25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದವಿಲ್ಪ್ರೇಡ್ ಫೆರ್ನಾಂಡಿಸ್ ಚಿಕಿತ್ಸೆ ಫಲಕಾರಿಯಾಗೆ ಮೃತ್ಯು

ಕಾಶಿಪಟ್ಣ: ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ, ಇಲ್ಲಿಯ ಕುಜಂಬೆ ಮನೆ ನಿವಾಸಿ ವಿಲ್ಪ್ರೇಡ್ ಫೆರ್ನಾಂಡಿಸ್ (51ವ) ಎಂಬವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಮಾ.18ರಂದು ವರದಿಯಾಗಿದೆ.
ಇವರು ಸುಮಾರು 3-4 ವರ್ಷಗಳಿಂದ ಮಾನಸಿಕ ಖಿನ್ನತೆಗೆ ಒಳಪಟ್ಟು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮಾ.೧೪ರಂದು ಬೆಳಿಗ್ಗೆ ತಮ್ಮ ಮನೆಯ ಸಮೀಪದ ತೋಟದಲ್ಲಿ ಲವಂಗ ಮರದ ರೆಂಬೆಗೆ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದು, ಕೂಡಲೇ ಅವರ ಸಹೋದರ ಕ್ಲಿಫರ್ಡ್ ಫೆರ್ನಾಂಡಿಸ್ ಹಾಗೂ ಕೆಲಸದಾಳು ಹರೀಶ್ ಶೆಟ್ಟಿ ಎಂಬವರು ಓಡಿ ಹೋಗಿ ಹಗ್ಗವನ್ನು ತುಂಡರಿಸಿ ಅವರನ್ನು ಉಪಚರಿಸಿ ಮೂಡಬಿದ್ರೆ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮಾ.18ರಂದು ಮೃತಪಟ್ಟರೆನ್ನಲಾಗಿದೆ. ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಪ್ರೋ. ಕೆ.ಯಸ್ ಭಗವಾನ್ ಅವರ ಹೇಳಿಕೆಗೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಖಂಡನೆ

Suddi Udaya

ಬೆಳ್ತಂಗಡಿ ಹಳೆಕೋಟೆ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ನೂತನ ಕಟ್ಟಡ, ಸಭಾವನದ ಉದ್ಘಾಟನೆಗೆ: ಆದಿಚುಂಚನಗಿರಿ ಸ್ವಾಮೀಜಿಗಳನ್ನು ಆಹ್ವಾನಿಸಿ ಅವರ ದಿವ್ಯಹಸ್ತದಿಂದಲೇ ಕಟ್ಟಡವನ್ನು ಉದ್ಘಾಟಿಸುವಂತೆ – ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಮುಖಂಡರ ಆಗ್ರಹ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಮೇಲಂತಬೆಟ್ಟು ವಲಯದಲ್ಲಿ ವಾತ್ಸಲ್ಯ ಮನೆ ನಿರ್ಮಾಣಕ್ಕೆ ಶಿಲಾನ್ಯಾಸ

Suddi Udaya

ಧರ್ಮಸ್ಥಳದ ಮುಖ್ಯದ್ವಾರದ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನ ಹರ್ಷಿತ ಆಯ್ಕೆ

Suddi Udaya

ಆರ್ ಟಿ ಓ ಫ್ರೆಂಡ್ಸ್ ಕಾರ್ಕಳ ಇವರ ಆಶ್ರಯದಲ್ಲಿ: ಆರ್ ಟಿ ಓ ಟ್ರೋಫಿ 2025 ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ

Suddi Udaya
error: Content is protected !!