25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಂಗಳೂರು ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಗುರುವಾಯನಕೆರೆಯಲ್ಲಿ ನೂತನ ಶಾಖೆ ಉದ್ಘಾಟನೆ

ಗುರುವಾಯನಕೆರೆ : ಪಾಂಡುರಂಗ ಮಂದಿರ ಗುರುವಾಯನಕೆರೆ ಇಲ್ಲಿ ಪತಂಜಲಿ ಯೋಗ ಶಿಕ್ಷಣ ಸಮಿತಿಯ ವತಿಯಿಂದ 48 ದಿನಗಳ ಉಚಿತ ಯೋಗ ತರಬೇತಿ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಪತಂಜಲಿ ಯೋಗ ಶಿಕ್ಷಣ ಸಮಿತಿ ಮಂಗಳೂರು ಇದರ ಮಕ್ಕಳ ವಿಭಾಗದ ಪ್ರಮುಖ ಪ್ರಸಾದ್ ರವರು ದೀಪ ಬೆಳಗಿಸಿ ಬೌದ್ಧಿಕ್ ನೀಡಿ ಯೋಗದ ಮಹತ್ವ, ಯೋಗ ನಡೆದು ಬಂದ ದಾರಿ, ಪ್ರಸ್ತುತ ದಿನಗಳಲ್ಲಿ ಮಾನಸಿಕ ಹಾಗೂ ದೈಹಿಕ ಆರೋಗ್ಯಕ್ಕೆ ಯೋಗ ಶಿಕ್ಷಣದ ಅನಿವಾರ್ಯತೆಯ ಕುರಿತು ಬಹಳ ಮಹತ್ವದ ವಿಚಾರಗಳನ್ನು ತಿಳಿಸಿಕೊಟ್ಟರು.

ಮುಖ್ಯ ಅತಿಥಿಯಾಗಿ ನಾಗರಿಕ ಸೇವಾ ಟ್ರಸ್ಟೀ ಶ್ರೀಮತಿ ವಿದ್ಯಾ ನಾಯಕ್ ಮಾತನಾಡಿ ಸಂಸ್ಕಾರ, ಸಂಘಟನೆ ,ಸೇವೆಯಂತಹ ಶಿಕ್ಷಣವನ್ನು ನೀಡುವುದರೊಂದಿಗೆ ಉತ್ತಮ ನಾಗರಿಕರನ್ನು ರೂಪಿಸುವ ಕೆಲಸವನ್ನು ಸಮಿತಿ ಮಾಡುತ್ತಿದೆ ಎನ್ನುವುದರೊಂದಿಗೆ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ನಮ್ಮ ಮನೆ ಯೋಗ ಶಿಕ್ಷಕ ಭುಜಂಗ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶಾಖೆಯ ಮುನ್ನಲೆಗೆ ಶುಭಹಾರೈಸಿದರು. ಯೋಗ ಶಿಕ್ಷಣ ಸಮಿತಿಯ ಮಂಗಳೂರು ಪ್ರಾಂತ ಪ್ರಮುಖರಾದ ರವೀಶ , ಯೋಗ ಶಿಕ್ಷಣ ಸಮಿತಿಯ ಆನಂದ, ಮಾರ್ಗದರ್ಶಕರು ಯೋಗ ಶಿಕ್ಷಣ ಸಮಿತಿ ಉಪ್ಪಿನಂಗಡಿ ತಾಲುಕು , ಪ್ರದೀಪ ಯೋಗ ಶಿಕ್ಷಣ ಸಮಿತಿಯ ಶಿಕ್ಷಕರು ಸೂಕ್ತ ಮಾರ್ಗದರ್ಶನ ನೀಡಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರು ಸೇರಿ 105 ಮಂದಿ ಉಪಸ್ಥಿತರಿದ್ದರು. ನಮ್ಮ ಮನೆ ಶಾಖೆಯ ಶಿಕ್ಷಕ ಶಿವಣ್ಣ ಸ್ವಾಗತಿಸಿ, ಶಿಕ್ಷಕಿ ದಮಯಂತಿ ವಂದಿಸಿ, ಶಿಕ್ಷಕಿ ಭಾರತಿ ನಿರೂಪಿಸಿದರು. ನಮ್ಮ ಮನೆ ಯೋಗ ಬಂಧುಗಳಾದ ಪುರಂದರ, ಗಿರೀಶ ,ಅಶೋಕ, ಪ್ರಿಯ ,ಆಶಾ ಯೋಗದ ಅನುಭವಗಳನ್ನು ಹಂಚಿಕೊಂಡರು. ನಮ್ಮ ಮನೆ ಗುರುವಾಯನಕೆರೆ ಶಾಖೆಯ ಯೋಗ ಶಿಕ್ಷಕ ಬಂಧುಗಳು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

Related posts

ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿ ಅಲೆಮಾರಿ ಅಭಿವೃದ್ಧಿ ನಿಗಮದ ಜಿಲ್ಲಾ ನಾಮನಿರ್ದೇಶಿತ ಸದಸ್ಯರಾಗಿ ಜಯನಂದ್ ಪಿಲಿಕಳ ಆಯ್ಕೆ

Suddi Udaya

ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಕೋರ್ಟ್ ಗೆ ವರದಿ ಸಲ್ಲಿಕೆ: ಆರು ಮಂದಿ ಷಡ್ಯಂತ್ರ ಪ್ರಕರಣದಲ್ಲಿ ಭಾಗಿಯಾಗಿರುವುದು ಧೃಡ

Suddi Udaya

ನಾಲ್ಕೂರು ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಕರುಣಾಕರ ಹೆಗ್ಡೆ ಆಯ್ಕೆ

Suddi Udaya

ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಶ್ರೀ ಧ.ಮ. ಆಂ.ಮಾ. ಶಾಲೆ ಧರ್ಮಸ್ಥಳದ ಜಂಟಿ ಆಶ್ರಯದಲ್ಲಿ ಸ್ಕೌಟ್ಸ್ ಗೈಡ್ಸ್ ಕಬ್ ಬುಲ್ ಬುಲ್ ಪೂರ್ವ ಸಿದ್ಧತಾ ಪರೀಕ್ಷಾ ಶಿಬಿರ

Suddi Udaya

ಅಳದಂಗಡಿ: ಮೂಡಯಿತ್ತಿಲು ಎಸ್.ಸಿ ಕಾಲೋನಿಯಲ್ಲಿ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಬೆಳಾಲು ಪೆರಿಯಡ್ಕ ಶಾಲಾ ಅಭಿವೃದ್ದಿಗೆ ಸಕಲ ಸೌಲಭ್ಯಗಳನ್ನು ಒದಗಿಸಿದ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಂಚಾಲಕ ಮೋಹನ್ ಕುಮಾರ್ ಅವರಿಗೆ ಸನ್ಮಾನ

Suddi Udaya
error: Content is protected !!