March 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ದೀಪದ ಬತ್ತಿ ತಯಾರಿ ತರಬೇತಿಯ ಸಮಾರೋಪ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ-ಬೆಳ್ತಂಗಡಿ ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ಕೌಶಲ್ಯಾಭಿವೃದ್ಧಿ ಯೋಜನೆಯಡಿ ದೀಪದ ಬತ್ತಿ ತಯಾರಿಕಾ ತರಬೇತಿಯ ಸಮಾರೋಪ ಕಾರ‍್ಯಕ್ರಮದಲ್ಲಿ ತಾ.ಪಂ. ಇ. ಓ. ಭವಾನಿ ಶಂಕರ್ ಭಾಗವಹಿಸಿ ಅವಕಾಶಗಳು ಬಂದಾಗ ಅದನ್ನು ನಾವು ಬಳಸಿಕೊಳ್ಳುವುದು ನಮ್ಮ ಜಾಣತನ.

ಮಹಿಳೆಯರಿಗೆ ಸ್ವ ಉದ್ಯೋಗ ಮಾಡಲು ಹಲವಾರು ದಾರಿಗಳಿವೆ. ಆ ದಾರಿಗೆ ಸರಿಯಾದ ಯೋಜನೆ ಹಾಕಿಕೊಂಡಲ್ಲಿ ಮಹಿಳೆಯರು ದುಡಿಮೆ ಮಾಡಲು ಸಾಧ್ಯ ಎಂದರು. ಆ ನಂತರ ತರಬೇತಿ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ವಿತರಿಸಿ ಶುಭಹಾರೈಸಿದರು.

ಒಟ್ಟು 37 ಮಂದಿ ಭಾಗವಹಿಸಿ ತರಬೇತಿಯ ಸದುಪಯೋಗ ಪಡೆದುಕೊಂಡಿದ್ದಾರೆ. ಕಾರ‍್ಯಕ್ರಮದಲ್ಲಿ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಸೋಮನಾಥ್‌ ಕೆ, ತಾಲೂಕು ಪಂಚಾಯತ್‌ ತರಬೇತುದಾರರು ಸುಧಾಮಣಿ ಉಪಸ್ಥಿತರಿದ್ದರು. ತರಬೇತಿ ನೀಡಲು ಪುತ್ತೂರು ದೀಪದ ಬತ್ತಿ ತಯಾರಿಕಾ ಸಂಸ್ಥೆಯ ಮಾಲಕ ಪುನೀತ್‌ ಹಾಗೂ ಶಿಶಿರ್‌ ಇವರು ಮೆಷಿನ್‌ ಮೂಲಕ ಬತ್ತಿ ತಯಾರಿಕೆ ಮತ್ತು ಪ್ಯಾಕಿಂಗ್‌ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ತರಬೇತಿ ನೀಡಿದರು. ತರಬೇತಿ ಸಂಯೋಜಕರಾದ ಜಯಶ್ರೀ ಕಾರ‍್ಯಕ್ರಮ ನಿರ್ವಹಣೆ ಮಾಡಿ ಧನ್ಯವಾದ ನೀಡಿದರು.

Related posts

ಪಡಂಗಡಿ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ಆರೋಗ್ಯ ಮಾಹಿತಿ ಹಾಗೂ ತಪಾಸಣೆ

Suddi Udaya

ಶ್ರೀ ದುರ್ಗಾ ಟೆಕ್ಸ್ ಟೈಲ್ ನಲ್ಲಿ ಮಾನ್ಸೂನ್ ದರ ಕಡಿತ ಮಾರಾಟ,10% ರಿಂದ 50% ಡಿಸ್ಕೌಂಟ್ ಸೇಲ್

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ವೇದಾವತಿ ರವರಿಗೆ ಮಂಜೂರಾತಿ ಪತ್ರ ವಿತರಣೆ

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ವರದಿ ಸಾಲಿನಲ್ಲಿ ರೂ 137.95 ಕೋಟಿ ವ್ಯವಹಾರ, ರೂ. 53.26 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ 9.50 ಡಿವಿಡೆಂಟ್

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ, ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಶಾಸಕ ಸಿ ಎನ್ ಬಾಲಕೃಷ್ಣ ಭೇಟಿ

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇoಬರಿಗೆ “ರಾಷ್ಟ್ರೀಯ ಅಧ್ಯಕ್ಷರ ಭೇಟಿ

Suddi Udaya
error: Content is protected !!