July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ದೀಪದ ಬತ್ತಿ ತಯಾರಿ ತರಬೇತಿಯ ಸಮಾರೋಪ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ-ಬೆಳ್ತಂಗಡಿ ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ಕೌಶಲ್ಯಾಭಿವೃದ್ಧಿ ಯೋಜನೆಯಡಿ ದೀಪದ ಬತ್ತಿ ತಯಾರಿಕಾ ತರಬೇತಿಯ ಸಮಾರೋಪ ಕಾರ‍್ಯಕ್ರಮದಲ್ಲಿ ತಾ.ಪಂ. ಇ. ಓ. ಭವಾನಿ ಶಂಕರ್ ಭಾಗವಹಿಸಿ ಅವಕಾಶಗಳು ಬಂದಾಗ ಅದನ್ನು ನಾವು ಬಳಸಿಕೊಳ್ಳುವುದು ನಮ್ಮ ಜಾಣತನ.

ಮಹಿಳೆಯರಿಗೆ ಸ್ವ ಉದ್ಯೋಗ ಮಾಡಲು ಹಲವಾರು ದಾರಿಗಳಿವೆ. ಆ ದಾರಿಗೆ ಸರಿಯಾದ ಯೋಜನೆ ಹಾಕಿಕೊಂಡಲ್ಲಿ ಮಹಿಳೆಯರು ದುಡಿಮೆ ಮಾಡಲು ಸಾಧ್ಯ ಎಂದರು. ಆ ನಂತರ ತರಬೇತಿ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ವಿತರಿಸಿ ಶುಭಹಾರೈಸಿದರು.

ಒಟ್ಟು 37 ಮಂದಿ ಭಾಗವಹಿಸಿ ತರಬೇತಿಯ ಸದುಪಯೋಗ ಪಡೆದುಕೊಂಡಿದ್ದಾರೆ. ಕಾರ‍್ಯಕ್ರಮದಲ್ಲಿ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಸೋಮನಾಥ್‌ ಕೆ, ತಾಲೂಕು ಪಂಚಾಯತ್‌ ತರಬೇತುದಾರರು ಸುಧಾಮಣಿ ಉಪಸ್ಥಿತರಿದ್ದರು. ತರಬೇತಿ ನೀಡಲು ಪುತ್ತೂರು ದೀಪದ ಬತ್ತಿ ತಯಾರಿಕಾ ಸಂಸ್ಥೆಯ ಮಾಲಕ ಪುನೀತ್‌ ಹಾಗೂ ಶಿಶಿರ್‌ ಇವರು ಮೆಷಿನ್‌ ಮೂಲಕ ಬತ್ತಿ ತಯಾರಿಕೆ ಮತ್ತು ಪ್ಯಾಕಿಂಗ್‌ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ತರಬೇತಿ ನೀಡಿದರು. ತರಬೇತಿ ಸಂಯೋಜಕರಾದ ಜಯಶ್ರೀ ಕಾರ‍್ಯಕ್ರಮ ನಿರ್ವಹಣೆ ಮಾಡಿ ಧನ್ಯವಾದ ನೀಡಿದರು.

Related posts

ಬೆಳ್ತಂಗಡಿ ತಾಲೂಕು ಚುಟುಕು ಸಾಹಿತ್ಯ ಪರಿಷತ್ ಉದ್ಘಾಟನೆ

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ಹಾಗೂ ಜೆಸಿಐ ಮಂಜುಶ್ರೀ ಬೆಳ್ತಂಗಡಿ ಇವರ ಸಹಭಾಗಿತ್ವದಲ್ಲಿ ದೇಶಭಕ್ತಿ ಗೀತ ಗಾಯನ ಸ್ಪರ್ಧೆ

Suddi Udaya

ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷ ಸೇರಿ ರಕ್ಷಿತ್ ಶಿವರಾಂ ಕೈ ಬಲ ಪಡಿಸಿದ ಮಚ್ಚಿನ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ

Suddi Udaya

ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಆದೂರು ಪೇರಲ್ ನ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ದೇವರಿಗೆ ವಿಶೇಷ ಭಜನಾ ಕಾರ್ಯಕ್ರಮ

Suddi Udaya

ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯನಿರ್ವಾಹಣಾಧಿಕಾರಿ ಎಂ.ವೈ. ಹರೀಶ್ ಕುಮಾರ್ ಹೃದಯಾಘಾತದಿಂದ ನಿಧನ

Suddi Udaya

ವಕೀಲರ ಸಂಘದ ಪದಾಧಿಕಾರಿಗಳಿಂದ ರಕ್ಷಿತ್ ಶಿವರಾಮ್ ಭೇಟಿ

Suddi Udaya
error: Content is protected !!