ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಂಗಳೂರು ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಗುರುವಾಯನಕೆರೆಯಲ್ಲಿ ನೂತನ ಶಾಖೆ ಉದ್ಘಾಟನೆ

ಗುರುವಾಯನಕೆರೆ : ಪಾಂಡುರಂಗ ಮಂದಿರ ಗುರುವಾಯನಕೆರೆ ಇಲ್ಲಿ ಪತಂಜಲಿ ಯೋಗ ಶಿಕ್ಷಣ ಸಮಿತಿಯ ವತಿಯಿಂದ 48 ದಿನಗಳ ಉಚಿತ ಯೋಗ ತರಬೇತಿ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಪತಂಜಲಿ ಯೋಗ ಶಿಕ್ಷಣ ಸಮಿತಿ ಮಂಗಳೂರು ಇದರ ಮಕ್ಕಳ ವಿಭಾಗದ ಪ್ರಮುಖ ಪ್ರಸಾದ್ ರವರು ದೀಪ ಬೆಳಗಿಸಿ ಬೌದ್ಧಿಕ್ ನೀಡಿ ಯೋಗದ ಮಹತ್ವ, ಯೋಗ ನಡೆದು ಬಂದ ದಾರಿ, ಪ್ರಸ್ತುತ ದಿನಗಳಲ್ಲಿ ಮಾನಸಿಕ ಹಾಗೂ ದೈಹಿಕ ಆರೋಗ್ಯಕ್ಕೆ ಯೋಗ ಶಿಕ್ಷಣದ ಅನಿವಾರ್ಯತೆಯ ಕುರಿತು ಬಹಳ ಮಹತ್ವದ ವಿಚಾರಗಳನ್ನು ತಿಳಿಸಿಕೊಟ್ಟರು.

ಮುಖ್ಯ ಅತಿಥಿಯಾಗಿ ನಾಗರಿಕ ಸೇವಾ ಟ್ರಸ್ಟೀ ಶ್ರೀಮತಿ ವಿದ್ಯಾ ನಾಯಕ್ ಮಾತನಾಡಿ ಸಂಸ್ಕಾರ, ಸಂಘಟನೆ ,ಸೇವೆಯಂತಹ ಶಿಕ್ಷಣವನ್ನು ನೀಡುವುದರೊಂದಿಗೆ ಉತ್ತಮ ನಾಗರಿಕರನ್ನು ರೂಪಿಸುವ ಕೆಲಸವನ್ನು ಸಮಿತಿ ಮಾಡುತ್ತಿದೆ ಎನ್ನುವುದರೊಂದಿಗೆ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ನಮ್ಮ ಮನೆ ಯೋಗ ಶಿಕ್ಷಕ ಭುಜಂಗ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶಾಖೆಯ ಮುನ್ನಲೆಗೆ ಶುಭಹಾರೈಸಿದರು. ಯೋಗ ಶಿಕ್ಷಣ ಸಮಿತಿಯ ಮಂಗಳೂರು ಪ್ರಾಂತ ಪ್ರಮುಖರಾದ ರವೀಶ , ಯೋಗ ಶಿಕ್ಷಣ ಸಮಿತಿಯ ಆನಂದ, ಮಾರ್ಗದರ್ಶಕರು ಯೋಗ ಶಿಕ್ಷಣ ಸಮಿತಿ ಉಪ್ಪಿನಂಗಡಿ ತಾಲುಕು , ಪ್ರದೀಪ ಯೋಗ ಶಿಕ್ಷಣ ಸಮಿತಿಯ ಶಿಕ್ಷಕರು ಸೂಕ್ತ ಮಾರ್ಗದರ್ಶನ ನೀಡಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರು ಸೇರಿ 105 ಮಂದಿ ಉಪಸ್ಥಿತರಿದ್ದರು. ನಮ್ಮ ಮನೆ ಶಾಖೆಯ ಶಿಕ್ಷಕ ಶಿವಣ್ಣ ಸ್ವಾಗತಿಸಿ, ಶಿಕ್ಷಕಿ ದಮಯಂತಿ ವಂದಿಸಿ, ಶಿಕ್ಷಕಿ ಭಾರತಿ ನಿರೂಪಿಸಿದರು. ನಮ್ಮ ಮನೆ ಯೋಗ ಬಂಧುಗಳಾದ ಪುರಂದರ, ಗಿರೀಶ ,ಅಶೋಕ, ಪ್ರಿಯ ,ಆಶಾ ಯೋಗದ ಅನುಭವಗಳನ್ನು ಹಂಚಿಕೊಂಡರು. ನಮ್ಮ ಮನೆ ಗುರುವಾಯನಕೆರೆ ಶಾಖೆಯ ಯೋಗ ಶಿಕ್ಷಕ ಬಂಧುಗಳು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

Related posts

ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಕಳೆಂಜ ಅಂಗಡಿಯಲ್ಲಿ ಅಕ್ರಮ ಮದ್ಯ ಸಂಗ್ರಹ ಮಾಡಿದ ಆರೋಪ: ಅಂಗಡಿ ಮಾಲಕನ್ನು ದೋಷಯುಕ್ತಗೊಳಿಸಿ ನ್ಯಾಯಾಲಯ ಆದೇಶ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನ ಆಚರಣೆ

Suddi Udaya

ಕೂಟ ಮಹಾ ಜಗತ್ತು ಬೆಳ್ತಂಗಡಿ ಅಂಗ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ಮತ್ತು ಕ್ಯಾಲೆಂಡರ್ ಬಿಡುಗಡೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ “ಸ್ವಾಗತಂ” ವಿಶೇಷ ಕಾರ್ಯಕ್ರಮ

Suddi Udaya

ಪುತ್ತೂರು ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ಹಾಗೂ ಕಾಮ್‍ಸ್ಕೋಪ್ ಇವರ ಸಿಎಸ್ಆರ್ ನಿಧಿಯ ಪ್ರಾಯೋಜಕತ್ವದಲ್ಲಿ ಬಳಂಜ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ, ಬ್ಯಾಗ್ ವಿತರಣೆ

Suddi Udaya
error: Content is protected !!