೇತುದಾರರಾಗಿ , ಭಜನಾ ತಂಡದ ಮಾರ್ಗದರ್ಶಕರಾಗಿರುವ ಸಂದೇಶ ಮದ್ದಡ್ಕ ಇವರಿಗೆ ಧಾರ್ಮಿಕ ಕ್ಷೇತ್ರದಲ್ಲಿ ನೀಡುವ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಈ ವೇಳೆ ಮಂಗಳೂರು ಅದಾನಿ ಗ್ರೂಪ್ ಅಧ್ಯಕ್ಷ ಕಿಶೋರ್ ಆಳ್ವ ಇವರು ರಾಜ್ಯ ಪ್ರಶಸ್ತಿ ಪ್ರಧಾನ ಮಾಡಿದರು. ಈ ಸಂದರ್ಭದಲ್ಲಿ ಸ್ವಸ್ತಿಕ್ ಫ್ರೆಂಡ್ಸ್ ರಿಜಿಸ್ಟರ್ ಪುಂಜಾಲ್ ಕಟ್ಟೆ ಇದರ ಸ್ಥಾಪಕಾಧ್ಯಕ್ಷ ಎಂ ತುಂಗಪ್ಪ ಬಂಗೇರ, ರಾಜೇಶ್ ನಾಯಕ್ ಉಳಿಪಾಡಿ ಗುತ್ತು, ಶಾಸಕರು ಬಂಟ್ವಾಳ ವಿಧಾನಸಭಾ ಕ್ಷೇತ್ರ, ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ, ನಾರಾಯಣಶೆಟ್ಟಿ ಕಕ್ಕೆಪದವು ಕಮಲ ನಿವಾಸ ಉದ್ಯಮಿ , ಸಂತೋಷ್ ಕುಮಾರ್ ಜೆ.ಪಿ ಉದ್ಯಮಿ ದೆಹಲಿ, ಸುಂದರ್ ರಾಜ್ ಹೆಗ್ಡೆ, ಬೊಳ್ಮಾರ ಜಯಚಂದ್ರ ಹಾಗೂ ಶ್ರೀಗುರು ನಾರಾಯಣ ವಸತಿ ಶಾಲೆಯ ಪ್ರಾಂಶುಪಾಲರಾದ ಸಂತೋಷ್ ಸನಿಲ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಬಿಜೆಪಿ ಕಛೇರಿಯಲ್ಲಿ ಸುಶಾಸನ‌ ದಿನ ಆಚರಣೆ

Suddi Udaya

ಸುಲ್ಕೇರಿಮೊಗ್ರು : ಪಂಜಲಗುಡ್ಡೆ ಅಣೆಕಟ್ಟು ಮತ್ತು ಕೊಳಕೆಬೈಲು ಅಣೆಕಟ್ಟುಗಳಲ್ಲಿ ಅಡ್ಡಲಾಗಿ ಸಿಕ್ಕಿಹಾಕಿಕೊಂಡ ಮರದ ದಿಮ್ಮಿ: ತೆರವುಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಧರ್ಮಸ್ಥಳದ ಯುವಕರು ನಟಿಸಿರುವ “ತೀರ್ಪು” ಚಿತ್ರದ ಮುಹೂರ್ತ

Suddi Udaya

ಮದ್ದಡ್ಕ ತೋಟಗಾರಿಕೆ ಇಲಾಖೆಯ ಆವರಣ ಗೋಡೆ ಕುಸಿತ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಮಹಿಳಾ ವಿಭಾಗದ ಮತ್ತು ಯುವ ವಿಭಾಗದ ಪದಾಧಿಕಾರಿಗಳ ಆಯ್ಕೆ

Suddi Udaya

ಬದನಾಜೆ ಸ. ಉ. ಪ್ರಾ. ಶಾಲಾ ನವೀಕರಣ ಉತ್ಸವ

Suddi Udaya
error: Content is protected !!