28.9 C
ಪುತ್ತೂರು, ಬೆಳ್ತಂಗಡಿ
March 19, 2025
Uncategorized

ಉಜಿರೆಗೆ ಆಗಮಿಸಿದ ನಂದಿ ರಥಯಾತ್ರೆ

ಉಜಿರೆ: ಗೋ ಸೇವಾ ಗತಿವಿಧಿ ಕರ್ನಾಟಕ, ರಾಧಾ ಸುರಭಿ ಗೋಮಂದಿರ, ರಾಷ್ಟ್ರೀಯ ಗೋಸೇವಾ ಸಂಸ್ಥಾನ ಟ್ರಸ್ಟ್‌, ಇದರ ನಂದಿ ರಥಯಾತ್ರೆಯು. ಡಿ.31 ಪ್ರಾರಂಭಗೊಂಡು ರಾಜ್ಯಾದ್ಯ0ತ ನಡೆಯುತ್ತಿದ್ದು, ಮಾ.18 ರಂದು ಸಂಜೆ ಉಜಿರೆಗೆ ಪ್ರವೇಶಿಸಿದೆ.

ಬೆಳಾಲು ಕ್ರಾಸ್ ಬಳಿ ಭವ್ಯ ಸ್ವಾಗತ ಕೋರಲಾಯಿತು. ಹಿಂದೂ ಮುಖಂಡರು ಹಾಗೂ ಆರ್. ಎಸ್. ಎಸ್ ಮುಖಂಡರು, ಉದ್ಯಮಿಗಳು, ಸಾರ್ವಜನಿಕರು ಒಟ್ಟಾಗಿ ಸೇರಿ ನಂದಿ ರಥಕ್ಕೆ ಗೌರವಾರ್ಪಣೆ ಮಾಡಿ ಶುಭ ಹಾರೈಸಿದರು.

ನಂತರ ಚೆಂಡೆ, ಕುಣಿತ ಭಜನೆ ಮೂಲಕ ಭವ್ಯವಾದ ಮೆರವಣಿಗೆಯೊಂದಿಗೆ ಉಜಿರೆ ಜನಾರ್ದನ ದೇವಸ್ಥಾನದ ಮುಂಭಾಗ ಉಜಿರೆ ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡ್ವೆಟ್ನಾಯ ರವರು ಹಾಗೂ ತಾಲೂಕು ನಂದಿ ರಥಯಾತ್ರೆ ಸಂಚಾಲನ ಸಮಿತಿಯವರು ನಂದಿಗೆ ಹೂ ಹಾರ ಹಾಕಿ ಸ್ವಾಗತಿಸಿದರು. ಬಳಿಕ ಶಾರದ ಮಂಟಪದಲ್ಲಿ ವಿಷ್ಣು ಸಹಸ್ರನಾಮ ಪಾರಾಯಣ ನಡೆದು ಸಭಾ ಕಾರ್ಯಕ್ರಮ ನಡೆಯಿತು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡ್ವೆಟ್ನಾಯ ವಹಿಸಿದ್ದರು. ರಾಧಾ ಸುರಭಿ ಗೋಮಂದಿರ ರಾಷ್ಟ್ರೀಯ ಗೋಸೇವಾ ಸಂಸ್ಥಾನದ ಅಧ್ಯಕ್ಷ ಭಕ್ತಿ ಭೂಷಣ್ ದಾಸ್ ರವರು ದಿಕ್ಸುಚಿ ಭಾಷಣ ನೆರವೇರಿಸಿದರು.

ವೇದಿಕೆಯಲ್ಲಿ ಕಳಂಜ ನಂದಗೋಕುಲ ಸ್ವಾಮಿಶ್ರೀ ವಿವೇಕಾನಂದ ಸೇವಾಶ್ರಮದ ಅಧ್ಯಕ್ಷ ಡಾ| ಎಂ.ಎಂ. ದಯಾಕರ್,ನಂದಿ ರಥಯಾತ್ರೆಗೆ ಚಾಲನೆ ನೀಡಿದಂತಹ ದೇಸೀ ಗೋಸಂರಕ್ಷಕರಮೇಶ್ ಎಸ್. ಬೆಳ್ತಂಗಡಿ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿಭಾಗ ಸಹ ಕಾರ್ಯವಾಹ ಸುಭಾಷ್ ಕಳಂಜ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಉದ್ಯಮಿಗಳಾದ ಪದ್ಮನಾಭ ಶೆಟ್ಟಿಗಾರ್, ರಾಮಚಂದ್ರ ಶೆಟ್ಟಿ, ಪ್ರಶಾಂತ್ ಜೈನ್, ಭರತ್, ಉಜಿರೆ ಗ್ರಾ.ಪಂ. ಉಪಾಧ್ಯಕ್ಷ ರವಿಕುಮಾರ್ ಬರಮೇಲು ವರ್ತಕರ ಸಂಘದ ಅರವಿಂದ ಕಾರಂತ್, ರವೀಂದ್ರ ಶೆಟ್ಟಿ ಬಳಂಜ, ಯಕ್ಷಗಾನ ಭಾಗವತ ಮಹೇಶ್ ಕನ್ಯಾಡಿ, ಶಶಿಧರ ಕಲ್ಮ0ಜ, ಸೋಮಶೇಖರ್ ಶೆಟ್ಟಿ, ವಿಶ್ವಹಿಂದೂ ಪರಿಷತ್, ಭಜರಂಗದಳದ ಕಾರ್ಯಕರ್ತರು, ಇನ್ನಿತರರು ಉಪಸ್ಥಿತರಿದ್ದರು.

ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾಕಿರಣ್ ಕಾರಂತ್ ಸ್ವಾಗತಿಸಿದರು. ವಿಶ್ವಹಿಂದೂ ಪರಿಷತ್ ಜಿಲ್ಲಾ ಕಾರ್ಯಾಧ್ಯಕ್ಷ ನವೀನ್ ನೆರಿಯ ನಿರೂಪಿಸಿದರು.

Related posts

ಉಜಿರೆ ಗ್ರಾ.ಪಂ. ಗೆ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಭೇಟಿ

Suddi Udaya

ಅಬ್ದುಲ್ ಲತೀಫ್ ಶಿರ್ಲಾಲ್ ನಿಧನ

Suddi Udaya

ಕೇಂದ್ರ ಸರ್ಕಾರದ ಪಿಎಂ ಜನ್ ಮನ್ ಕಾರ್ಯಕ್ರಮದಡಿ ನಿರ್ಮಾಣಗೊಳ್ಳಲಿರುವ ವಸತಿ ಶಾಲೆಯ ಆವರಣ: ಶಾಸಕ ಹರೀಶ್ ಪೂಂಜರಿಂದ ಸ್ಥಳ ಪರಿಶೀಲನೆ

Suddi Udaya

ಗುರುವಾಯನಕೆರೆ ನವಶಕ್ತಿಕ್ರೀಡಾಂಗಣದಲ್ಲಿ ಆದ್ದೂರಿಯಾಗಿ ನಡೆದ ಐತಿಹಾಸಿಕ ನಾಟಕ “ಛತ್ರಪತಿ ಶಿವಾಜಿ”

Suddi Udaya

ಅಂಡಿಂಜೆ ಗ್ರಾ.ಪಂ. ವತಿಯಿಂದ ಪ.ಜಾತಿ, ಪ. ಪಂಗಡದ ಕುಟುಂಬಗಳಿಗೆ ಹಾಗೂ ವಿಶೇಷ ಚೇತನರಿಗೆ ತಲಾ ಎರಡರಂತೆ ಚಯರ್ ವಿತರಣೆ

Suddi Udaya

ದೇಶದ ಪ್ರಧಾನಿ ನರೇಂದ್ರ ಮೋದಿಯವರಿಗೆ ಮದುವೆ ಆಮಂತ್ರಣ ಕಳುಹಿಸಿದ ವರ: ವೈವಾಹಿಕ ಬದುಕಿಗೆ ಕಾಲಿಟ್ಟ ಸುಬ್ರಹ್ಮಣ್ಯ ಆಚಾರ್ಯ – ಸವಿತಾ ದಂಪತಿಗೆ ಪ್ರಧಾನಿ ಕಾರ್ಯಲಯದಿಂದ ತಲುಪಿತು ಶುಭಾಶಯ ಪತ್ರ

Suddi Udaya
error: Content is protected !!